ಇಂದಿನಿಂದ ( ನವೆಂಬರ್ 23 ) ವಿಜಯ್ ಹಜಾರೆ ಟ್ರೋಫಿ ಆರಂಭವಾಗಿದ್ದು, ಗ್ರೂಪ್ ಹಂತದ ಮೊದಲ ಸುತ್ತಿನ ಪಂದ್ಯಗಳು ನಡೆಯುತ್ತಿವೆ. ಕರ್ನಾಟಕ ತನ್ನ ಮೊದಲ ಪಂದ್ಯದಲ್ಲಿ ಜಮ್ಮು ಕಾಶ್ಮೀರ ತಂಡದ ವಿರುದ್ಧ ಕಣಕ್ಕಿಳಿದಿದ್ದು ಮೊದಲು ಬ್ಯಾಟಿಂಗ್ ನಡೆಸಿ 50 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಬರೋಬ್ಬರಿ 402 ರನ್ ಕಲೆಹಾಕಿ ಜಮ್ಮು ಕಾಶ್ಮೀರ ತಂಡಕ್ಕೆ ಗೆಲ್ಲಲು 403 ರನ್ಗಳ ಗುರಿಯನ್ನು ನೀಡಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ಮೊದಲು ಬ್ಯಾಟಿಂಗ್ ಮಾಡಿದೆ. ಕರ್ನಾಟಕದ ಪರ ಆರಂಭಿಕರಾಗಿ ಆರ್ ಸಮರ್ಥ್ ಹಾಗೂ ನಾಯಕ ಮಯಾಂಕ್ ಅಗರ್ವಾಲ್ ಕಣಕ್ಕಿಳಿದಿದ್ದಾರೆ. ಆರ್ ಸಮರ್ಥ್ 120 ಎಸೆತಗಳಲ್ಲಿ 123 ರನ್ ಬಾರಿಸಿದರೆ, ಮಯಾಂಕ್ ಅಗರ್ವಾಲ್ 133 ಎಸೆತಗಳಲ್ಲಿ 157 ರನ್ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ 35 ಎಸೆತಗಳಲ್ಲಿ 4 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ ಅಜೇಯ 71 ರನ್ ಚಚ್ಚಿದರೆ, ಮನೀಶ್ ಪಾಂಡೆ 14 ಎಸೆತಗಳಲ್ಲಿ ಅಜೇಯ 23 ರನ್ ಬಾರಿಸಿದರು.
ಕರ್ನಾಟಕದ ಬ್ಯಾಟ್ಸ್ಮನ್ಗಳನ್ನು ಕಟ್ಟಿಹಾಕುವಲ್ಲಿ ಎಲ್ಲಿಯೂ ಯಶಸ್ವಿಯಾದ ಜಮ್ಮು ಕಾಶ್ಮೀರ ಬೌಲರ್ಗಳು ಹೈರಾಣಾದರು. ರಶಿಖ್ ಸಲಾಂ ಹಾಗೂ ಸಾಹಿಲ್ ಲೋತ್ರ ತಲಾ ಒಂದೊಂದು ವಿಕೆಟ್ ಪಡೆದರೆ ಇನ್ನುಳಿದ ಯಾವುದೇ ಬೌಲರ್ ಸಹ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಲಿಲ್ಲ.
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…