BREAKING NEWS

ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಐತಿಹಾಸಿಕ ಸಾಧನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಇಳಿದಿರುವುದು ಐತಿಹಾಸಿಕ ಸಾಧನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ.

ಇಂದು ಬೆಳಗ್ಗೆ ಇಸ್ರೋ ಸಂಸ್ಥೆಗೆ ಭೇಟಿ ನೀಡಿ ಅಧ್ಯಕ್ಷ ಎಸ್.ಸೋಮನಾಥ್ ಹಾಗೂ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಇಸ್ರೋ ಸಾಧನೆಯನ್ನು ಮೆಚ್ಚಿ ಅಭಿನಂದಿಸಬೇಕು.ಇಸ್ರೋ ಸಾಧನೆಯಿಂದ ಇಡೀ ಜಗತ್ತು ಭಾರತದ ಕಡೆಗೆ ನೋಡುವಂಥ ಕೆಲಸವಾಗಿದೆ . ಜಗತ್ತಿನಲ್ಲಿಯೇ ರಷ್ಯಾ, ಅಮೆರಿಕ, ಚೈನಾ ದೇಶಗಳನ್ನು ಬಿಟ್ಟರೆ ಚಂದ್ರನ ದಕ್ಷಿಣ ಭಾಗದಲ್ಲಿ ಕಾಲಿರಿಸಿರುವ ನಾಲ್ಕನೇ ದೇಶ ಭಾರತ. ನಾವೆಲ್ಲರೂ ಇಸ್ರೋ ಸಾಧನೆಯನ್ನು ಮೆಚ್ಚಿ ಅಭಿನಂದಿಸಬೇಕು ಎಂದರು.

ಸರ್ಕಾರದ ವತಿಯಿಂದ ಸನ್ಮಾನ : ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿ ಇಸ್ರೋ ವಿಜ್ಞಾನಿಗಳನ್ನು ಸರ್ಕಾರ ಗೌರವಿಸಲಿದೆ ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿದಂತೆ ಕರ್ನಾಟಕದ 500 ವಿಜ್ಞಾನಿಗಳು ಇದರಲ್ಲಿ ಪಾಲ್ಗೊಂಡಿದ್ದು, ಅವರೆಲ್ಲರಿಗೂ ಸನ್ಮಾನಿಸಲಾಗುವುದು. 3 ಲಕ್ಷ 84 ಕಿಮೀ ಪ್ರಯಾಣ ಮಾಡಿರುವ ವಿಕ್ರಂ ಸಾಧನೆ ಕಡಿಮೆಯಲ್ಲ. ಸರ್ಕಾರದ ಸಹಕಾರ ಬೆಂಬಲ ಇರಲಿದೆ. ಇದು ದೇಶದ ಹೆಮ್ಮೆ ಎಂದು ಸಿದ್ದರಾಮಯ್ಯ ನುಡಿದರು.

ದಿನಾಂಕ ನಿಗದಿ : ವಿಜ್ಞಾನಿಗಳು ಹಗಲು ಇರುಳು ಎನ್ನದೆ ಇದಕ್ಕಾಗಿ ಶ್ರಮಿಸಿದ್ದಾರೆ. ದೇಶದ ಒಟ್ಟು ಒಂದು ಸಾವಿರ ವಿಜ್ಞಾನಿಗಳು ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಿಂದಲೇ 500 ಜನ ಪಾಲ್ಗೊಂಡಿದ್ದಾರೆ. ಸೆಪ್ಟೆಂಬರ್ 2ರ ನಂತರ ಸನ್ಮಾನ ಕಾರ್ಯಕ್ರಮದ ದಿನಾಂಕ ನಿಗದಿಯಾಗಲಿದೆ ಎಂದರು.

andolanait

Recent Posts

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

1 hour ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

2 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

2 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

3 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

3 hours ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

6 hours ago