BREAKING NEWS

ವಿಕಲಚೇತನ ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ: ಪ್ರಕ್ರಿಯೆ ಹೇಗೆ.?

ನವದೆಹಲಿ: ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 10ರಂದು ಮತದಾನ ನೆಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣೆ ಆಯೋಗವು ಇದೇ ಮೊದಲ ಬಾರಿಗೆ ಕೆಲವರಿಗೆ ಮನೆಯಿಂದ ಮತದಾನ ಮಾಡುವ ಅವಕಾಶ ಮಾಡಿಕೊಟ್ಟಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಹಾಗೂ ಹಾಸಿಗೆ ಬಿಟ್ಟು ಏಳಲಾಗದ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡುವ ಅವಕಾಶ ನೀಡಲಾಗಿದೆ. ಈ ಬಗ್ಗೆ ಇಂದು (ಮಾರ್ಚ್ 29) ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಈ ಬಾರಿ ರಾಜ್ಯದಲ್ಲಿ ಅತಿ ಹಿರಿಯ ಮತದಾರರಿಗೆ ಅನುಕೂಲವಾಗುವಂತೆ ಹೊಸ ಪ್ರಯೋಗ ಮಾಡುತ್ತಿದೆ. ಇದೇ ಮೊದಲ ಬಾರಿಗೆ ನಾವು ಕರ್ನಾಟಕದಲ್ಲಿ 80 ವರ್ಷಕ್ಕೂ ಮೇಲ್ಪಟ್ಟ ಮತ್ತು ಅಂಗವಿಕಲರು (ಪಿಡಬ್ಲ್ಯೂಡಿ) ಮತದಾರರು ಮನೆಗಳಿಂದಲೂ ಮತದಾನ ಮಾಡುವ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ.

ಪ್ರಕ್ರಿಯೆ: ಚುನಾವಣಾ ಆಯೋಗ ಕರ್ನಾಟಕದಲ್ಲಿ ಒಟ್ಟು 5.21 ಕೋಟಿ ಮತದಾರರು ಇದ್ದು, ಇದರಲ್ಲಿ 80 ವರ್ಷ ಮೇಲ್ಪಟ್ಟವರು ಮತದಾರರು 12,15,763 ಇದ್ದು, 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. ಇನ್ನು ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ. ಇವರೆಲ್ಲರಿಗೂ ಮನೆಯಿಂದ ಮತದಾನ ಮಾಡುವ ಅವಕಾಶ ನೀಡಲಾಗಿದೆ.

ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮೊದಲ ಬಾರಿಗೆ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ ಎಂದು ತಿಳಿಸಿದರು.

ಮನೆಯಿಂದ ಮತದಾನ ಹೇಗೆ?

ಚುನಾವಣೆ ಆಯೋಗದ ವೆಬ್‌ಸೈಟ್, ವೋಟರ್ ಹೆಲ್ತ್‌ಲೈನ್ ಅಥವಾ ಸಕ್ಷಮ್ ಆ್ಯಪ್ ನಲ್ಲಿ ನೋಂದಣಿ ಕಡ್ಡಾಯ.

ಸ್ಥಳೀಯ ಬೂತ್ ಮಟ್ಟದ ಚುನಾವಣಾಧಿಕಾರಿಗಳ ಕಚೇರಿಗಳಲ್ಲೂ ನೋಂದಣಿ ಮಾಡಿಸಲು ಅವಕಾಶ.

ನೋಂದಣಿ ಮಾಡಿಸಿಕೊಂಡ ಮತದಾರರ ಮನೆಗೆ ಪೊಲೀಸ್ ಭದ್ರತೆಯಲ್ಲಿ ಅಂಚೆ ಮತಚೀಟಿ ರವಾನೆ.

ಮನೆಯಲ್ಲೇ ಗೌಪ್ಯ ಮತದಾನಕ್ಕೆ ಅವಕಾಶ. ಇಡೀ ಮತದಾನ ಪ್ರಕ್ರಿಯೆ ಬಗ್ಗೆ ವಿಡಿಯೋ ಚಿತ್ರೀಕರಣ.

ಈ ರೀತಿ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗಾಗಿ ರಾಜಕೀಯ ಪಕ್ಷಗಳಿಗೆ ಮುಂಚಿತವಾಗಿ ಮಾಹಿತಿ.

ಕರ್ನಾಟಕ ಚುನಾವಣೆಯ ಪ್ರಮುಖ ದಿನಾಂಕಗಳು:  ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಇದೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಇನ್ನ ನಾಮಪತ್ರ ಸಲ್ಲಿಕೆ ಏಪ್ರಿಲ್ 13 ರಂದೇ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆದಿನವಾಗಿದೆ. ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆ ದಿನವಾಗಿದೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago