BREAKING NEWS

ವಿಕ್ರಮ್, ಪ್ರಜ್ಞಾನ್ ಅನ್ನು ಭೂಮಿಯಿಂದ ಜಾಗೃತಗೊಳಿಸಲಾಗುವುದಿಲ್ಲ : ನೀಲೇಶ್ ಎಂ.ದೇಸಾಯಿ

ಗುಜರಾತ್ : ದೀರ್ಘಕಾಲದ ನಿದ್ರೆಗೆ ಕಳುಹಿಸಲಾಗಿದ್ದ ಚಂದ್ರಯಾನ-3ರ ಲ್ಯಾಂಡರ್ ವಿಕ್ರಮ್ ಹಾಗೂ ರೋವರ್‌ ಪ್ರಜ್ಞಾನ್, ಚಂದ್ರನ ಹಗಲಿನಲ್ಲಿ ಮತ್ತೆ ಕಾರ್ಯಾಚರಣೆ ನಡೆಸುವ ಪ್ರಕ್ರಿಯೆ ಸ್ವಯಂ ಚಾಲಿತ. ಇದನ್ನು ಭೂಮಿಯಲ್ಲಿರುವ ನಿಯಂತ್ರಣ ಕೇಂದ್ರದಿಂದ ಮಾಡಲಾಗದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸ್ಪೇಸ್ ಅಪ್ಲಿಕೇಷನ್‌ ಸೆಂಟರ್‌ನ ನಿರ್ದೇಶಕ ನೀಲೇಶ್ ಎಂ.ದೇಸಾಯಿ ಹೇಳಿದ್ದಾರೆ.

ಸೆ. 22ರಂದು ಚಂದ್ರನಲ್ಲಿ ಹಗಲು ಆರಂಭವಾಗಿದೆ. ಇದರಿಂದಾಗಿ ವಿಕ್ರಮ್‌ ಲ್ಯಾಂಡ‌ರ್ ಹಾಗೂ ರೋವರ್‌ಗೆ ಅಳವಡಿಸಿರುವ ಸೌರ ಫಲಕದಿಂದ ಅವುಗಳು ಪೂರ್ಣ ಚಾರ್ಜ್ ಆಗಿವೆ. ಆದರೆ ಅಲ್ಲಿಂದ ಯಾವುದೇ ಸಂದೇಶ ಬಂದಿಲ್ಲ. ವಿಕ್ರಮ್ ಮತ್ತು ಪ್ರಜ್ಞಾನ್ ಜತೆ ಸಂಪರ್ಕ ಬೆಳೆಸುವ ಪ್ರಯತ್ನ ಮುಂದುವರಿದಿದೆ ಎಂದು ಇಸ್ರೋ ತನ್ನ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದೆ.

ತೀವ್ರ ಚಳಿಯನ್ನು ಎದುರಿಸಿರುವ ಸಾಧನದಲ್ಲಿರುವ ಎಲೆಕ್ಟ್ರಾನಿಕ್ ಉಪಕರಣಗಳು ಸುಸ್ಥಿಗೆ ಮರಳುವ ಸಾಧ್ಯತೆ ಶೇ 50ರಷ್ಟು ಮಾತ್ರ. ಆದರೆ ಈಗಾಗಲೇ ಈ ಸಾಧನಗಳು ಅವುಗಳಿಗೆ ನೀಡಲಾದ ಕೆಲಸಗಳನ್ನು ಸಂಪೂರ್ಣವಾಗಿ ಪೂರ್ಣಗೊಳಿಸಿವೆ. ಒಂದೊಮ್ಮೆ ಲ್ಯಾಂಡರ್ ಮತ್ತು ರೋವರ್ ತಮ್ಮ ಕಾರ್ಯಗಳನ್ನು ಮರಳಿ ಆರಂಭಿಸಿದರೆ, ಈಹಿಂದೆ ನಡೆಸಿದ ಕಾರ್ಯಗಳನ್ನೇ ಮತ್ತೊಮ್ಮೆ ನಡೆಸಲಾಗುವುದು ಎಂದು ದೇಸಾಯಿ ಹೇಳಿದ್ದಾರೆ.

ಪ್ರಜ್ಞಾನ್ ಎಲ್ಲಾ ಹಂತಗಳಲ್ಲೂ ಪರೀಕ್ಷಿಸಿ ಮತ್ತು ಪರಿಶೀಲಿಸಿದ ನಂತರವೇ ಚಂದ್ರನಲ್ಲಿಗೆ ಕಳುಹಿಸಲಾಗಿದೆ. ಹೀಗಾಗಿ ಅದು ತನ್ನ ಕಾರ್ಯವನ್ನು ಆರಂಭಿಸಲಿದೆ ಎಂಬ ವಿಶ್ವಾಸವಿದೆ. ಅದಕ್ಕಾಗಿ ನಾವು ಕಾಯಬೇಕಷ್ಟೇ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

lokesh

Recent Posts

ಶಾಲಾ ಮಕ್ಕಳಿಗೆ ಕಳಪೆ ಊಟ ; ಮುಖ್ಯ ಶಿಕ್ಷಕಿ ಅಮಾನತ್ತು

ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕಳಪೆ ಊಟ ನೀಡಿದ್ದ ಆರೋಪದ ಮೇಲೆ…

3 mins ago

ಹೃದಯಾಘಾತದಿಂದ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 80 ವರ್ಷ…

14 mins ago

ಪ್ರೇಮಿಗಳ ದಿನಾಚರಣೆಗೆ : ನಂದಿ ಬೆಟ್ಟಕ್ಕೆ ಪ್ರವೇಶ ನಿಷೇಧ

ಚಿಕ್ಕಬಳ್ಳಾಪುರ : ಬೆಂಗಳೂರಿನ ಸಮೀಪದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಗೆ ಫೆಬ್ರವರಿ 14 ರಂದು ಪ್ರೇಮಿಗಳ ದಿನ…

1 hour ago

ಬಸ್‌ಗಳಲ್ಲಿ ಸುರಕ್ಷತಾ ಕ್ರಮ ಅಳವಡಿಕೆ : ಫೆ.28 ಗಡುವು

ಬೆಂಗಳೂರು : ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಎಲ್ಲಾ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತಾ…

2 hours ago

ಮ.ಬೆಟ್ಟದಲ್ಲಿ ಭೀಕರ ಬಸ್‌ ಅಪಘಾತ : 20ಕ್ಕೂ ಹೆಚ್ಚು ಮಂದಿ ಗಂಭೀರ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಯ ಹೊತ್ತಲ್ಲೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು…

2 hours ago

ವಿದ್ಯಾರ್ಥಿಗಳ ಶಾಲಾ ಪ್ರವಾಸದಲ್ಲಿ ಸುರಕ್ಷತೆಗೆ ಆದ್ಯತೆ : ಸಚಿವ ಮಧು ಬಂಗಾರಪ್ಪ ಭರವಸೆ

ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

3 hours ago