ನವದೆಹಲಿ: ಟಿಬೆಟಿಯನ್ ಧರ್ಮಗುರು ದಲೈಲಾಮಾ ಬಾಲಕನೊಬ್ಬನಿಗೆ ಮುತ್ತಿಟ್ಟು ತಮ್ಮ ನಾಲಿಗೆ ಚೀಪುವಂತೆ ಕೇಳಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ದಲೈಲಾಮಾ ಕ್ಷಮೆ ಕೇಳಿದ್ದಾರೆ.
ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಧರ್ಮಗುರುವಿಗೆ ಗೌರವ ಸಲ್ಲಿಸಲು ಬಂದಿದ್ದ ಬಾಲಕನ ತುಟಿಗಳನ್ನು ದಲೈಲಾಮಾ ಚುಂಬಿಸಿದ್ದರು. ನಂತರ ತಮ್ಮ ನಾಲಿಗೆಯನ್ನು ಹೊರ ಚಾಚಿ ಅದನ್ನು ಚೀಪುವಂತೆ ಬಾಲಕನಿಗೆ ಹೇಳಿದ್ದರು. ಈ ವಿಡಿಯೊ ವ್ಯಾಪಕವಾಗಿ ಹರಿದಾಡುತ್ತಿದ್ದಂತೆ, ಸಾಮಾಜಿಕ ಜಾಲತಾಣ ಬಳಕೆದಾರರಿಂದ ಆಕ್ರೋಶದ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಈ ಘಟನೆ ಬಗ್ಗೆ ದಲೈಲಾಮಾ ಕ್ಷಮೆ ಕೋರಿ ಟ್ವೀಟ್ ಮಾಡಿದ್ದಾರೆ.
ಬಾಲಕ ಮತ್ತು ಅವನ ಕುಟುಂಬಕ್ಕೆ ಉಂಟಾದ ನೋವಿಗೆ ವಿಷಾದಿಸುತ್ತೇನೆ ಎಂದು ಹೇಳಿದ್ದಾರೆ. ಘಟನೆ ಬಗ್ಗೆ ಅವರ ಕಚೇರಿಯು ಟ್ವೀಟ್ ಮಾಡಿ ಹೇಳಿಕೆ ನೀಡಿದ್ದು, ‘ದಲೈಲಾಮಾ ಅವರು ಮುಗ್ಧ ಮತ್ತು ತಮಾಷೆಯ ರೀತಿಯಲ್ಲಿ ಭೇಟಿಯಾಗುವ ಜನರನ್ನು ಆಗಾಗ್ಗೆ ಕೀಟಲೆ ಮಾಡುತ್ತಿರುತ್ತಾರೆ‘ ಎಂದು ಹೇಳಿದೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…