BREAKING NEWS

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವಿಜಯೇಂದ್ರ

ಬೆಂಗಳೂರು : ರಾಜ್ಯ ವಿಧಾನ ಸಭಾ ಚುನಾವಣೆಯ ಸೋಲಿನ ಹತಾಶೆಯ ನಂತರ ರಾಜ್ಯ ಬಿಜೆಪಿ ವಲಯದಲ್ಲಿ ಚಟುವಟಿಕೆ ಜೋರಾಗಿದೆ. ಬೆಂಗಳೂರಿನ ಮಲ್ಲೇಶವರದಲ್ಲಿರುವ ಬಜೆಪಿ ಶಕ್ತಿ ಕೇಂದ್ರ ಜಗನ್ನಾಥ ಭವನದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿಯ ಹಿರಿಯ ನಾಯಕರು, ಸಂಸದರು, ಶಾಸಕರು ಭಾಗಿಯಾಗಿದ್ದರು. ನಿಕಟಪೂರ್ವ ರಾಜ್ಯಾಧ್ಯಕ್ಷ ನ ನಳಿನ್‌ ಕುಮಾರ್‌ ಕಟೀಲ್‌ ಅವರು ವಿಜಯೇಂದ್ರ ಅವರಿಗೆ ಕೇಸರಿ ಶಾಲು ತೊಡಿಸಿ ಸನ್ಮಾನಿಸಿ ಅಧಿಕಾರ ಹಸ್ತಾಂತರಿಸಿದರು.

ಇದಕ್ಕೂ ಮುನ್ನ ವಿಜಯೇಂದ್ರ ಅವರು ತಂದೆ ಯಡಿಯೂರಪ್ಪನವರ ಕಾಲಿಗೆ ನಮಸ್ಕರಿಸಿ ಬಿಜೆಪಿ ಕಚೇರಿಯಲ್ಲಿ ಹೋಮ,ಹವನ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ, ಆರ್ ಅಶೋಕ್, ಬಸವರಾಜ ಬೊಮ್ಮಾಯಿ, ವಿ ಗೋಪಾಲಯ್ಯ, ಆದರ ಜ್ಞಾನೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಯಡಿಯೂರಪ್ಪ ಬಣದವರಿಗೆ ಇಂದು ಹಬ್ಬದ ಸಂಭ್ರಮವಿದೆ.

ಪ್ರಮುಖರು ಗೈರು: ಬಿಜೆಪಿಯಲ್ಲಿ ಪ್ರಮುಖ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಅಸಮಾಧಾನಿತರು ಎಂದು ಗುರುತಿಸಿಕೊಂಡಿರುವ ವಿ ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಮಧ್ಯ ಪ್ರದೇಶ ಚುನಾವಣೆ ಪ್ರಚಾರದಲ್ಲಿರುವ ಸಿ ಟಿ ರವಿಯವರು ಅಲ್ಲಿಂದಲೇ ವಿಜಯೇಂದ್ರ ಅವರಿಗೆ ಶುಭಕೋರಿದ್ದಾರೆ.

https://x.com/BJP4Karnataka/status/1724630485639299510?s=20

andolanait

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

7 mins ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

9 mins ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

11 mins ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

16 mins ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

3 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

3 hours ago