BREAKING NEWS

ವಿಜಯ್‌ ಹಜಾರೆ ಟ್ರೋಫಿ: ಗೆಲುವಿನ ಶುಭಾರಂಭ ಮಾಡಿದ ಕರ್ನಾಟಕ; ಜಮ್ಮು ವಿರುದ್ಧ 222 ರನ್‌ ಜಯ

ಇಂದಿನಿಂದ ( ನವೆಂಬರ್‌ 23 ) ವಿಜಯ್‌ ಹಜಾರೆ ಟ್ರೋಫಿ ಆರಂಭವಾಗಿದ್ದು, ಗ್ರೂಪ್‌ ಹಂತದ ಮೊದಲ ಸುತ್ತಿನ ಪಂದ್ಯಗಳು ನಡೆದಿವೆ. ಕರ್ನಾಟಕ ತನ್ನ ಮೊದಲ ಪಂದ್ಯದಲ್ಲಿ ಜಮ್ಮು ಕಾಶ್ಮೀರ ತಂಡದ ವಿರುದ್ಧ ಬರೋಬ್ಬರಿ 222 ರನ್‌ಗಳ ಗೆಲುವು ದಾಖಲಿಸುವ ಮೂಲಕ ಶುಭಾರಂಭ ಮಾಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ 50 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 402 ರನ್‌ ಕಲೆಹಾಕಿ ಜಮ್ಮು ಕಾಶ್ಮೀರ ತಂಡಕ್ಕೆ ಗೆಲ್ಲಲು 403 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಜಮ್ಮು ಕಾಶ್ಮೀರ 30.4 ಓವರ್‌ಗಳಲ್ಲಿ 180 ರನ್‌ಗಳಿಗೆ ಆಲ್‌ಔಟ್‌ ಆಗಿದೆ.

ಕರ್ನಾಟಕ ಇನ್ನಿಂಗ್ಸ್: ಕರ್ನಾಟಕದ ಪರ ಆರಂಭಿಕರಾಗಿ ಆರ್‌ ಸಮರ್ಥ್‌ 120 ಎಸೆತಗಳಲ್ಲಿ 123 ರನ್ ಬಾರಿಸಿದರೆ, ಮಯಾಂಕ್‌ ಅಗರ್ವಾಲ್‌ 133 ಎಸೆತಗಳಲ್ಲಿ 157 ರನ್‌ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್‌ ಪಡಿಕ್ಕಲ್‌ 35 ಎಸೆತಗಳಲ್ಲಿ 4 ಬೌಂಡರಿ ಹಾಗೂ 5 ಸಿಕ್ಸರ್‌ ಸಹಿತ ಅಜೇಯ 71 ರನ್‌ ಚಚ್ಚಿದರೆ, ಮನೀಶ್‌ ಪಾಂಡೆ 14 ಎಸೆತಗಳಲ್ಲಿ ಅಜೇಯ 23 ರನ್‌ ಬಾರಿಸಿದರು.

ಕರ್ನಾಟಕದ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕುವಲ್ಲಿ ಎಲ್ಲಿಯೂ ಯಶಸ್ವಿಯಾದ ಜಮ್ಮು ಕಾಶ್ಮೀರ ಬೌಲರ್‌ಗಳು ಹೈರಾಣಾದರು. ರಶಿಖ್‌ ಸಲಾಂ ಹಾಗೂ ಸಾಹಿಲ್ ಲೋತ್ರ ತಲಾ ಒಂದೊಂದು ವಿಕೆಟ್‌ ಪಡೆದರೆ ಇನ್ನುಳಿದ ಯಾವುದೇ ಬೌಲರ್ ಸಹ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಲಿಲ್ಲ.

ಜಮ್ಮು ಕಾಶ್ಮೀರ ಇನ್ನಿಂಗ್ಸ್: ಕರ್ನಾಟಕ ನೀಡಿದ ಬೃಹತ್‌ ಗುರಿಯನ್ನು ಬೆನ್ನಟ್ಟಲು ಮುಂದಾದ ಜಮ್ಮು ಕಾಶ್ಮೀರ ಅಕ್ಷರಶಃ ಮಕಾಡೆ ಮಲಗಿದೆ. ತಂಡದ ಪರ ನಾಯಕ ಶುಭಂ ಕಜುರಿಯಾ, ವಿವ್ರಂತ್‌ ಶರ್ಮಾ ಹಾಗೂ ಯುಧ್ವೀರ್‌ ಸಿಂಗ್‌ ಚರಕ್‌ ಹೊರತುಪಡಿಸಿ ಉಳಿದ ಯಾವುದೇ ಆಟಗಾರರೂ ಸಹ ಎರಡಂಕೆ ರನ್‌ ಮುಟ್ಟಲಿಲ್ಲ. ಶುಭಂ ಕಜುರಿಯಾ 29 ರನ್‌ ಕಲೆಹಾಕಿದರೆ, ವಿವ್ರಂತ್‌ ಶರ್ಮಾ 41 ರನ್‌ ಬಾರಿಸಿದರು ಹಾಗೂ ಯುಧ್ವೀರ್‌ ಸಿಂಗ್‌ ಚರಕ್‌ 39 ಎಸೆತಗಳಲ್ಲಿ 4 ಬೌಂಡರಿ ಹಾಗೂ 6 ಸಿಕ್ಸರ್‌ ಸಹಿತ 64 ರನ್‌ ಬಾರಿಸಿದರು. ಇನ್ನುಳಿದಂತೆ ಕಮ್ರಾನ್‌ ಇಕ್ಬಾಲ್‌ 5 ರನ್‌, ಹೆನನ್‌ ನಜೀರ್‌ ಮಲಿಕ್‌ 2 ರನ್‌, ಅಬ್ದುಲ್‌ ಸಮದ್‌ 2, ಫಜಿಲ್‌ ರಶೀದ್‌ 4 ರನ್‌, ಸಹಿಲ್‌ ಲೋತ್ರ 13 ರನ್‌, ಅಬಿದ್ ಮುಸ್ತಕ್‌ 1 ರನ್‌, ರಸಿಕ್‌ ದರ್‌ ಸಲಾಮ್‌ ಅಜೇಯ 5 ರನ್‌ ಹಾಗೂ ಉಮ್ರಾನ್‌ ಮಲಿಕ್‌ ಶೂನ್ಯ ಸುತ್ತಿದರು.

ಕರ್ನಾಟಕದ ಪರ ವಿಜಯ್‌ಕುಮಾರ್‌ ವೈಶಾಖ್‌ 4 ವಿಕೆಟ್‌ ಕಬಳಿಸಿದರೆ, ಕೃಷ್ಣಪ್ಪ ಗೌತಮ್‌ 2, ಜಗದೀಶ ಸುಚಿತ್‌, ವಾಸುಕಿ ಕೌಶಿಕ್‌ ಹಾಗೂ ವಿದ್ವತ್‌ ಕಾವೇರಪ್ಪ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

1 hour ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

2 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

3 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

5 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

6 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

6 hours ago