BREAKING NEWS

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಹೆಚ್ಚುವರಿ 900 ಯೋಧರನ್ನು ರವಾನಿಸಿದ ಕೇಂದ್ರ ಸರ್ಕಾರ

ಇಂಫಾಲ್ (ಮಣಿಪುರ) : ಮಣಿಪುರ ಗಲಭೆ ನಿಯಂತ್ರಣಕ್ಕೆ ಬರುವ ಲಕ್ಷಣಗಳೇ ಕಾಣುತ್ತಿಲ್ಲ. ರಾಜ್ಯಾದ್ಯಂತ ಕುಕಿ ಹಾಗೂ ಮೀಟಿ ಸಮುದಾಯಗಳು ಮತ್ತೊಮ್ಮೆ ಘರ್ಷಣೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 900ಕ್ಕೂ ಹೆಚ್ಚು ಭದ್ರತಾ ಪಡೆ ಯೋಧರನ್ನು ಮಣಿಪುರಕ್ಕೆ ರವಾನೆ ಮಾಡಿದೆ.

ಕೇಂದ್ರ ಸರ್ಕಾರದ ಗೃಹ ಸಚಿವಾಲಯವು 10ಕ್ಕೂ ಹೆಚ್ಚು ಕಂಪನಿಗಳ 900ಕ್ಕೂ ಹೆಚ್ಚು ಯೋಧರನ್ನು ಮಣಿಪುರಕ್ಕೆ ರವಾನೆ ಮಾಡಿದೆ ಎಂದು ಇಲ್ಲಿನ ಹಿರಿಯ ಪೊಲೀಸ್ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಈ 900 ಯೋಧರ ಪೈಕಿ ಪ್ಯಾರಾ ಮಿಲಿಟರಿ ಪಡೆ, ಸಿಆರ್‌ಪಿಎಫ್, ಬಿಎಸ್‌ಎಫ್, ಐಟಿಬಿಪಿ ಹಾಗೂ ಎಸ್‌ಎಸ್‌ಬಿ ಪಡೆಗಳ ಯೋಧರೂ ಸೇರಿದ್ದಾರೆ.

ಶನಿವಾರ ರಾತ್ರಿಯೇ 900 ಯೋಧರು ಮಣಿಪುರ ರಾಜಧಾನಿ ಇಂಫಾಲ್‌ಗೆ ಆಗಮಿಸಿದ್ದಾರೆ. ಮಣಿಪುರ ರಾಜ್ಯದ ಹಲವು ಜಿಲ್ಲೆಗಳಿಗೆ ಈ ಯೋಧರನ್ನು ರವಾನಿಸಲಾಗಿದೆ. ಭಾನುವಾರದಿಂದಲೇ ಈ ಯೋಧರು ಕಾರ್ಯಾರಂಭ ಮಾಡಿದ್ದಾರೆ.

ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಆರಂಭವಾದ ದಿನದಿಂದ ಹಿಡಿದು ಇಲ್ಲಿಯವರೆಗೆ 40 ಸಾವಿರಕ್ಕೂ ಹೆಚ್ಚು ಸೇನಾ ಪಡೆ ಯೋಧರನ್ನು ಮಣಿಪುರಕ್ಕೆ ರವಾನೆ ಮಾಡಲಾಗಿದೆ. ಕೇಂದ್ರ ಗೃಹ ಸಚಿವಾಲಯವು ಶತಾಯಗತಾಯ ಹಿಂಸಾಚಾರನ್ನು ಹತ್ತಿಕ್ಕಲೇ ಬೇಕು ಎಂದು ನಿರ್ಧರಿಸಿದ್ದು, ಅಸ್ಸಾಂ ರೈಫಲ್ಸ್, ಕೇಂದ್ರೀಯ ಶಸ್ತ್ರಾಸ್ತ್ರ ಪೊಲೀಸ್ ಪಡೆ ಸೇರಿದಂತೆ ಹಲವು ವಿಭಾಗಗಳ ಯೋಧರನ್ನು ಮಣಿಪುರದಲ್ಲಿ ನಿಯೋಜನೆ ಮಾಡಿದೆ.

