BREAKING NEWS

ಒಂದೇ ಪಂದ್ಯದಲ್ಲಿ ಕ್ರಿಕೆಟ್‌ ದೇವರ 3 ದಾಖಲೆ ಮುರಿದ ವಿರಾಟ್‌ ಕೊಹ್ಲಿ

ಇಂದು ( ನವೆಂಬರ್‌ 15 ) ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್‌ ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಮ್‌ ಇಂಡಿಯಾ ವಿರಾಟ್‌ ಕೊಹ್ಲಿ ಹಾಗೂ ಶ್ರೇಯಸ್‌ ಐಯ್ಯರ್‌ ಅಬ್ಬರದ ಶತಕದ ನೆರವಿನಿಂದ 50 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 397 ರನ್‌ ಕಲೆಹಾಕಿ ಎದುರಾಳಿ ನ್ಯೂಜಿಲೆಂಡ್‌ ತಂಡಕ್ಕೆ ಗೆಲ್ಲಲು 398 ರನ್‌ಗಳ ಕಠಿಣ ಗುರಿಯನ್ನು ನೀಡಿದೆ.

ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಜವಾಬ್ದಾರಿಯುತ ಬ್ಯಾಟಿಂಗ್‌ ನಡೆಸಿದ ವಿರಾಟ್ ಕೊಹ್ಲಿ 113 ಎಸೆತಗಳಲ್ಲಿ 117 ರನ್‌ ಬಾರಿಸುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ ಬರೆದಿದ್ದಾರೆ. ಹೌದು ಏಕದಿನ ಕ್ರಿಕೆಟ್‌ ಮಾದರಿಯಲ್ಲಿ ತನ್ನ 50ನೇ ಶತಕ ಬಾರಿಸಿದ ವಿರಾಟ್‌ ಕೊಹ್ಲಿ ಅತಿಹೆಚ್ಚು ಶತಕ ಬಾರಿಸಿದ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ. ಈ ಅಮೋಘ ಇನ್ನಿಂಗ್ಸ್‌ ಮೂಲಕ ಕೊಹ್ಲಿ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಹೆಸರಿನಲ್ಲಿದ್ದ 3 ದಾಖಲೆಗಳನ್ನು ಮುರಿದು ಹಾಕಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

ಸಚಿನ್‌ ತೆಂಡೂಲ್ಕರ್‌ ಏಕದಿನ ಕ್ರಿಕೆಟ್‌ ಮಾದರಿಯಲ್ಲಿ 49 ಶತಕಗಳನ್ನು ಬಾರಿಸುವ ಮೂಲಕ ಅತಿಹೆಚ್ಚು ಏಕದಿನ ಶತಕಗಳನ್ನು ಬಾರಿಸಿದ ಕ್ರಿಕೆಟರ್‌ ಎಂಬ ದಾಖಲೆ ಹೊಂದಿದ್ರು. ವಿರಾಟ್‌ ಕೊಹ್ಲಿ 50ನೇ ಶತಕ ಬಾರಿಸುವ ಮೂಲಕ ಸಚಿನ್ ಹೆಸರಿನಲ್ಲಿದ್ದ ಈ ದಾಖಲೆಯನ್ನು ಅಳಿಸಿಹಾಕಿದ್ದಾರೆ.

ಇನ್ನು ಈ ದಾಖಲೆ ಮಾತ್ರವಲ್ಲದೇ ಸಚಿನ್‌ ಹೆಸರಿನಲ್ಲಿದ್ದ ವಿಶ್ವಕಪ್‌ ಆವೃತ್ತಿಯೊಂದರಲ್ಲಿ ಅತಿಹೆಚ್ಚು ರನ್‌ ಬಾರಿಸಿದ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನೂ ಸಹ ವಿರಾಟ್‌ ಕೊಹ್ಲಿ ಮುರಿದಿದ್ದಾರೆ. ಈ ಹಿಂದೆ ಸಚಿನ್‌ ತೆಂಡೂಲ್ಕರ್‌ 2003ರ ವಿಶ್ವಕಪ್‌ ಟೂರ್ನಿಯಲ್ಲಿ 673 ರನ್‌ಗಳನ್ನು ಬಾರಿಸಿದ್ದರು. ಆದರೆ ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯದ ನಂತರ ವಿರಾಟ್‌ ಕೊಹ್ಲಿ ಈ ಬಾರಿಯ ವಿಶ್ವಕಪ್‌ನಲ್ಲಿ 711 ರನ್‌ಗಳನ್ನು ಗಳಿಸಿದ್ದು ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಅಲ್ಲದೇ ಸಚಿನ್‌ ತೆಂಡೂಲ್ಕರ್‌ ಹೆಸರಿನಲ್ಲಿದ್ದ ಮತ್ತೊಂದು ದಾಖಲೆಯಾದ ವಿಶ್ವಕಪ್‌ ಆವೃತ್ತಿಯೊಂದರಲ್ಲಿ ಅತಿಹೆಚ್ಚು 50+ ರನ್‌ ಅನ್ನೂ ಸಹ ವಿರಾಟ್‌ ಕೊಹ್ಲಿ ಸರಿಗಟ್ಟಿದ್ದಾರೆ. ಸಚಿನ್‌ ತೆಂಡೂಲ್ಕರ್‌ ಈ 2003ರ ವಿಶ್ವಕಪ್‌ ಟೂರ್ನಿಯಲ್ಲಿ 7 ಬಾರಿ 50+ ಸ್ಕೋರ್‌ ಮಾಡಿದ್ದರು. ಆದರೆ ವಿರಾಟ್‌ ಕೊಹ್ಲಿ ನ್ಯೂಜಿಲೆಂಡ್‌ ವಿರುದ್ಧದ ಇಂದಿನ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಈ ಆವೃತ್ತಿಯಲ್ಲಿ 8ನೇ ಬಾರಿಗೆ 50+ ಸ್ಕೋರ್‌ ಮಾಡಿದ್ದಾರೆ. 

andolana

Recent Posts

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

1 hour ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

1 hour ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

2 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

2 hours ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

2 hours ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

3 hours ago