ಅಮೃತಸರ: ಸಿಖ್ ಗುರುದ್ವಾರಗಳ (ತಿದ್ದುಪಡಿ) ಮಸೂದೆ 2023 ಹಿಂಪಡೆಯದಿದ್ದರೆ ಎಎಪಿ ನೇತೃತ್ವದ ಪಂಜಾಬ್ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿ (ಎಸ್ಜಿಪಿಸಿ) ಮುಖ್ಯಸ್ಥ ಹರ್ಜಿಂದರ್ ಸಿಂಗ್ ಧಾಮಿ ಸೋಮವಾರ ಎಚ್ಚರಿಸಿದ್ದಾರೆ.
ಅಮೃತಸರದಲ್ಲಿ ಮಸೂದೆ ಜಾರಿಗೆ ತರುವ ಸರ್ಕಾರದ ವಿರುದ್ಧ ನಡೆದ ಎಸ್ಜಿಪಿಸಿಯ ವಿಶೇಷ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಧಾಮಿ, ಮುಖ್ಯಮಂತ್ರಿ ಭಗವಂತ್ ಮಾನ್ ಎಸ್ಜಿಪಿಸಿ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಮತ್ತು ಎಸ್ಜಿಪಿಸಿಯನ್ನು ವಶಪಡಿಸಿಕೊಳ್ಳುವ ಉದ್ದೇಶದಿಂದ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಿಖ್ ವಿರೋಧಿ ಚಿಂತನೆಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಗೋಲ್ಡನ್ ಟೆಂಪಲ್ನಿಂದ ಗುರ್ಬಾನಿಯ ಉಚಿತ ಪ್ರಸಾರದ ಖಾತ್ರಿ ಹೊಂದಿರುವ ಸಿಖ್ ಗುರುದ್ವಾರಗಳ (ತಿದ್ದುಪಡಿ) ಮಸೂದೆ 2023ನ್ನು ಪಂಜಾಬ್ ಅಸೆಂಬ್ಲಿ ಜೂನ್ 20 ರಂದು ಅಂಗೀಕರಿಸಿತು. ಈ ಮಸೂದೆಯನ್ನು ತಕ್ಷಣವೇ ಹಿಂಪಡೆಯಬೇಕೆಂದು ಅವರು ಆಗ್ರಹಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…