BREAKING NEWS

ಚಂದ್ರನನ್ನು ಸ್ಪರ್ಶಿಸಿದ ವಿಕ್ರಮ್ ಲ್ಯಾಂಡರ್| ಇದು ಪ್ರತಿ ಭಾರತೀಯನ ಯಶಸ್ಸು: ಕಾಂಗ್ರೆಸ್

ನವದೆಹಲಿ : ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ್ದು, ಇದು ಪ್ರತಿಯೊಬ್ಬ ಭಾರತೀಯನ ಸಾಮೂಹಿಕ ಯಶಸ್ಸು ಮತ್ತು ಇಸ್ರೋದ ಇಂದಿನ ಸಾಧನೆಯು ನಿರಂತರತೆಯ ಸಾಹಸವನ್ನು ಪ್ರತಿಬಿಂಬಿಸುತ್ತದೆ. ಇದು ನಿಜವಾಗಿಯೂ ಅದ್ಭುತ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.

140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಹೊಂದಿರುವ ಉತ್ಕೃಷ್ಟ ದೇಶ ಇಂದು ತನ್ನ ಆರು ದಶಕಗಳ ಸುದೀರ್ಘ ಬಾಹ್ಯಾಕಾಶ ಕಾರ್ಯಕ್ರಮದಲ್ಲಿ ಮತ್ತೊಂದು ಸಾಧನೆಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.

ಇಂದು ಇಡೀ ಜಗತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಕಡೆಗೆ ನೋಡುತ್ತಿದೆ. ಇದು ಎಲ್ಲಾ ಭಾರತೀಯರಿಗೆ ವಿಶೇಷ ಹೆಮ್ಮೆಯ ವಿಷಯ ಖರ್ಗೆ ಅವರು ತಿಳಿಸಿದ್ದಾರೆ.

“ನಮ್ಮ ವಿಜ್ಞಾನಿಗಳು, ಬಾಹ್ಯಾಕಾಶ ಇಂಜಿನಿಯರ್‌ಗಳು, ಸಂಶೋಧಕರು ಮತ್ತು ಈ ಮಿಷನ್ ನಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರ ಗಮನಾರ್ಹ ಶ್ರಮ, ಅಪ್ರತಿಮ ಜಾಣ್ಮೆ ಮತ್ತು ಅಚಲವಾದ ಸಮರ್ಪಣೆಗೆ ನಾವು ಋಣಿಯಾಗಿದ್ದೇವೆ” ಎಂದು ಕಾಂಗ್ರೆಸ್ ಅಧ್ಯಕ್ಷ ಹೇಳಿದ್ದಾರೆ.

ಇಸ್ರೋದ ಇಂದಿನ ಸಾಧನೆಯು ನಿರಂತರತೆಯ ಸಾಹಸವನ್ನು ಪ್ರತಿಬಿಂಬಿಸುತ್ತದೆ ಮತ್ತು ನಿಜವಾಗಿಯೂ ಇದೊಂದು ಅದ್ಭುತ ಸಾಧನೆಯಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

andolanait

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

3 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

4 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

5 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

5 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

6 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

6 hours ago