ಕಡಪ: ಮಾಜಿ ಸಂಸದ ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈ.ಎಸ್ ಭಾಸ್ಕರ್ ರೆಡ್ಡಿ ಅವರನ್ನು ಸಿಬಿಐ ಭಾನುವಾರ ಬಂಧಿಸಿದೆ.
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡಿ ಅವರ ಸಹೋದರ ಮತ್ತು ಜಗನ್ ರೆಡ್ಡಿ ಅವರ ಚಿಕ್ಕಪ್ಪ ವಿವೇಕಾನಂದ ಅವರು ಆಂಧ್ರ ವಿಧಾನಸಭಾ ಚುನಾವಣೆ ಮುನ್ನ 2019ರ ಮಾರ್ಚ್ 15ರ ರಾತ್ರಿ ಪುಲಿವೆಂದುಲದಲ್ಲಿರುವ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು.
ಈ ಪ್ರಕರಣವನ್ನು ಆರಂಭದಲ್ಲಿ ರಾಜ್ಯ ಅಪರಾಧ ತನಿಖಾ ವಿಭಾಗದ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸಿತ್ತು. ಜುಲೈ 2020 ರಲ್ಲಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು.
ಕೊಲೆ ಪ್ರಕರಣದಲ್ಲಿ 2021ರ ಅಕ್ಟೋಬರ್ 26ರಂದು ಸಿಬಿಐ ಚಾರ್ಜ್ಶೀಟ್ ಸಲ್ಲಿಸಿತ್ತು. 2022ರ ಜನವರಿ 31 ರಂದು ಪೂರಕ ಚಾರ್ಜ್ಶೀಟ್ ಅನ್ನು ಸಲ್ಲಿಸಲಾಗಿತ್ತು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…