BREAKING NEWS

Vijay Hazare Trophy 2023: ಮತ್ತೆ ಶತಕ ಸಿಡಿಸಿದ ಪಡಿಕ್ಕಲ್‌; ಚಂಢೀಗಡಕ್ಕೆ ಸವಾಲಿನ ಗುರಿ ನೀಡಿದ ಕರ್ನಾಟಕ

ಪ್ರಸ್ತುತ ನಡೆಯುತ್ತಿರುವ ವಿಜಯ್‌ ಹಜಾರೆ ಟ್ರೋಫಿಯಲ್ಲಿನ ಗ್ರೂಪ್‌ ಹಂತದಲ್ಲಿ ಇಲ್ಲಿಯವರೆಗೂ 4 ಪಂದ್ಯಗಳಲ್ಲಿ ಕಣಕ್ಕಿಳಿದು ಎಲ್ಲಾ ಪಂದ್ಯಗಳಲ್ಲಿಯೂ ಗೆಲುವು ಸಾಧಸಿರುವ ಕರ್ನಾಟಕ ತಂಡ ಇಂದು ( ಡಿಸೆಂಬರ್‌ 1 ) ನಡೆಯುತ್ತಿರುವ ಐದನೇ ಪಂದ್ಯದಲ್ಲಿ ಚಂಢೀಗಡ್‌ ವಿರುದ್ಧ ಸೆಣಸಾಡುತ್ತಿದೆ.

ವಲ್ಲಭ್‌ ವಿದ್ಯಾನಗರ್‌ನ ಲಾಲ್‌ ಬಹದ್ದೂರ್‌ ಶಾಸ್ತ್ರಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ದೇವದತ್ ಪಡಿಕ್ಕಲ್‌ ಅಬ್ಬರದ ಶತಕದ ನೆರವಿನಿಂದ 50 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 299 ರನ್‌ ಕಲೆಹಾಕಿ ಎದುರಾಳಿ ಚಂಡೀಗಢ್‌ ತಂಡಕ್ಕೆ ಗೆಲ್ಲಲು 300 ರನ್‌ಗಳ ಸವಾಲಿನ ಗುರಿ ನೀಡಿದೆ.

ಕರ್ನಾಟಕದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಆರ್‌ ಸಮರ್ಥ್‌ 5 ರನ್‌ ಗಳಿಸಿದರೆ, ನಾಯಕ ಮಯಾಂಕ್‌ ಅಗರ್ವಾಲ್‌ 19 ರನ್‌ ಗಳಿಸಿದರು. ಆರಂಭಿಕ ಆಘಾತ ಅನುಭವಿಸಿದ್ದ ತಂಡಕ್ಕೆ ದೇವದತ್‌ ಪಡಿಕ್ಕಲ್‌ 103 ಎಸೆತಗಳಲ್ಲಿ 6 ಸಿಕ್ಸರ್‌ ಹಾಗೂ 9 ಬೌಂಡರಿ ಬಾರಿಸುವ ಮೂಲಕ 114 ರನ್‌ ಗಳಿಸಿದರು. ಇನ್ನುಳಿದಂತೆ ಮನೀಶ್‌ ಪಾಂಡೆ ಅಜೇಯ 53, ಜಗದೀಶ ಸುಚಿತ್‌ ಶೂನ್ಯ, ಕೃಷ್ಣಪ್ಪ ಗೌತಮ್‌ 1 ಹಾಗೂ ಶರತ್‌ ಬಿ ಆರ್‌ ಅಜೇಯ 1 ರನ್‌ ಗಳಿಸಿದರು.

ಚಂಡೀಗಢದ ಪರ ಸಂದೀಪ್‌ ಶರ್ಮಾ ಹಾಗೂ ಮನ್‌ದೀಪ್‌ ಸಿಂಗ್‌ ತಲಾ ಎರಡು ವಿಕೆಟ್‌ ಪಡೆದರೆ, ಮುರುಗನ್‌ ಅಶ್ವಿನ್‌ ಹಾಗೂ ಅರ್ಸ್ಲಾನ್‌ ಖಾನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago