BREAKING NEWS

‘ವಿಘ್ನಸಂತೋಷಿ’ಗಳು : ಲಿಂಗಾಯತ ವಿವಾದದ ಕುರಿತು ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಬಿಜೆಪಿಯೊಳಗೆ ಲಿಂಗಾಯತ ನಾಯಕರನ್ನು ಮುಗಿಸುವ ಸಂಚು ನಡೆಯುತ್ತಿದೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ”ರಾಜ್ಯ ಬಿಜೆಪಿಯಲ್ಲಿರುವ ಲಿಂಗಾಯತ ಸಮುದಾಯದ ನಾಯಕರನ್ನು ನೋಡಿದಾಗ ‘ ಹಾವಿನ ಹೆಡೆಯ ಮೇಲಿನ ಕಪ್ಪೆ ಹಾರುವ ನೊಣಕ್ಕೆ ಆಶಿಸಿದಂತೆ… ಎಂಬ ಬಸವಣ್ಣನವರ ವಚನ ನೆನಪಾಗುತ್ತಿದೆ. ರಾಜಕೀಯವಾಗಿ ತಮ್ಮನ್ನು ಮುಗಿಸಲು ಆರ್ ಎಸ್ ಎಸ್ ‘ವಿಘ್ನಸಂತೋಷಿ’ಗಳು ಮಾಡುತ್ತಿರುವ ಸಂಚನ್ನು ಅರಿಯದ ಬಿಜೆಪಿಯ ಲಿಂಗಾಯತ ನಾಯಕರು, ಕಾಂಗ್ರೆಸ್ ಪಕ್ಷ ಲಿಂಗಾಯತ ವಿರೋಧಿ ಎಂಬ ಸುಳ್ಳು ಆರೋಪ ಮಾಡುತ್ತಾ ಕಾಲ ಕಳೆಯುತ್ತಿರುವುದು ವಿಷಾದನೀಯ. ರಾಜ್ಯದಲ್ಲಿ ನೆಲೆಯೇ ಇಲ್ಲದಿದ್ದ ಬಿಜೆಪಿಯನ್ನು ಅಧಿಕಾರದ ಪೀಠದಲ್ಲಿ ತಂದು ಕುಳ್ಳಿರಿಸಿದ ಲಿಂಗಾಯತ ನಾಯಕ ಬಿ.ಎಸ್.ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದ್ದು ಆರ್ ಎಸ್ ಎಸ್ ನ ‘ವಿಘ್ನ ಸಂತೋಷಿ’ಗಳೇ ಹೊರತು, ಕಾಂಗ್ರೆಸ್ ಪಕ್ಷ ಅಲ್ಲ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

”ಜಗದೀಶ್ ಶೆಟ್ಟರ ರಾಜಕೀಯ ಜೀವನವನ್ನು ಮುಗಿಸುವ ಹುನ್ನಾರದ ರೂವಾರಿಗಳು ಕೂಡಾ ಇದೇ ‘ವಿಘ್ನ ಸಂತೋಷಿ’ ಗಳು. ಕಾಂಗ್ರೆಸ್ ಅಲ್ಲ. ಗೆಲ್ಲುವ ಅವಕಾಶವೇ ಇಲ್ಲದ ವರುಣಾ ಕ್ಷೇತ್ರದಲ್ಲಿ ಒಲ್ಲೆನೆಂದರೂ ಬಲಾತ್ಕಾರವಾಗಿ ವಿ.ಸೋಮಣ್ಣ ಎಂಬ ಲಿಂಗಾಯತ ನಾಯಕನನ್ನು ಅಭ್ಯರ್ಥಿ ಮಾಡಿದ್ದು ಕೂಡಾ ಇದೇ ಆರ್ ಎಸ್ ಎಸ್ ‘ವಿಘ್ನ ಸಂತೋಷಿ’ಗಳು.” ಎಂದು ಪರೋಕ್ಷವಾಗಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಕಿಡಿ ಕಾರಿದ್ದಾರೆ.

