BREAKING NEWS

ವಿಕಲಚೇತನ ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ: ಪ್ರಕ್ರಿಯೆ ಹೇಗೆ.?

ನವದೆಹಲಿ: ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 10ರಂದು ಮತದಾನ ನೆಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣೆ ಆಯೋಗವು ಇದೇ ಮೊದಲ ಬಾರಿಗೆ ಕೆಲವರಿಗೆ ಮನೆಯಿಂದ ಮತದಾನ ಮಾಡುವ ಅವಕಾಶ ಮಾಡಿಕೊಟ್ಟಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಹಾಗೂ ಹಾಸಿಗೆ ಬಿಟ್ಟು ಏಳಲಾಗದ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡುವ ಅವಕಾಶ ನೀಡಲಾಗಿದೆ. ಈ ಬಗ್ಗೆ ಇಂದು (ಮಾರ್ಚ್ 29) ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಈ ಬಾರಿ ರಾಜ್ಯದಲ್ಲಿ ಅತಿ ಹಿರಿಯ ಮತದಾರರಿಗೆ ಅನುಕೂಲವಾಗುವಂತೆ ಹೊಸ ಪ್ರಯೋಗ ಮಾಡುತ್ತಿದೆ. ಇದೇ ಮೊದಲ ಬಾರಿಗೆ ನಾವು ಕರ್ನಾಟಕದಲ್ಲಿ 80 ವರ್ಷಕ್ಕೂ ಮೇಲ್ಪಟ್ಟ ಮತ್ತು ಅಂಗವಿಕಲರು (ಪಿಡಬ್ಲ್ಯೂಡಿ) ಮತದಾರರು ಮನೆಗಳಿಂದಲೂ ಮತದಾನ ಮಾಡುವ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ.

ಪ್ರಕ್ರಿಯೆ: ಚುನಾವಣಾ ಆಯೋಗ ಕರ್ನಾಟಕದಲ್ಲಿ ಒಟ್ಟು 5.21 ಕೋಟಿ ಮತದಾರರು ಇದ್ದು, ಇದರಲ್ಲಿ 80 ವರ್ಷ ಮೇಲ್ಪಟ್ಟವರು ಮತದಾರರು 12,15,763 ಇದ್ದು, 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. ಇನ್ನು ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ. ಇವರೆಲ್ಲರಿಗೂ ಮನೆಯಿಂದ ಮತದಾನ ಮಾಡುವ ಅವಕಾಶ ನೀಡಲಾಗಿದೆ.

ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮೊದಲ ಬಾರಿಗೆ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ ಎಂದು ತಿಳಿಸಿದರು.

ಮನೆಯಿಂದ ಮತದಾನ ಹೇಗೆ?

ಚುನಾವಣೆ ಆಯೋಗದ ವೆಬ್‌ಸೈಟ್, ವೋಟರ್ ಹೆಲ್ತ್‌ಲೈನ್ ಅಥವಾ ಸಕ್ಷಮ್ ಆ್ಯಪ್ ನಲ್ಲಿ ನೋಂದಣಿ ಕಡ್ಡಾಯ.

ಸ್ಥಳೀಯ ಬೂತ್ ಮಟ್ಟದ ಚುನಾವಣಾಧಿಕಾರಿಗಳ ಕಚೇರಿಗಳಲ್ಲೂ ನೋಂದಣಿ ಮಾಡಿಸಲು ಅವಕಾಶ.

ನೋಂದಣಿ ಮಾಡಿಸಿಕೊಂಡ ಮತದಾರರ ಮನೆಗೆ ಪೊಲೀಸ್ ಭದ್ರತೆಯಲ್ಲಿ ಅಂಚೆ ಮತಚೀಟಿ ರವಾನೆ.

ಮನೆಯಲ್ಲೇ ಗೌಪ್ಯ ಮತದಾನಕ್ಕೆ ಅವಕಾಶ. ಇಡೀ ಮತದಾನ ಪ್ರಕ್ರಿಯೆ ಬಗ್ಗೆ ವಿಡಿಯೋ ಚಿತ್ರೀಕರಣ.

ಈ ರೀತಿ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗಾಗಿ ರಾಜಕೀಯ ಪಕ್ಷಗಳಿಗೆ ಮುಂಚಿತವಾಗಿ ಮಾಹಿತಿ.

ಕರ್ನಾಟಕ ಚುನಾವಣೆಯ ಪ್ರಮುಖ ದಿನಾಂಕಗಳು:  ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಇದೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಇನ್ನ ನಾಮಪತ್ರ ಸಲ್ಲಿಕೆ ಏಪ್ರಿಲ್ 13 ರಂದೇ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆದಿನವಾಗಿದೆ. ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆ ದಿನವಾಗಿದೆ.

andolanait

Recent Posts

ಬಳ್ಳಾರಿ ಬ್ಯಾನರ್‌ ಗಲಾಟೆ ಪ್ರಕರಣ: ಐಜಿ ವರ್ತಿಕಾ ಕಟಿಯಾರ್‌ ತಲೆದಂಡ

ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ನಿವಾಸದ ಮುಂದೆ ಬ್ಯಾನರ್‌ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಉನ್ನತ ಅಧಿಕಾರಿಯ…

4 mins ago

ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ದೇವರಾಜ ಅರಸು ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ ಎಂದು ಮಾಜಿ…

1 hour ago

ಪಿರಿಯಾಪಟ್ಟಣ| 10 ಲಕ್ಷ ಮೌಲ್ಯದ ಅಡಿಕೆ ದೋಚಿದ ಖದೀಮರು

ಪಿರಿಯಾಪಟ್ಟಣ: ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಖದೀಮರು 10 ಲಕ್ಷ ