BREAKING NEWS

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಹೆಚ್ಚುವರಿ 900 ಯೋಧರನ್ನು ರವಾನಿಸಿದ ಕೇಂದ್ರ ಸರ್ಕಾರ

ಇಂಫಾಲ್ (ಮಣಿಪುರ) : ಮಣಿಪುರ ಗಲಭೆ ನಿಯಂತ್ರಣಕ್ಕೆ ಬರುವ ಲಕ್ಷಣಗಳೇ ಕಾಣುತ್ತಿಲ್ಲ. ರಾಜ್ಯಾದ್ಯಂತ ಕುಕಿ ಹಾಗೂ ಮೀಟಿ ಸಮುದಾಯಗಳು ಮತ್ತೊಮ್ಮೆ ಘರ್ಷಣೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 900ಕ್ಕೂ ಹೆಚ್ಚು ಭದ್ರತಾ ಪಡೆ ಯೋಧರನ್ನು ಮಣಿಪುರಕ್ಕೆ ರವಾನೆ ಮಾಡಿದೆ.

ಕೇಂದ್ರ ಸರ್ಕಾರದ ಗೃಹ ಸಚಿವಾಲಯವು 10ಕ್ಕೂ ಹೆಚ್ಚು ಕಂಪನಿಗಳ 900ಕ್ಕೂ ಹೆಚ್ಚು ಯೋಧರನ್ನು ಮಣಿಪುರಕ್ಕೆ ರವಾನೆ ಮಾಡಿದೆ ಎಂದು ಇಲ್ಲಿನ ಹಿರಿಯ ಪೊಲೀಸ್ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಈ 900 ಯೋಧರ ಪೈಕಿ ಪ್ಯಾರಾ ಮಿಲಿಟರಿ ಪಡೆ, ಸಿಆರ್‌ಪಿಎಫ್, ಬಿಎಸ್‌ಎಫ್, ಐಟಿಬಿಪಿ ಹಾಗೂ ಎಸ್‌ಎಸ್‌ಬಿ ಪಡೆಗಳ ಯೋಧರೂ ಸೇರಿದ್ದಾರೆ.

ಶನಿವಾರ ರಾತ್ರಿಯೇ 900 ಯೋಧರು ಮಣಿಪುರ ರಾಜಧಾನಿ ಇಂಫಾಲ್‌ಗೆ ಆಗಮಿಸಿದ್ದಾರೆ. ಮಣಿಪುರ ರಾಜ್ಯದ ಹಲವು ಜಿಲ್ಲೆಗಳಿಗೆ ಈ ಯೋಧರನ್ನು ರವಾನಿಸಲಾಗಿದೆ. ಭಾನುವಾರದಿಂದಲೇ ಈ ಯೋಧರು ಕಾರ್ಯಾರಂಭ ಮಾಡಿದ್ದಾರೆ.

ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಆರಂಭವಾದ ದಿನದಿಂದ ಹಿಡಿದು ಇಲ್ಲಿಯವರೆಗೆ 40 ಸಾವಿರಕ್ಕೂ ಹೆಚ್ಚು ಸೇನಾ ಪಡೆ ಯೋಧರನ್ನು ಮಣಿಪುರಕ್ಕೆ ರವಾನೆ ಮಾಡಲಾಗಿದೆ. ಕೇಂದ್ರ ಗೃಹ ಸಚಿವಾಲಯವು ಶತಾಯಗತಾಯ ಹಿಂಸಾಚಾರನ್ನು ಹತ್ತಿಕ್ಕಲೇ ಬೇಕು ಎಂದು ನಿರ್ಧರಿಸಿದ್ದು, ಅಸ್ಸಾಂ ರೈಫಲ್ಸ್, ಕೇಂದ್ರೀಯ ಶಸ್ತ್ರಾಸ್ತ್ರ ಪೊಲೀಸ್ ಪಡೆ ಸೇರಿದಂತೆ ಹಲವು ವಿಭಾಗಗಳ ಯೋಧರನ್ನು ಮಣಿಪುರದಲ್ಲಿ ನಿಯೋಜನೆ ಮಾಡಿದೆ.

