BREAKING NEWS

ಸಮರ್ಥ್‌, ಮಯಾಂಕ್‌ ಶತಕ, 35 ಎಸೆತಕ್ಕೆ 71 ರನ್‌ ಚಚ್ಚಿದ ಪಡಿಕ್ಕಲ್;‌ ಜಮ್ಮು ಕಾಶ್ಮೀರಕ್ಕೆ 403 ರನ್‌ ಗುರಿ

ಇಂದಿನಿಂದ ( ನವೆಂಬರ್‌ 23 ) ವಿಜಯ್‌ ಹಜಾರೆ ಟ್ರೋಫಿ ಆರಂಭವಾಗಿದ್ದು, ಗ್ರೂಪ್‌ ಹಂತದ ಮೊದಲ ಸುತ್ತಿನ ಪಂದ್ಯಗಳು ನಡೆಯುತ್ತಿವೆ. ಕರ್ನಾಟಕ ತನ್ನ ಮೊದಲ ಪಂದ್ಯದಲ್ಲಿ ಜಮ್ಮು ಕಾಶ್ಮೀರ ತಂಡದ ವಿರುದ್ಧ ಕಣಕ್ಕಿಳಿದಿದ್ದು ಮೊದಲು ಬ್ಯಾಟಿಂಗ್‌ ನಡೆಸಿ 50 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 402 ರನ್‌ ಕಲೆಹಾಕಿ ಜಮ್ಮು ಕಾಶ್ಮೀರ ತಂಡಕ್ಕೆ ಗೆಲ್ಲಲು 403 ರನ್‌ಗಳ ಗುರಿಯನ್ನು ನೀಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಕರ್ನಾಟಕ ಮೊದಲು ಬ್ಯಾಟಿಂಗ್‌ ಮಾಡಿದೆ. ಕರ್ನಾಟಕದ ಪರ ಆರಂಭಿಕರಾಗಿ ಆರ್‌ ಸಮರ್ಥ್‌ ಹಾಗೂ ನಾಯಕ ಮಯಾಂಕ್‌ ಅಗರ್ವಾಲ್ ಕಣಕ್ಕಿಳಿದಿದ್ದಾರೆ. ಆರ್‌ ಸಮರ್ಥ್‌ 120 ಎಸೆತಗಳಲ್ಲಿ 123 ರನ್ ಬಾರಿಸಿದರೆ, ಮಯಾಂಕ್‌ ಅಗರ್ವಾಲ್‌ 133 ಎಸೆತಗಳಲ್ಲಿ 157 ರನ್‌ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್‌ ಪಡಿಕ್ಕಲ್‌ 35 ಎಸೆತಗಳಲ್ಲಿ 4 ಬೌಂಡರಿ ಹಾಗೂ 5 ಸಿಕ್ಸರ್‌ ಸಹಿತ ಅಜೇಯ 71 ರನ್‌ ಚಚ್ಚಿದರೆ, ಮನೀಶ್‌ ಪಾಂಡೆ 14 ಎಸೆತಗಳಲ್ಲಿ ಅಜೇಯ 23 ರನ್‌ ಬಾರಿಸಿದರು.

ಕರ್ನಾಟಕದ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕುವಲ್ಲಿ ಎಲ್ಲಿಯೂ ಯಶಸ್ವಿಯಾದ ಜಮ್ಮು ಕಾಶ್ಮೀರ ಬೌಲರ್‌ಗಳು ಹೈರಾಣಾದರು. ರಶಿಖ್‌ ಸಲಾಂ ಹಾಗೂ ಸಾಹಿಲ್ ಲೋತ್ರ ತಲಾ ಒಂದೊಂದು ವಿಕೆಟ್‌ ಪಡೆದರೆ ಇನ್ನುಳಿದ ಯಾವುದೇ ಬೌಲರ್ ಸಹ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಲಿಲ್ಲ.

andolana

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

9 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

9 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

10 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

11 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

11 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

13 hours ago