ಹುಬ್ಬಳ್ಳಿ : ವಿಜಯೇಂದ್ರ ಮೂರು ವರ್ಷ ಮಾತ್ರ ರಾಜ್ಯಾಧ್ಯಕ್ಷರಾಗಿರುತ್ತಾರೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಬಹುದಿನಗಳಿಂದ ಖಾಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಭರ್ತಿಯಾದ ಬೆನ್ನಲ್ಲೇ ಪ್ರಹ್ಲಾದ್ ಜೋಶಿ ಹೊಸ ಬಾಂಬ್ ಸಿಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯಾಧ್ಯಕ್ಷರ ಆಯ್ಕೆಯಲ್ಲಿ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಂಡಿದೆ. ವಿಜಯೇಂದ್ರ ರಾಜ್ಯಾಧ್ಯಕ್ಷನಾಗಿ ನೇಮಕವಾಗಿರುವುದು ಖುಷಿಯ ವಿಚಾರ. ಯುವಕರಿಗೆ ನಾಯಕತ್ವ ಕೊಡಬೇಕು ಎಂದು ಪಕ್ಷ ಈ ನಿರ್ಧಾರ ಮಾಡಿದೆ. ಪಕ್ಷದ ನಿರ್ಧಾರಕ್ಕೆ ಸಂಪೂರ್ಣ ಸಹಮತವಿದೆ. ಆದರೆ ವಿಜಯೇಂದ್ರ ಮೂರು ವರ್ಷ ಮಾತ್ರ ರಾಜ್ಯಾಧ್ಯಕ್ಷರಾಗಿರುತ್ತಾರೆ. ನಂತರ ಮತ್ತೊಬ್ಬ ನಿಷ್ಠಾವಂತ ಕಾರ್ಯಕರ್ತ ರಾಜ್ಯಾದ್ಯಕ್ಷರಾಗುತ್ತಾರೆ ಎಂದಿದ್ದಾರೆ.
ಇದೇ ವೇಳೆ ಸಿ.ಟಿ ರವಿ ಹಾಗೂ ಅರವಿಂದ್ ಬೆಲ್ಲದ್ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ ಅವರು,ಸಣ್ಣ ಪುಟ್ಟ ಅಸಮಾಧಾನಗಳಿವೆ.ಅದನ್ನು ಸರಿ ಮಾಡುತ್ತೇವೆ. ನಾನು ಅವರ ಜೊತೆ ಮಾತನಾಡುತ್ತೇನೆ. ವಿಜಯೇಂದ್ರ ಅವರಿಗೆ ನಾವೆಲ್ಲರೂ ಸಂಪೂರ್ಣ ಬೆಂಬಲ ಕೊಡುತ್ತೇವೆ,ನೂತನ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನ ಗೆಲ್ಲಬೇಕಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡುತ್ತೇವೆ ಎಂದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…