BREAKING NEWS

‘ವಿಘ್ನಸಂತೋಷಿ’ಗಳು : ಲಿಂಗಾಯತ ವಿವಾದದ ಕುರಿತು ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಬಿಜೆಪಿಯೊಳಗೆ ಲಿಂಗಾಯತ ನಾಯಕರನ್ನು ಮುಗಿಸುವ ಸಂಚು ನಡೆಯುತ್ತಿದೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ”ರಾಜ್ಯ ಬಿಜೆಪಿಯಲ್ಲಿರುವ ಲಿಂಗಾಯತ ಸಮುದಾಯದ ನಾಯಕರನ್ನು ನೋಡಿದಾಗ ‘ ಹಾವಿನ ಹೆಡೆಯ ಮೇಲಿನ ಕಪ್ಪೆ ಹಾರುವ ನೊಣಕ್ಕೆ ಆಶಿಸಿದಂತೆ… ಎಂಬ ಬಸವಣ್ಣನವರ ವಚನ ನೆನಪಾಗುತ್ತಿದೆ. ರಾಜಕೀಯವಾಗಿ ತಮ್ಮನ್ನು ಮುಗಿಸಲು ಆರ್ ಎಸ್ ಎಸ್ ‘ವಿಘ್ನಸಂತೋಷಿ’ಗಳು ಮಾಡುತ್ತಿರುವ ಸಂಚನ್ನು ಅರಿಯದ ಬಿಜೆಪಿಯ ಲಿಂಗಾಯತ ನಾಯಕರು, ಕಾಂಗ್ರೆಸ್ ಪಕ್ಷ ಲಿಂಗಾಯತ ವಿರೋಧಿ ಎಂಬ ಸುಳ್ಳು ಆರೋಪ ಮಾಡುತ್ತಾ ಕಾಲ ಕಳೆಯುತ್ತಿರುವುದು ವಿಷಾದನೀಯ. ರಾಜ್ಯದಲ್ಲಿ ನೆಲೆಯೇ ಇಲ್ಲದಿದ್ದ ಬಿಜೆಪಿಯನ್ನು ಅಧಿಕಾರದ ಪೀಠದಲ್ಲಿ ತಂದು ಕುಳ್ಳಿರಿಸಿದ ಲಿಂಗಾಯತ ನಾಯಕ ಬಿ.ಎಸ್.ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದ್ದು ಆರ್ ಎಸ್ ಎಸ್ ನ ‘ವಿಘ್ನ ಸಂತೋಷಿ’ಗಳೇ ಹೊರತು, ಕಾಂಗ್ರೆಸ್ ಪಕ್ಷ ಅಲ್ಲ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

”ಜಗದೀಶ್ ಶೆಟ್ಟರ ರಾಜಕೀಯ ಜೀವನವನ್ನು ಮುಗಿಸುವ ಹುನ್ನಾರದ ರೂವಾರಿಗಳು ಕೂಡಾ ಇದೇ ‘ವಿಘ್ನ ಸಂತೋಷಿ’ ಗಳು. ಕಾಂಗ್ರೆಸ್ ಅಲ್ಲ. ಗೆಲ್ಲುವ ಅವಕಾಶವೇ ಇಲ್ಲದ ವರುಣಾ ಕ್ಷೇತ್ರದಲ್ಲಿ ಒಲ್ಲೆನೆಂದರೂ ಬಲಾತ್ಕಾರವಾಗಿ ವಿ.ಸೋಮಣ್ಣ ಎಂಬ ಲಿಂಗಾಯತ ನಾಯಕನನ್ನು ಅಭ್ಯರ್ಥಿ ಮಾಡಿದ್ದು ಕೂಡಾ ಇದೇ ಆರ್ ಎಸ್ ಎಸ್ ‘ವಿಘ್ನ ಸಂತೋಷಿ’ಗಳು.” ಎಂದು ಪರೋಕ್ಷವಾಗಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಕಿಡಿ ಕಾರಿದ್ದಾರೆ.

