ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿನ ಗ್ರೂಪ್ ಹಂತದಲ್ಲಿ ಇಲ್ಲಿಯವರೆಗೂ 4 ಪಂದ್ಯಗಳಲ್ಲಿ ಕಣಕ್ಕಿಳಿದು ಎಲ್ಲಾ ಪಂದ್ಯಗಳಲ್ಲಿಯೂ ಗೆಲುವು ಸಾಧಸಿರುವ ಕರ್ನಾಟಕ ತಂಡ ಇಂದು ( ಡಿಸೆಂಬರ್ 1 ) ನಡೆಯುತ್ತಿರುವ ಐದನೇ ಪಂದ್ಯದಲ್ಲಿ ಚಂಢೀಗಡ್ ವಿರುದ್ಧ ಸೆಣಸಾಡುತ್ತಿದೆ.
ವಲ್ಲಭ್ ವಿದ್ಯಾನಗರ್ನ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ದೇವದತ್ ಪಡಿಕ್ಕಲ್ ಅಬ್ಬರದ ಶತಕದ ನೆರವಿನಿಂದ 50 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 299 ರನ್ ಕಲೆಹಾಕಿ ಎದುರಾಳಿ ಚಂಡೀಗಢ್ ತಂಡಕ್ಕೆ ಗೆಲ್ಲಲು 300 ರನ್ಗಳ ಸವಾಲಿನ ಗುರಿ ನೀಡಿದೆ.
ಕರ್ನಾಟಕದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಆರ್ ಸಮರ್ಥ್ 5 ರನ್ ಗಳಿಸಿದರೆ, ನಾಯಕ ಮಯಾಂಕ್ ಅಗರ್ವಾಲ್ 19 ರನ್ ಗಳಿಸಿದರು. ಆರಂಭಿಕ ಆಘಾತ ಅನುಭವಿಸಿದ್ದ ತಂಡಕ್ಕೆ ದೇವದತ್ ಪಡಿಕ್ಕಲ್ 103 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 9 ಬೌಂಡರಿ ಬಾರಿಸುವ ಮೂಲಕ 114 ರನ್ ಗಳಿಸಿದರು. ಇನ್ನುಳಿದಂತೆ ಮನೀಶ್ ಪಾಂಡೆ ಅಜೇಯ 53, ಜಗದೀಶ ಸುಚಿತ್ ಶೂನ್ಯ, ಕೃಷ್ಣಪ್ಪ ಗೌತಮ್ 1 ಹಾಗೂ ಶರತ್ ಬಿ ಆರ್ ಅಜೇಯ 1 ರನ್ ಗಳಿಸಿದರು.
ಚಂಡೀಗಢದ ಪರ ಸಂದೀಪ್ ಶರ್ಮಾ ಹಾಗೂ ಮನ್ದೀಪ್ ಸಿಂಗ್ ತಲಾ ಎರಡು ವಿಕೆಟ್ ಪಡೆದರೆ, ಮುರುಗನ್ ಅಶ್ವಿನ್ ಹಾಗೂ ಅರ್ಸ್ಲಾನ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…