ಇಂದು ( ನವೆಂಬರ್ 15 ) ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಐಯ್ಯರ್ ಅಬ್ಬರದ ಶತಕದ ನೆರವಿನಿಂದ 50 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್ ಕಲೆಹಾಕಿ ಎದುರಾಳಿ ನ್ಯೂಜಿಲೆಂಡ್ ತಂಡಕ್ಕೆ ಗೆಲ್ಲಲು 398 ರನ್ಗಳ ಕಠಿಣ ಗುರಿಯನ್ನು ನೀಡಿದೆ.
ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ 113 ಎಸೆತಗಳಲ್ಲಿ 117 ರನ್ ಬಾರಿಸುವ ಮೂಲಕ ಏಕದಿನ ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ಬರೆದಿದ್ದಾರೆ. ಹೌದು ಏಕದಿನ ಕ್ರಿಕೆಟ್ ಮಾದರಿಯಲ್ಲಿ ತನ್ನ 50ನೇ ಶತಕ ಬಾರಿಸಿದ ವಿರಾಟ್ ಕೊಹ್ಲಿ ಅತಿಹೆಚ್ಚು ಶತಕ ಬಾರಿಸಿದ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಈ ಅಮೋಘ ಇನ್ನಿಂಗ್ಸ್ ಮೂಲಕ ಕೊಹ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ 3 ದಾಖಲೆಗಳನ್ನು ಮುರಿದು ಹಾಕಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್ ಮಾದರಿಯಲ್ಲಿ 49 ಶತಕಗಳನ್ನು ಬಾರಿಸುವ ಮೂಲಕ ಅತಿಹೆಚ್ಚು ಏಕದಿನ ಶತಕಗಳನ್ನು ಬಾರಿಸಿದ ಕ್ರಿಕೆಟರ್ ಎಂಬ ದಾಖಲೆ ಹೊಂದಿದ್ರು. ವಿರಾಟ್ ಕೊಹ್ಲಿ 50ನೇ ಶತಕ ಬಾರಿಸುವ ಮೂಲಕ ಸಚಿನ್ ಹೆಸರಿನಲ್ಲಿದ್ದ ಈ ದಾಖಲೆಯನ್ನು ಅಳಿಸಿಹಾಕಿದ್ದಾರೆ.
ಇನ್ನು ಈ ದಾಖಲೆ ಮಾತ್ರವಲ್ಲದೇ ಸಚಿನ್ ಹೆಸರಿನಲ್ಲಿದ್ದ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿಹೆಚ್ಚು ರನ್ ಬಾರಿಸಿದ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನೂ ಸಹ ವಿರಾಟ್ ಕೊಹ್ಲಿ ಮುರಿದಿದ್ದಾರೆ. ಈ ಹಿಂದೆ ಸಚಿನ್ ತೆಂಡೂಲ್ಕರ್ 2003ರ ವಿಶ್ವಕಪ್ ಟೂರ್ನಿಯಲ್ಲಿ 673 ರನ್ಗಳನ್ನು ಬಾರಿಸಿದ್ದರು. ಆದರೆ ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯದ ನಂತರ ವಿರಾಟ್ ಕೊಹ್ಲಿ ಈ ಬಾರಿಯ ವಿಶ್ವಕಪ್ನಲ್ಲಿ 711 ರನ್ಗಳನ್ನು ಗಳಿಸಿದ್ದು ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಅಲ್ಲದೇ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಮತ್ತೊಂದು ದಾಖಲೆಯಾದ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿಹೆಚ್ಚು 50+ ರನ್ ಅನ್ನೂ ಸಹ ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ. ಸಚಿನ್ ತೆಂಡೂಲ್ಕರ್ ಈ 2003ರ ವಿಶ್ವಕಪ್ ಟೂರ್ನಿಯಲ್ಲಿ 7 ಬಾರಿ 50+ ಸ್ಕೋರ್ ಮಾಡಿದ್ದರು. ಆದರೆ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಇಂದಿನ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಈ ಆವೃತ್ತಿಯಲ್ಲಿ 8ನೇ ಬಾರಿಗೆ 50+ ಸ್ಕೋರ್ ಮಾಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…