ಇತ್ತ ಮಣಿಪುರದಲ್ಲಿ ಇರುವ ಮೀಟಿ ಹಾಗೂ ಕುಕಿ ಸಮುದಾಯಗಳ ನಾಯಕರು ರಾಜ್ಯದ ಪೊಲೀಸ್ ಪಡೆ ಹಾಗೂ ಕೇಂದ್ರೀಯ ಪಡೆಗಳು ನಮ್ಮ ನಡುವೆ ಒಡೆದು ಆಳುವ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿದ್ದಾರೆ. ಕೆಲವು ಮಹಿಳಾ ಸಂಘಟನೆಗಳು ಭದ್ರತಾ ಪಡೆಗಳ ಕಾರ್ಯಾಚರಣೆಗೆ ತೊಡಕು ಉಂಟು ಮಾಡುತ್ತಿದ್ದಾರೆ. ರಸ್ತೆಗಳನ್ನು ಬಂದ್ ಮಾಡಲಾಗುತ್ತಿದೆ. ಸೇನಾ ಪಡೆಗಳ ಸುಗಮ ಸಂಚಾರಕ್ಕೆ ಅಡ್ಡಿ ಮಾಡಲಾಗುತ್ತಿದೆ.

ಈ ನಡುವೆ ಮಣಿಪುರ ಪೊಲೀಸರು ರಾಜ್ಯಾದ್ಯಂತ ಸರ್ಕಾರಿ ಶಸ್ತ್ರಾಗಾರಗಳಿಂದ ಲೂಟಿ ಮಾಡಲಾಗಿದ್ದ 1,195 ಶಸ್ತ್ರಾಸ್ತ್ರಗಳು ಹಾಗೂ 14,322 ಮದ್ದು ಗುಂಡುಗಳನ್ನು ಮೀಟಿ ಹಾಗೂ ಕುಕಿ ಸಮುದಾಯದ ಪ್ರತಿಭಟನಾಕಾರರಿಂದ ವಶಕ್ಕೆ ಪಡೆದಿದ್ದಾರೆ. ಮಣಿಪುರದಲ್ಲಿ ಮೇ 3 ರಂದು ಜನಾಂಗೀಯ ಸಂಘರ್ಷ ಆರಂಭವಾದ ದಿನದಿಂದ ಹಿಡಿದು ಇಲ್ಲಿಯವರೆಗೆ 4 ಸಾವಿರಕ್ಕೂ ಹೆಚ್ಚು ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಹಾಗೂ ಲಕ್ಷಾಂತರ ಮದ್ದು ಗುಂಡುಗಳನ್ನು ಸರ್ಕಾರಿ ಶಸ್ತ್ರಾಗಾರಗಳು ಹಾಗೂ ಪೊಲೀಸ್ ಠಾಣೆಗಳಿಂದ ಕಳ್ಳತನ ಮಾಡಲಾಗಿದೆ.

ಮಣಿಪುರದಲ್ಲಿ ಗಲಭೆ ಆರಂಭವಾದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಹಲವು ಬಾರಿ ಮಣಿಪುರಕ್ಕೆ ಭೇಟಿ ನೀಡಿ ಭದ್ರತಾ ಸ್ಥಿತಿಯ ಅವಲೋಕನ ನಡೆಸಿದ್ದಾರೆ. ವಿವಿಧ ಸಮುದಾಯಗಳ ಜೊತೆ ಮಾತುಕತೆ ಕೂಡಾ ನಡೆಸಿದ್ದಾರೆ. ಇತ್ತ ವಿಪಕ್ಷ ಇಂಡಿಯಾ ಮೈತ್ರಿ ಕೂಟದ ಸಂಸದರ ನಿಯೋಗ ಕೂಡಾ ಇತ್ತೀಚೆಗಷ್ಟೇ ಮಣಿಪುರದಲ್ಲಿ ಅವಲೋಕನ ನಡೆಸಿ ಸರ್ಕಾರದ ಲೋಪ ದೋಷಗಳತ್ತ ಬೊಟ್ಟು ಮಾಡಿತ್ತು.

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

5 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

6 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

6 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

6 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

6 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

6 hours ago