ಇಂದಿನಿಂದ ( ನವೆಂಬರ್ 23 ) ವಿಜಯ್ ಹಜಾರೆ ಟ್ರೋಫಿ ಆರಂಭವಾಗಿದ್ದು, ಗ್ರೂಪ್ ಹಂತದ ಮೊದಲ ಸುತ್ತಿನ ಪಂದ್ಯಗಳು ನಡೆಯುತ್ತಿವೆ. ಕರ್ನಾಟಕ ತನ್ನ ಮೊದಲ ಪಂದ್ಯದಲ್ಲಿ ಜಮ್ಮು ಕಾಶ್ಮೀರ ತಂಡದ ವಿರುದ್ಧ ಕಣಕ್ಕಿಳಿದಿದ್ದು ಮೊದಲು ಬ್ಯಾಟಿಂಗ್ ನಡೆಸಿ 50 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಬರೋಬ್ಬರಿ 402 ರನ್ ಕಲೆಹಾಕಿ ಜಮ್ಮು ಕಾಶ್ಮೀರ ತಂಡಕ್ಕೆ ಗೆಲ್ಲಲು 403 ರನ್ಗಳ ಗುರಿಯನ್ನು ನೀಡಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ಮೊದಲು ಬ್ಯಾಟಿಂಗ್ ಮಾಡಿದೆ. ಕರ್ನಾಟಕದ ಪರ ಆರಂಭಿಕರಾಗಿ ಆರ್ ಸಮರ್ಥ್ ಹಾಗೂ ನಾಯಕ ಮಯಾಂಕ್ ಅಗರ್ವಾಲ್ ಕಣಕ್ಕಿಳಿದಿದ್ದಾರೆ. ಆರ್ ಸಮರ್ಥ್ 120 ಎಸೆತಗಳಲ್ಲಿ 123 ರನ್ ಬಾರಿಸಿದರೆ, ಮಯಾಂಕ್ ಅಗರ್ವಾಲ್ 133 ಎಸೆತಗಳಲ್ಲಿ 157 ರನ್ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ 35 ಎಸೆತಗಳಲ್ಲಿ 4 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ ಅಜೇಯ 71 ರನ್ ಚಚ್ಚಿದರೆ, ಮನೀಶ್ ಪಾಂಡೆ 14 ಎಸೆತಗಳಲ್ಲಿ ಅಜೇಯ 23 ರನ್ ಬಾರಿಸಿದರು.
ಕರ್ನಾಟಕದ ಬ್ಯಾಟ್ಸ್ಮನ್ಗಳನ್ನು ಕಟ್ಟಿಹಾಕುವಲ್ಲಿ ಎಲ್ಲಿಯೂ ಯಶಸ್ವಿಯಾದ ಜಮ್ಮು ಕಾಶ್ಮೀರ ಬೌಲರ್ಗಳು ಹೈರಾಣಾದರು. ರಶಿಖ್ ಸಲಾಂ ಹಾಗೂ ಸಾಹಿಲ್ ಲೋತ್ರ ತಲಾ ಒಂದೊಂದು ವಿಕೆಟ್ ಪಡೆದರೆ ಇನ್ನುಳಿದ ಯಾವುದೇ ಬೌಲರ್ ಸಹ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಲಿಲ್ಲ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…