BREAKING NEWS

ಒಂದೇ ಪಂದ್ಯದಲ್ಲಿ ಕ್ರಿಕೆಟ್‌ ದೇವರ 3 ದಾಖಲೆ ಮುರಿದ ವಿರಾಟ್‌ ಕೊಹ್ಲಿ

ಇಂದು ( ನವೆಂಬರ್‌ 15 ) ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್‌ ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಮ್‌ ಇಂಡಿಯಾ ವಿರಾಟ್‌ ಕೊಹ್ಲಿ ಹಾಗೂ ಶ್ರೇಯಸ್‌ ಐಯ್ಯರ್‌ ಅಬ್ಬರದ ಶತಕದ ನೆರವಿನಿಂದ 50 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 397 ರನ್‌ ಕಲೆಹಾಕಿ ಎದುರಾಳಿ ನ್ಯೂಜಿಲೆಂಡ್‌ ತಂಡಕ್ಕೆ ಗೆಲ್ಲಲು 398 ರನ್‌ಗಳ ಕಠಿಣ ಗುರಿಯನ್ನು ನೀಡಿದೆ.

ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಜವಾಬ್ದಾರಿಯುತ ಬ್ಯಾಟಿಂಗ್‌ ನಡೆಸಿದ ವಿರಾಟ್ ಕೊಹ್ಲಿ 113 ಎಸೆತಗಳಲ್ಲಿ 117 ರನ್‌ ಬಾರಿಸುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ ಬರೆದಿದ್ದಾರೆ. ಹೌದು ಏಕದಿನ ಕ್ರಿಕೆಟ್‌ ಮಾದರಿಯಲ್ಲಿ ತನ್ನ 50ನೇ ಶತಕ ಬಾರಿಸಿದ ವಿರಾಟ್‌ ಕೊಹ್ಲಿ ಅತಿಹೆಚ್ಚು ಶತಕ ಬಾರಿಸಿದ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ. ಈ ಅಮೋಘ ಇನ್ನಿಂಗ್ಸ್‌ ಮೂಲಕ ಕೊಹ್ಲಿ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಹೆಸರಿನಲ್ಲಿದ್ದ 3 ದಾಖಲೆಗಳನ್ನು ಮುರಿದು ಹಾಕಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

ಸಚಿನ್‌ ತೆಂಡೂಲ್ಕರ್‌ ಏಕದಿನ ಕ್ರಿಕೆಟ್‌ ಮಾದರಿಯಲ್ಲಿ 49 ಶತಕಗಳನ್ನು ಬಾರಿಸುವ ಮೂಲಕ ಅತಿಹೆಚ್ಚು ಏಕದಿನ ಶತಕಗಳನ್ನು ಬಾರಿಸಿದ ಕ್ರಿಕೆಟರ್‌ ಎಂಬ ದಾಖಲೆ ಹೊಂದಿದ್ರು. ವಿರಾಟ್‌ ಕೊಹ್ಲಿ 50ನೇ ಶತಕ ಬಾರಿಸುವ ಮೂಲಕ ಸಚಿನ್ ಹೆಸರಿನಲ್ಲಿದ್ದ ಈ ದಾಖಲೆಯನ್ನು ಅಳಿಸಿಹಾಕಿದ್ದಾರೆ.

ಇನ್ನು ಈ ದಾಖಲೆ ಮಾತ್ರವಲ್ಲದೇ ಸಚಿನ್‌ ಹೆಸರಿನಲ್ಲಿದ್ದ ವಿಶ್ವಕಪ್‌ ಆವೃತ್ತಿಯೊಂದರಲ್ಲಿ ಅತಿಹೆಚ್ಚು ರನ್‌ ಬಾರಿಸಿದ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನೂ ಸಹ ವಿರಾಟ್‌ ಕೊಹ್ಲಿ ಮುರಿದಿದ್ದಾರೆ. ಈ ಹಿಂದೆ ಸಚಿನ್‌ ತೆಂಡೂಲ್ಕರ್‌ 2003ರ ವಿಶ್ವಕಪ್‌ ಟೂರ್ನಿಯಲ್ಲಿ 673 ರನ್‌ಗಳನ್ನು ಬಾರಿಸಿದ್ದರು. ಆದರೆ ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯದ ನಂತರ ವಿರಾಟ್‌ ಕೊಹ್ಲಿ ಈ ಬಾರಿಯ ವಿಶ್ವಕಪ್‌ನಲ್ಲಿ 711 ರನ್‌ಗಳನ್ನು ಗಳಿಸಿದ್ದು ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಅಲ್ಲದೇ ಸಚಿನ್‌ ತೆಂಡೂಲ್ಕರ್‌ ಹೆಸರಿನಲ್ಲಿದ್ದ ಮತ್ತೊಂದು ದಾಖಲೆಯಾದ ವಿಶ್ವಕಪ್‌ ಆವೃತ್ತಿಯೊಂದರಲ್ಲಿ ಅತಿಹೆಚ್ಚು 50+ ರನ್‌ ಅನ್ನೂ ಸಹ ವಿರಾಟ್‌ ಕೊಹ್ಲಿ ಸರಿಗಟ್ಟಿದ್ದಾರೆ. ಸಚಿನ್‌ ತೆಂಡೂಲ್ಕರ್‌ ಈ 2003ರ ವಿಶ್ವಕಪ್‌ ಟೂರ್ನಿಯಲ್ಲಿ 7 ಬಾರಿ 50+ ಸ್ಕೋರ್‌ ಮಾಡಿದ್ದರು. ಆದರೆ ವಿರಾಟ್‌ ಕೊಹ್ಲಿ ನ್ಯೂಜಿಲೆಂಡ್‌ ವಿರುದ್ಧದ ಇಂದಿನ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಈ ಆವೃತ್ತಿಯಲ್ಲಿ 8ನೇ ಬಾರಿಗೆ 50+ ಸ್ಕೋರ್‌ ಮಾಡಿದ್ದಾರೆ. 

andolana

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

23 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

23 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

24 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

24 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

24 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

24 hours ago