ನವದೆಹಲಿ: ಟಿಬೆಟಿಯನ್ ಧರ್ಮಗುರು ದಲೈಲಾಮಾ ಬಾಲಕನೊಬ್ಬನಿಗೆ ಮುತ್ತಿಟ್ಟು ತಮ್ಮ ನಾಲಿಗೆ ಚೀಪುವಂತೆ ಕೇಳಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ದಲೈಲಾಮಾ ಕ್ಷಮೆ ಕೇಳಿದ್ದಾರೆ.
ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಧರ್ಮಗುರುವಿಗೆ ಗೌರವ ಸಲ್ಲಿಸಲು ಬಂದಿದ್ದ ಬಾಲಕನ ತುಟಿಗಳನ್ನು ದಲೈಲಾಮಾ ಚುಂಬಿಸಿದ್ದರು. ನಂತರ ತಮ್ಮ ನಾಲಿಗೆಯನ್ನು ಹೊರ ಚಾಚಿ ಅದನ್ನು ಚೀಪುವಂತೆ ಬಾಲಕನಿಗೆ ಹೇಳಿದ್ದರು. ಈ ವಿಡಿಯೊ ವ್ಯಾಪಕವಾಗಿ ಹರಿದಾಡುತ್ತಿದ್ದಂತೆ, ಸಾಮಾಜಿಕ ಜಾಲತಾಣ ಬಳಕೆದಾರರಿಂದ ಆಕ್ರೋಶದ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಈ ಘಟನೆ ಬಗ್ಗೆ ದಲೈಲಾಮಾ ಕ್ಷಮೆ ಕೋರಿ ಟ್ವೀಟ್ ಮಾಡಿದ್ದಾರೆ.
ಬಾಲಕ ಮತ್ತು ಅವನ ಕುಟುಂಬಕ್ಕೆ ಉಂಟಾದ ನೋವಿಗೆ ವಿಷಾದಿಸುತ್ತೇನೆ ಎಂದು ಹೇಳಿದ್ದಾರೆ. ಘಟನೆ ಬಗ್ಗೆ ಅವರ ಕಚೇರಿಯು ಟ್ವೀಟ್ ಮಾಡಿ ಹೇಳಿಕೆ ನೀಡಿದ್ದು, ‘ದಲೈಲಾಮಾ ಅವರು ಮುಗ್ಧ ಮತ್ತು ತಮಾಷೆಯ ರೀತಿಯಲ್ಲಿ ಭೇಟಿಯಾಗುವ ಜನರನ್ನು ಆಗಾಗ್ಗೆ ಕೀಟಲೆ ಮಾಡುತ್ತಿರುತ್ತಾರೆ‘ ಎಂದು ಹೇಳಿದೆ.
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…
ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ…
ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…
ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…