ಲಕ್ಷ್ಮಣ ಸವದಿ, ಸೊಗಡು ಶಿವಣ್ಣ, ಸಂಜಯ್ ಪಾಟೀಲ್ ಮೊದಲಾದ ಲಿಂಗಾಯತ ನಾಯಕರಿಗೆ ಟಿಕೆಟ್ ನಿರಾಕರಿಸಿ ಅವರನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ್ದು ಕೂಡಾ ಇದೇ ಆರ್ ಎಸ್.ಎಸ್ ‘ವಿಘ್ನ ಸಂತೋಷಿ’ಗಳು. ಈಗ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವ ಹೊಣೆಯನ್ನು ಕೂಡಾ ಬಿ.ಎಸ್.ಯಡಿಯೂರಪ್ಪನವರ ಮೇಲೆ ಹೊರಿಸಲಾಗಿದೆ. ಇವರಲ್ಲಿ ಯಾರೂ ಸೋತರೂ ಒಬ್ಬ ಲಿಂಗಾಯತ ನಾಯಕರು ಸೋತ ಹಾಗೆ ಅಲ್ಲವೇ? ಆದರೆ, ಬಿಜೆಪಿಯಲ್ಲಿರುವ ಲಿಂಗಾಯತ ನಾಯಕರು ತಮ್ಮ ನಿಜವಾದ ಶತ್ರುಗಳು ಯಾರೆಂದು ಅರ್ಥಮಾಡಿಕೊಳ್ಳದೆ, ವೃಥಾ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ. ಇದು ಕೂಡಾ ಆರ್ ಎಸ್ ಎಸ್ ನ ‘ವಿಘ್ನ ಸಂತೋಷಿ’ಗಳ ಹುನ್ನಾರವೇ ಆಗಿದೆ ಎಂದು ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ.

ಬದಲಾವಣೆಯ ಹೆಸರಲ್ಲಿ ಬಿಜೆಪಿಯೊಳಗಿನ ಆರ್ ಎಸ್ ಎಸ್ ‘ವಿಘ್ನ ಸಂತೋಷಿ’ಗಳು ಮಾಡುತ್ತಿರುವ ಈ ಎಲ್ಲ ಪ್ರಯೋಗಗಳು ಅಂತಿಮವಾಗಿ ಪಕ್ಷದೊಳಗಿನ ಹಿರಿಯ ಮತ್ತು ಪ್ರಭಾವಿ ಲಿಂಗಾಯತ ನಾಯಕರ ತಲೆದಂಡ ತೆಗೆದುಕೊಳ್ಳುವ ರಾಜಕೀಯ ಕುತಂತ್ರವೇ ಆಗಿದೆ ಎನ್ನುವುದನ್ನು ಬಿಜೆಪಿಯೊಳಗಿನ ಲಿಂಗಾಯತ ನಾಯಕರು ಮತ್ತು ಒಟ್ಟು ಲಿಂಗಾಯತ ಸಮುದಾಯ ಅರಿತುಕೊಳ್ಳಬೇಕಾಗಿದೆ. ಈಗಲೂ ಕಾಲ ಮಿಂಚಿಲ್ಲ, ಬಿಜೆಪಿಯೊಳಗಿನ ಲಿಂಗಾಯತ ನಾಯಕರು ಕಲ್ಪಿತ ಶತ್ರುವಿನ ಮೇಲೆ ಆರೋಪ ಮಾಡುವುದನ್ನು ನಿಲ್ಲಿಸಿ ತಮ್ಮ ನಿಜವಾದ ಶತ್ರುಗಳನ್ನು ಗುರುತಿಸಿ ಹೋರಾಟ ನಡೆಸಬೇಕೆಂದು ಮನವಿ ಮಾಡುತ್ತೇನೆ ಎಂದು ಸರಣಿ ಟ್ವೀಟ್ ಮಾಡಿದ್ದೂ ಮಾತ್ರವಲ್ಲದೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

andolanait

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

4 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

6 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

12 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

12 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

17 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

17 hours ago