BREAKING NEWS

ಎಸ್​ಟಿ ಮೀಸಲು ವಿಚಾರವಾಗಿ ಮಣಿಪುರದಲ್ಲಿ ಹಿಂಸಾಚಾರ : 8 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ, ಇಂಟರ್​ನೆಟ್ ಸ್ಥಗಿತ

ಮಣಿಪುರ : ಮಣಿಪುರದಲ್ಲಿ ಎಸ್​ಟಿ ಮೀಸಲಾತಿ ವಿಚಾರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. 8 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಐದು ದಿನಗಳ ಕಾಲ ಇಂಟರ್​ನೆಟ್ ಸ್ಥಗಿತಗೊಳಿಸಲಾಗಿದೆ. ಬಹಳಷ್ಟು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಭಾರತೀಯ ಸೇನೆ ಹೇಳಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬುಡಕಟ್ಟು ಜನರಲ್ಲದ ಪ್ರಾಬಲ್ಯದ ಇಂಫಾಲ್ ಪಶ್ಚಿಮ, ಕಾಕ್ಚಿಂಗ್, ತೌಬಲ್, ಜಿರಿಬಾಮ್ ಮತ್ತು ಬಿಷ್ಣುಪುರ್ ಜಿಲ್ಲೆಗಳು ಮತ್ತು ಬುಡಕಟ್ಟು ಪ್ರಾಬಲ್ಯವಿರುವ ಚುರಾಚಂದ್‌ಪುರ, ಕಾಂಗ್‌ಪೋಕ್ಪಿ ಮತ್ತು ತೆಂಗ್‌ನೌಪಾಲ್ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ.

ಸೇನೆಯು ಹಿಂಸಾಪೀಡಿತ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಸ್ಥಳೀಯ ಆಡಳಿತಕ್ಕೆ ಸಹಾಯ ಮಾಡುತ್ತಿದೆ. ಮೇಟಿ ಸಮುದಾಯವನ್ನು ಎಸ್‌ಸಿ ವರ್ಗಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ಪ್ರತಿಭಟನಾ ರ್ಯಾಲಿಯನ್ನು ಆಯೋಜಿಸಲಾಗಿದೆ

ಮೇಟಿ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ವರ್ಗಕ್ಕೆ ಸೇರಿಸಬೇಕೆಂಬ ತಮ್ಮ ಬೇಡಿಕೆಯನ್ನು ಪ್ರತಿಭಟಿಸಲು ವಿದ್ಯಾರ್ಥಿಗಳ ಸಂಘಟನೆಯು ಕರೆ ನೀಡಿದ್ದ ‘ಬುಡಕಟ್ಟು ಏಕತಾ ಮೆರವಣಿಗೆ’ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.

ಮೇಟಿ ಸಮುದಾಯವನ್ನು ಎಸ್‌ಟಿ ವರ್ಗಕ್ಕೆ ಸೇರಿಸಬೇಕೆಂಬ ಬೇಡಿಕೆ ತೀವ್ರಗೊಳ್ಳುತ್ತಿದ್ದು, ಇದರ ವಿರುದ್ಧ ಮೆರವಣಿಗೆಗೆ ಕರೆ ನೀಡಿರುವುದಾಗಿ ತಿಳಿಸಿದರು. ರ್ಯಾಲಿಯಲ್ಲಿ ಸಾವಿರಾರು ಚಳುವಳಿಗಾರರು ಭಾಗವಹಿಸಿದ್ದರು ಮತ್ತು ಟೋರ್ಬಂಗ್ ಪ್ರದೇಶದಲ್ಲಿ ಬುಡಕಟ್ಟು ಮತ್ತು ಬುಡಕಟ್ಟು ಅಲ್ಲದವರ ನಡುವೆ ಹಿಂಸಾಚಾರ ವರದಿಯಾಗಿದೆ.

lokesh

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

5 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

5 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

6 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

6 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

6 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

6 hours ago