ಲಕ್ಷ್ಮಣ ಸವದಿ, ಸೊಗಡು ಶಿವಣ್ಣ, ಸಂಜಯ್ ಪಾಟೀಲ್ ಮೊದಲಾದ ಲಿಂಗಾಯತ ನಾಯಕರಿಗೆ ಟಿಕೆಟ್ ನಿರಾಕರಿಸಿ ಅವರನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ್ದು ಕೂಡಾ ಇದೇ ಆರ್ ಎಸ್.ಎಸ್ ‘ವಿಘ್ನ ಸಂತೋಷಿ’ಗಳು. ಈಗ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವ ಹೊಣೆಯನ್ನು ಕೂಡಾ ಬಿ.ಎಸ್.ಯಡಿಯೂರಪ್ಪನವರ ಮೇಲೆ ಹೊರಿಸಲಾಗಿದೆ. ಇವರಲ್ಲಿ ಯಾರೂ ಸೋತರೂ ಒಬ್ಬ ಲಿಂಗಾಯತ ನಾಯಕರು ಸೋತ ಹಾಗೆ ಅಲ್ಲವೇ? ಆದರೆ, ಬಿಜೆಪಿಯಲ್ಲಿರುವ ಲಿಂಗಾಯತ ನಾಯಕರು ತಮ್ಮ ನಿಜವಾದ ಶತ್ರುಗಳು ಯಾರೆಂದು ಅರ್ಥಮಾಡಿಕೊಳ್ಳದೆ, ವೃಥಾ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ. ಇದು ಕೂಡಾ ಆರ್ ಎಸ್ ಎಸ್ ನ ‘ವಿಘ್ನ ಸಂತೋಷಿ’ಗಳ ಹುನ್ನಾರವೇ ಆಗಿದೆ ಎಂದು ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ.

ಬದಲಾವಣೆಯ ಹೆಸರಲ್ಲಿ ಬಿಜೆಪಿಯೊಳಗಿನ ಆರ್ ಎಸ್ ಎಸ್ ‘ವಿಘ್ನ ಸಂತೋಷಿ’ಗಳು ಮಾಡುತ್ತಿರುವ ಈ ಎಲ್ಲ ಪ್ರಯೋಗಗಳು ಅಂತಿಮವಾಗಿ ಪಕ್ಷದೊಳಗಿನ ಹಿರಿಯ ಮತ್ತು ಪ್ರಭಾವಿ ಲಿಂಗಾಯತ ನಾಯಕರ ತಲೆದಂಡ ತೆಗೆದುಕೊಳ್ಳುವ ರಾಜಕೀಯ ಕುತಂತ್ರವೇ ಆಗಿದೆ ಎನ್ನುವುದನ್ನು ಬಿಜೆಪಿಯೊಳಗಿನ ಲಿಂಗಾಯತ ನಾಯಕರು ಮತ್ತು ಒಟ್ಟು ಲಿಂಗಾಯತ ಸಮುದಾಯ ಅರಿತುಕೊಳ್ಳಬೇಕಾಗಿದೆ. ಈಗಲೂ ಕಾಲ ಮಿಂಚಿಲ್ಲ, ಬಿಜೆಪಿಯೊಳಗಿನ ಲಿಂಗಾಯತ ನಾಯಕರು ಕಲ್ಪಿತ ಶತ್ರುವಿನ ಮೇಲೆ ಆರೋಪ ಮಾಡುವುದನ್ನು ನಿಲ್ಲಿಸಿ ತಮ್ಮ ನಿಜವಾದ ಶತ್ರುಗಳನ್ನು ಗುರುತಿಸಿ ಹೋರಾಟ ನಡೆಸಬೇಕೆಂದು ಮನವಿ ಮಾಡುತ್ತೇನೆ ಎಂದು ಸರಣಿ ಟ್ವೀಟ್ ಮಾಡಿದ್ದೂ ಮಾತ್ರವಲ್ಲದೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

andolanait

Recent Posts

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

3 hours ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

3 hours ago

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…

3 hours ago

ನಗರಸಭೆಗೆ ಗೆಜ್ಜಲಗೆರೆ-ಗೊರವನಹಳ್ಳಿ ಸೇರ್ಪಡೆಗೆ ವಿರೋಧ

ಹೇಮಂತ್‌ ಕುಮಾರ್‌  ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…

3 hours ago

ಮಧ್ಯಾಹ್ನದ ಬಿಸಿಯೂಟಕ್ಕೂ ತಟ್ಟಲಿದೆ ಗ್ಯಾಸ್ ಬಿಸಿ?

ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…

3 hours ago