BREAKING NEWS

ವಿಜಯ್‌ ಹಜಾರೆ ಟ್ರೋಫಿ: ಗೆಲುವಿನ ಶುಭಾರಂಭ ಮಾಡಿದ ಕರ್ನಾಟಕ; ಜಮ್ಮು ವಿರುದ್ಧ 222 ರನ್‌ ಜಯ

ಇಂದಿನಿಂದ ( ನವೆಂಬರ್‌ 23 ) ವಿಜಯ್‌ ಹಜಾರೆ ಟ್ರೋಫಿ ಆರಂಭವಾಗಿದ್ದು, ಗ್ರೂಪ್‌ ಹಂತದ ಮೊದಲ ಸುತ್ತಿನ ಪಂದ್ಯಗಳು ನಡೆದಿವೆ. ಕರ್ನಾಟಕ ತನ್ನ ಮೊದಲ ಪಂದ್ಯದಲ್ಲಿ ಜಮ್ಮು ಕಾಶ್ಮೀರ ತಂಡದ ವಿರುದ್ಧ ಬರೋಬ್ಬರಿ 222 ರನ್‌ಗಳ ಗೆಲುವು ದಾಖಲಿಸುವ ಮೂಲಕ ಶುಭಾರಂಭ ಮಾಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ 50 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 402 ರನ್‌ ಕಲೆಹಾಕಿ ಜಮ್ಮು ಕಾಶ್ಮೀರ ತಂಡಕ್ಕೆ ಗೆಲ್ಲಲು 403 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಜಮ್ಮು ಕಾಶ್ಮೀರ 30.4 ಓವರ್‌ಗಳಲ್ಲಿ 180 ರನ್‌ಗಳಿಗೆ ಆಲ್‌ಔಟ್‌ ಆಗಿದೆ.

ಕರ್ನಾಟಕ ಇನ್ನಿಂಗ್ಸ್: ಕರ್ನಾಟಕದ ಪರ ಆರಂಭಿಕರಾಗಿ ಆರ್‌ ಸಮರ್ಥ್‌ 120 ಎಸೆತಗಳಲ್ಲಿ 123 ರನ್ ಬಾರಿಸಿದರೆ, ಮಯಾಂಕ್‌ ಅಗರ್ವಾಲ್‌ 133 ಎಸೆತಗಳಲ್ಲಿ 157 ರನ್‌ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್‌ ಪಡಿಕ್ಕಲ್‌ 35 ಎಸೆತಗಳಲ್ಲಿ 4 ಬೌಂಡರಿ ಹಾಗೂ 5 ಸಿಕ್ಸರ್‌ ಸಹಿತ ಅಜೇಯ 71 ರನ್‌ ಚಚ್ಚಿದರೆ, ಮನೀಶ್‌ ಪಾಂಡೆ 14 ಎಸೆತಗಳಲ್ಲಿ ಅಜೇಯ 23 ರನ್‌ ಬಾರಿಸಿದರು.

ಕರ್ನಾಟಕದ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕುವಲ್ಲಿ ಎಲ್ಲಿಯೂ ಯಶಸ್ವಿಯಾದ ಜಮ್ಮು ಕಾಶ್ಮೀರ ಬೌಲರ್‌ಗಳು ಹೈರಾಣಾದರು. ರಶಿಖ್‌ ಸಲಾಂ ಹಾಗೂ ಸಾಹಿಲ್ ಲೋತ್ರ ತಲಾ ಒಂದೊಂದು ವಿಕೆಟ್‌ ಪಡೆದರೆ ಇನ್ನುಳಿದ ಯಾವುದೇ ಬೌಲರ್ ಸಹ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಲಿಲ್ಲ.

ಜಮ್ಮು ಕಾಶ್ಮೀರ ಇನ್ನಿಂಗ್ಸ್: ಕರ್ನಾಟಕ ನೀಡಿದ ಬೃಹತ್‌ ಗುರಿಯನ್ನು ಬೆನ್ನಟ್ಟಲು ಮುಂದಾದ ಜಮ್ಮು ಕಾಶ್ಮೀರ ಅಕ್ಷರಶಃ ಮಕಾಡೆ ಮಲಗಿದೆ. ತಂಡದ ಪರ ನಾಯಕ ಶುಭಂ ಕಜುರಿಯಾ, ವಿವ್ರಂತ್‌ ಶರ್ಮಾ ಹಾಗೂ ಯುಧ್ವೀರ್‌ ಸಿಂಗ್‌ ಚರಕ್‌ ಹೊರತುಪಡಿಸಿ ಉಳಿದ ಯಾವುದೇ ಆಟಗಾರರೂ ಸಹ ಎರಡಂಕೆ ರನ್‌ ಮುಟ್ಟಲಿಲ್ಲ. ಶುಭಂ ಕಜುರಿಯಾ 29 ರನ್‌ ಕಲೆಹಾಕಿದರೆ, ವಿವ್ರಂತ್‌ ಶರ್ಮಾ 41 ರನ್‌ ಬಾರಿಸಿದರು ಹಾಗೂ ಯುಧ್ವೀರ್‌ ಸಿಂಗ್‌ ಚರಕ್‌ 39 ಎಸೆತಗಳಲ್ಲಿ 4 ಬೌಂಡರಿ ಹಾಗೂ 6 ಸಿಕ್ಸರ್‌ ಸಹಿತ 64 ರನ್‌ ಬಾರಿಸಿದರು. ಇನ್ನುಳಿದಂತೆ ಕಮ್ರಾನ್‌ ಇಕ್ಬಾಲ್‌ 5 ರನ್‌, ಹೆನನ್‌ ನಜೀರ್‌ ಮಲಿಕ್‌ 2 ರನ್‌, ಅಬ್ದುಲ್‌ ಸಮದ್‌ 2, ಫಜಿಲ್‌ ರಶೀದ್‌ 4 ರನ್‌, ಸಹಿಲ್‌ ಲೋತ್ರ 13 ರನ್‌, ಅಬಿದ್ ಮುಸ್ತಕ್‌ 1 ರನ್‌, ರಸಿಕ್‌ ದರ್‌ ಸಲಾಮ್‌ ಅಜೇಯ 5 ರನ್‌ ಹಾಗೂ ಉಮ್ರಾನ್‌ ಮಲಿಕ್‌ ಶೂನ್ಯ ಸುತ್ತಿದರು.

ಕರ್ನಾಟಕದ ಪರ ವಿಜಯ್‌ಕುಮಾರ್‌ ವೈಶಾಖ್‌ 4 ವಿಕೆಟ್‌ ಕಬಳಿಸಿದರೆ, ಕೃಷ್ಣಪ್ಪ ಗೌತಮ್‌ 2, ಜಗದೀಶ ಸುಚಿತ್‌, ವಾಸುಕಿ ಕೌಶಿಕ್‌ ಹಾಗೂ ವಿದ್ವತ್‌ ಕಾವೇರಪ್ಪ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

10 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

11 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

11 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

11 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

11 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

12 hours ago