BREAKING NEWS

ಎಸ್​ಟಿ ಮೀಸಲು ವಿಚಾರವಾಗಿ ಮಣಿಪುರದಲ್ಲಿ ಹಿಂಸಾಚಾರ : 8 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ, ಇಂಟರ್​ನೆಟ್ ಸ್ಥಗಿತ

ಮಣಿಪುರ : ಮಣಿಪುರದಲ್ಲಿ ಎಸ್​ಟಿ ಮೀಸಲಾತಿ ವಿಚಾರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. 8 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಐದು ದಿನಗಳ ಕಾಲ ಇಂಟರ್​ನೆಟ್ ಸ್ಥಗಿತಗೊಳಿಸಲಾಗಿದೆ. ಬಹಳಷ್ಟು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಭಾರತೀಯ ಸೇನೆ ಹೇಳಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬುಡಕಟ್ಟು ಜನರಲ್ಲದ ಪ್ರಾಬಲ್ಯದ ಇಂಫಾಲ್ ಪಶ್ಚಿಮ, ಕಾಕ್ಚಿಂಗ್, ತೌಬಲ್, ಜಿರಿಬಾಮ್ ಮತ್ತು ಬಿಷ್ಣುಪುರ್ ಜಿಲ್ಲೆಗಳು ಮತ್ತು ಬುಡಕಟ್ಟು ಪ್ರಾಬಲ್ಯವಿರುವ ಚುರಾಚಂದ್‌ಪುರ, ಕಾಂಗ್‌ಪೋಕ್ಪಿ ಮತ್ತು ತೆಂಗ್‌ನೌಪಾಲ್ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ.

ಸೇನೆಯು ಹಿಂಸಾಪೀಡಿತ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಸ್ಥಳೀಯ ಆಡಳಿತಕ್ಕೆ ಸಹಾಯ ಮಾಡುತ್ತಿದೆ. ಮೇಟಿ ಸಮುದಾಯವನ್ನು ಎಸ್‌ಸಿ ವರ್ಗಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ಪ್ರತಿಭಟನಾ ರ್ಯಾಲಿಯನ್ನು ಆಯೋಜಿಸಲಾಗಿದೆ

ಮೇಟಿ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ವರ್ಗಕ್ಕೆ ಸೇರಿಸಬೇಕೆಂಬ ತಮ್ಮ ಬೇಡಿಕೆಯನ್ನು ಪ್ರತಿಭಟಿಸಲು ವಿದ್ಯಾರ್ಥಿಗಳ ಸಂಘಟನೆಯು ಕರೆ ನೀಡಿದ್ದ ‘ಬುಡಕಟ್ಟು ಏಕತಾ ಮೆರವಣಿಗೆ’ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.

ಮೇಟಿ ಸಮುದಾಯವನ್ನು ಎಸ್‌ಟಿ ವರ್ಗಕ್ಕೆ ಸೇರಿಸಬೇಕೆಂಬ ಬೇಡಿಕೆ ತೀವ್ರಗೊಳ್ಳುತ್ತಿದ್ದು, ಇದರ ವಿರುದ್ಧ ಮೆರವಣಿಗೆಗೆ ಕರೆ ನೀಡಿರುವುದಾಗಿ ತಿಳಿಸಿದರು. ರ್ಯಾಲಿಯಲ್ಲಿ ಸಾವಿರಾರು ಚಳುವಳಿಗಾರರು ಭಾಗವಹಿಸಿದ್ದರು ಮತ್ತು ಟೋರ್ಬಂಗ್ ಪ್ರದೇಶದಲ್ಲಿ ಬುಡಕಟ್ಟು ಮತ್ತು ಬುಡಕಟ್ಟು ಅಲ್ಲದವರ ನಡುವೆ ಹಿಂಸಾಚಾರ ವರದಿಯಾಗಿದೆ.

lokesh

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

4 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

4 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

4 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

4 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

17 hours ago