BREAKING NEWS

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವಿಜಯೇಂದ್ರ

ಬೆಂಗಳೂರು : ರಾಜ್ಯ ವಿಧಾನ ಸಭಾ ಚುನಾವಣೆಯ ಸೋಲಿನ ಹತಾಶೆಯ ನಂತರ ರಾಜ್ಯ ಬಿಜೆಪಿ ವಲಯದಲ್ಲಿ ಚಟುವಟಿಕೆ ಜೋರಾಗಿದೆ. ಬೆಂಗಳೂರಿನ ಮಲ್ಲೇಶವರದಲ್ಲಿರುವ ಬಜೆಪಿ ಶಕ್ತಿ ಕೇಂದ್ರ ಜಗನ್ನಾಥ ಭವನದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿಯ ಹಿರಿಯ ನಾಯಕರು, ಸಂಸದರು, ಶಾಸಕರು ಭಾಗಿಯಾಗಿದ್ದರು. ನಿಕಟಪೂರ್ವ ರಾಜ್ಯಾಧ್ಯಕ್ಷ ನ ನಳಿನ್‌ ಕುಮಾರ್‌ ಕಟೀಲ್‌ ಅವರು ವಿಜಯೇಂದ್ರ ಅವರಿಗೆ ಕೇಸರಿ ಶಾಲು ತೊಡಿಸಿ ಸನ್ಮಾನಿಸಿ ಅಧಿಕಾರ ಹಸ್ತಾಂತರಿಸಿದರು.

ಇದಕ್ಕೂ ಮುನ್ನ ವಿಜಯೇಂದ್ರ ಅವರು ತಂದೆ ಯಡಿಯೂರಪ್ಪನವರ ಕಾಲಿಗೆ ನಮಸ್ಕರಿಸಿ ಬಿಜೆಪಿ ಕಚೇರಿಯಲ್ಲಿ ಹೋಮ,ಹವನ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ, ಆರ್ ಅಶೋಕ್, ಬಸವರಾಜ ಬೊಮ್ಮಾಯಿ, ವಿ ಗೋಪಾಲಯ್ಯ, ಆದರ ಜ್ಞಾನೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಯಡಿಯೂರಪ್ಪ ಬಣದವರಿಗೆ ಇಂದು ಹಬ್ಬದ ಸಂಭ್ರಮವಿದೆ.

ಪ್ರಮುಖರು ಗೈರು: ಬಿಜೆಪಿಯಲ್ಲಿ ಪ್ರಮುಖ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಅಸಮಾಧಾನಿತರು ಎಂದು ಗುರುತಿಸಿಕೊಂಡಿರುವ ವಿ ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಮಧ್ಯ ಪ್ರದೇಶ ಚುನಾವಣೆ ಪ್ರಚಾರದಲ್ಲಿರುವ ಸಿ ಟಿ ರವಿಯವರು ಅಲ್ಲಿಂದಲೇ ವಿಜಯೇಂದ್ರ ಅವರಿಗೆ ಶುಭಕೋರಿದ್ದಾರೆ.

https://x.com/BJP4Karnataka/status/1724630485639299510?s=20

andolanait

Recent Posts

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

2 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

4 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

4 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

4 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

5 hours ago

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

6 hours ago