BREAKING NEWS

ಚಂದ್ರನನ್ನು ಸ್ಪರ್ಶಿಸಿದ ವಿಕ್ರಮ್ ಲ್ಯಾಂಡರ್| ಇದು ಪ್ರತಿ ಭಾರತೀಯನ ಯಶಸ್ಸು: ಕಾಂಗ್ರೆಸ್

ನವದೆಹಲಿ : ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ್ದು, ಇದು ಪ್ರತಿಯೊಬ್ಬ ಭಾರತೀಯನ ಸಾಮೂಹಿಕ ಯಶಸ್ಸು ಮತ್ತು ಇಸ್ರೋದ ಇಂದಿನ ಸಾಧನೆಯು ನಿರಂತರತೆಯ ಸಾಹಸವನ್ನು ಪ್ರತಿಬಿಂಬಿಸುತ್ತದೆ. ಇದು ನಿಜವಾಗಿಯೂ ಅದ್ಭುತ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.

140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಹೊಂದಿರುವ ಉತ್ಕೃಷ್ಟ ದೇಶ ಇಂದು ತನ್ನ ಆರು ದಶಕಗಳ ಸುದೀರ್ಘ ಬಾಹ್ಯಾಕಾಶ ಕಾರ್ಯಕ್ರಮದಲ್ಲಿ ಮತ್ತೊಂದು ಸಾಧನೆಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.

ಇಂದು ಇಡೀ ಜಗತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಕಡೆಗೆ ನೋಡುತ್ತಿದೆ. ಇದು ಎಲ್ಲಾ ಭಾರತೀಯರಿಗೆ ವಿಶೇಷ ಹೆಮ್ಮೆಯ ವಿಷಯ ಖರ್ಗೆ ಅವರು ತಿಳಿಸಿದ್ದಾರೆ.

“ನಮ್ಮ ವಿಜ್ಞಾನಿಗಳು, ಬಾಹ್ಯಾಕಾಶ ಇಂಜಿನಿಯರ್‌ಗಳು, ಸಂಶೋಧಕರು ಮತ್ತು ಈ ಮಿಷನ್ ನಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರ ಗಮನಾರ್ಹ ಶ್ರಮ, ಅಪ್ರತಿಮ ಜಾಣ್ಮೆ ಮತ್ತು ಅಚಲವಾದ ಸಮರ್ಪಣೆಗೆ ನಾವು ಋಣಿಯಾಗಿದ್ದೇವೆ” ಎಂದು ಕಾಂಗ್ರೆಸ್ ಅಧ್ಯಕ್ಷ ಹೇಳಿದ್ದಾರೆ.

ಇಸ್ರೋದ ಇಂದಿನ ಸಾಧನೆಯು ನಿರಂತರತೆಯ ಸಾಹಸವನ್ನು ಪ್ರತಿಬಿಂಬಿಸುತ್ತದೆ ಮತ್ತು ನಿಜವಾಗಿಯೂ ಇದೊಂದು ಅದ್ಭುತ ಸಾಧನೆಯಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

15 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

15 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

15 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

15 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

15 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

15 hours ago