BREAKING NEWS

ವಿಜಯ್‌ ಹಜಾರೆ ಟ್ರೋಫಿ: ಗೆಲುವಿನ ಶುಭಾರಂಭ ಮಾಡಿದ ಕರ್ನಾಟಕ; ಜಮ್ಮು ವಿರುದ್ಧ 222 ರನ್‌ ಜಯ

ಇಂದಿನಿಂದ ( ನವೆಂಬರ್‌ 23 ) ವಿಜಯ್‌ ಹಜಾರೆ ಟ್ರೋಫಿ ಆರಂಭವಾಗಿದ್ದು, ಗ್ರೂಪ್‌ ಹಂತದ ಮೊದಲ ಸುತ್ತಿನ ಪಂದ್ಯಗಳು ನಡೆದಿವೆ. ಕರ್ನಾಟಕ ತನ್ನ ಮೊದಲ ಪಂದ್ಯದಲ್ಲಿ ಜಮ್ಮು ಕಾಶ್ಮೀರ ತಂಡದ ವಿರುದ್ಧ ಬರೋಬ್ಬರಿ 222 ರನ್‌ಗಳ ಗೆಲುವು ದಾಖಲಿಸುವ ಮೂಲಕ ಶುಭಾರಂಭ ಮಾಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ 50 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 402 ರನ್‌ ಕಲೆಹಾಕಿ ಜಮ್ಮು ಕಾಶ್ಮೀರ ತಂಡಕ್ಕೆ ಗೆಲ್ಲಲು 403 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಜಮ್ಮು ಕಾಶ್ಮೀರ 30.4 ಓವರ್‌ಗಳಲ್ಲಿ 180 ರನ್‌ಗಳಿಗೆ ಆಲ್‌ಔಟ್‌ ಆಗಿದೆ.

ಕರ್ನಾಟಕ ಇನ್ನಿಂಗ್ಸ್: ಕರ್ನಾಟಕದ ಪರ ಆರಂಭಿಕರಾಗಿ ಆರ್‌ ಸಮರ್ಥ್‌ 120 ಎಸೆತಗಳಲ್ಲಿ 123 ರನ್ ಬಾರಿಸಿದರೆ, ಮಯಾಂಕ್‌ ಅಗರ್ವಾಲ್‌ 133 ಎಸೆತಗಳಲ್ಲಿ 157 ರನ್‌ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್‌ ಪಡಿಕ್ಕಲ್‌ 35 ಎಸೆತಗಳಲ್ಲಿ 4 ಬೌಂಡರಿ ಹಾಗೂ 5 ಸಿಕ್ಸರ್‌ ಸಹಿತ ಅಜೇಯ 71 ರನ್‌ ಚಚ್ಚಿದರೆ, ಮನೀಶ್‌ ಪಾಂಡೆ 14 ಎಸೆತಗಳಲ್ಲಿ ಅಜೇಯ 23 ರನ್‌ ಬಾರಿಸಿದರು.

ಕರ್ನಾಟಕದ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕುವಲ್ಲಿ ಎಲ್ಲಿಯೂ ಯಶಸ್ವಿಯಾದ ಜಮ್ಮು ಕಾಶ್ಮೀರ ಬೌಲರ್‌ಗಳು ಹೈರಾಣಾದರು. ರಶಿಖ್‌ ಸಲಾಂ ಹಾಗೂ ಸಾಹಿಲ್ ಲೋತ್ರ ತಲಾ ಒಂದೊಂದು ವಿಕೆಟ್‌ ಪಡೆದರೆ ಇನ್ನುಳಿದ ಯಾವುದೇ ಬೌಲರ್ ಸಹ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಲಿಲ್ಲ.

ಜಮ್ಮು ಕಾಶ್ಮೀರ ಇನ್ನಿಂಗ್ಸ್: ಕರ್ನಾಟಕ ನೀಡಿದ ಬೃಹತ್‌ ಗುರಿಯನ್ನು ಬೆನ್ನಟ್ಟಲು ಮುಂದಾದ ಜಮ್ಮು ಕಾಶ್ಮೀರ ಅಕ್ಷರಶಃ ಮಕಾಡೆ ಮಲಗಿದೆ. ತಂಡದ ಪರ ನಾಯಕ ಶುಭಂ ಕಜುರಿಯಾ, ವಿವ್ರಂತ್‌ ಶರ್ಮಾ ಹಾಗೂ ಯುಧ್ವೀರ್‌ ಸಿಂಗ್‌ ಚರಕ್‌ ಹೊರತುಪಡಿಸಿ ಉಳಿದ ಯಾವುದೇ ಆಟಗಾರರೂ ಸಹ ಎರಡಂಕೆ ರನ್‌ ಮುಟ್ಟಲಿಲ್ಲ. ಶುಭಂ ಕಜುರಿಯಾ 29 ರನ್‌ ಕಲೆಹಾಕಿದರೆ, ವಿವ್ರಂತ್‌ ಶರ್ಮಾ 41 ರನ್‌ ಬಾರಿಸಿದರು ಹಾಗೂ ಯುಧ್ವೀರ್‌ ಸಿಂಗ್‌ ಚರಕ್‌ 39 ಎಸೆತಗಳಲ್ಲಿ 4 ಬೌಂಡರಿ ಹಾಗೂ 6 ಸಿಕ್ಸರ್‌ ಸಹಿತ 64 ರನ್‌ ಬಾರಿಸಿದರು. ಇನ್ನುಳಿದಂತೆ ಕಮ್ರಾನ್‌ ಇಕ್ಬಾಲ್‌ 5 ರನ್‌, ಹೆನನ್‌ ನಜೀರ್‌ ಮಲಿಕ್‌ 2 ರನ್‌, ಅಬ್ದುಲ್‌ ಸಮದ್‌ 2, ಫಜಿಲ್‌ ರಶೀದ್‌ 4 ರನ್‌, ಸಹಿಲ್‌ ಲೋತ್ರ 13 ರನ್‌, ಅಬಿದ್ ಮುಸ್ತಕ್‌ 1 ರನ್‌, ರಸಿಕ್‌ ದರ್‌ ಸಲಾಮ್‌ ಅಜೇಯ 5 ರನ್‌ ಹಾಗೂ ಉಮ್ರಾನ್‌ ಮಲಿಕ್‌ ಶೂನ್ಯ ಸುತ್ತಿದರು.

ಕರ್ನಾಟಕದ ಪರ ವಿಜಯ್‌ಕುಮಾರ್‌ ವೈಶಾಖ್‌ 4 ವಿಕೆಟ್‌ ಕಬಳಿಸಿದರೆ, ಕೃಷ್ಣಪ್ಪ ಗೌತಮ್‌ 2, ಜಗದೀಶ ಸುಚಿತ್‌, ವಾಸುಕಿ ಕೌಶಿಕ್‌ ಹಾಗೂ ವಿದ್ವತ್‌ ಕಾವೇರಪ್ಪ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

2 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

3 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

4 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

5 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

5 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

6 hours ago