ನವದೆಹಲಿ : ಎರಡು ವಾರಗಳ ಕಾಲ ಶಾಂತಿಯಿಂದಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, ರಾಜ್ಯದ ಉಖ್ರುಲ್ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಿಟಾನ್ ಸಮೀಪದ ಥೋವೈ ಗ್ರಾಮದಲ್ಲಿ ಎರಡು ಸಮುದಾಯಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಮೂವರು ಗ್ರಾಮಸ್ಥರು ಸಾವನ್ನಪ್ಪಿದ್ದಾರೆ. ಮುಂಜಾನೆಯೇ ಗುಂಡಿನ ಸದ್ದು ಕೇಳಿಬಂದಿದ್ದು, ಭದ್ರತಾ ಪಡೆಗಳು ಆ ಪ್ರದೇಶವನ್ನು ತಲುಪಿದ ನಂತರವೇ ಗುಂಡಿನ ಚಕಮಕಿ ನಿಂತಿದೆ.
ಮೃತದೇಹಗಳನ್ನು ವಶಕ್ಕೆ ಪಡೆಯುವ ಮೊದಲು ಸುತ್ತಮುತ್ತಲಿನ ಗ್ರಾಮಗಳು ಹಾಗೂ ಅರಣ್ಯ ಪ್ರದೇಶಗಳಲ್ಲಿ ನಾಗರಿಕ ಸಮಾಜದ ಗುಂಪುಗಳಿಂದ ಸಂಪೂರ್ಣ ಶೋಧ ಕಾರ್ಯಾಚರಣೆ ನಡೆಸಲಾಯಿತು.
ಕುಕಿ ಹಾಗೂ ಮೈತೇಯಿ ಸಮುದಾಯಗಳ ನಡುವೆ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ 180 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಹಾಗೂ ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ. ಪರಿಶಿಷ್ಟ ಪಂಗಡಗಳ (ಎಸ್ ಟಿ) ಸ್ಥಾನಮಾನಕ್ಕಾಗಿ ಮೈತೇಯಿಗಳು ಬೇಡಿಕೆ ಇಟ್ಟ ಮೇಲೆ ಮೇ 3 ರಂದು ಹಿಂಸಾಚಾರ ಭುಗಿಲೆದ್ದಿತ್ತು.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…