ಇತ್ತ ಮಣಿಪುರದಲ್ಲಿ ಇರುವ ಮೀಟಿ ಹಾಗೂ ಕುಕಿ ಸಮುದಾಯಗಳ ನಾಯಕರು ರಾಜ್ಯದ ಪೊಲೀಸ್ ಪಡೆ ಹಾಗೂ ಕೇಂದ್ರೀಯ ಪಡೆಗಳು ನಮ್ಮ ನಡುವೆ ಒಡೆದು ಆಳುವ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿದ್ದಾರೆ. ಕೆಲವು ಮಹಿಳಾ ಸಂಘಟನೆಗಳು ಭದ್ರತಾ ಪಡೆಗಳ ಕಾರ್ಯಾಚರಣೆಗೆ ತೊಡಕು ಉಂಟು ಮಾಡುತ್ತಿದ್ದಾರೆ. ರಸ್ತೆಗಳನ್ನು ಬಂದ್ ಮಾಡಲಾಗುತ್ತಿದೆ. ಸೇನಾ ಪಡೆಗಳ ಸುಗಮ ಸಂಚಾರಕ್ಕೆ ಅಡ್ಡಿ ಮಾಡಲಾಗುತ್ತಿದೆ.

ಈ ನಡುವೆ ಮಣಿಪುರ ಪೊಲೀಸರು ರಾಜ್ಯಾದ್ಯಂತ ಸರ್ಕಾರಿ ಶಸ್ತ್ರಾಗಾರಗಳಿಂದ ಲೂಟಿ ಮಾಡಲಾಗಿದ್ದ 1,195 ಶಸ್ತ್ರಾಸ್ತ್ರಗಳು ಹಾಗೂ 14,322 ಮದ್ದು ಗುಂಡುಗಳನ್ನು ಮೀಟಿ ಹಾಗೂ ಕುಕಿ ಸಮುದಾಯದ ಪ್ರತಿಭಟನಾಕಾರರಿಂದ ವಶಕ್ಕೆ ಪಡೆದಿದ್ದಾರೆ. ಮಣಿಪುರದಲ್ಲಿ ಮೇ 3 ರಂದು ಜನಾಂಗೀಯ ಸಂಘರ್ಷ ಆರಂಭವಾದ ದಿನದಿಂದ ಹಿಡಿದು ಇಲ್ಲಿಯವರೆಗೆ 4 ಸಾವಿರಕ್ಕೂ ಹೆಚ್ಚು ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಹಾಗೂ ಲಕ್ಷಾಂತರ ಮದ್ದು ಗುಂಡುಗಳನ್ನು ಸರ್ಕಾರಿ ಶಸ್ತ್ರಾಗಾರಗಳು ಹಾಗೂ ಪೊಲೀಸ್ ಠಾಣೆಗಳಿಂದ ಕಳ್ಳತನ ಮಾಡಲಾಗಿದೆ.

ಮಣಿಪುರದಲ್ಲಿ ಗಲಭೆ ಆರಂಭವಾದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಹಲವು ಬಾರಿ ಮಣಿಪುರಕ್ಕೆ ಭೇಟಿ ನೀಡಿ ಭದ್ರತಾ ಸ್ಥಿತಿಯ ಅವಲೋಕನ ನಡೆಸಿದ್ದಾರೆ. ವಿವಿಧ ಸಮುದಾಯಗಳ ಜೊತೆ ಮಾತುಕತೆ ಕೂಡಾ ನಡೆಸಿದ್ದಾರೆ. ಇತ್ತ ವಿಪಕ್ಷ ಇಂಡಿಯಾ ಮೈತ್ರಿ ಕೂಟದ ಸಂಸದರ ನಿಯೋಗ ಕೂಡಾ ಇತ್ತೀಚೆಗಷ್ಟೇ ಮಣಿಪುರದಲ್ಲಿ ಅವಲೋಕನ ನಡೆಸಿ ಸರ್ಕಾರದ ಲೋಪ ದೋಷಗಳತ್ತ ಬೊಟ್ಟು ಮಾಡಿತ್ತು.

andolanait

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

8 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

11 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

11 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

11 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

11 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

11 hours ago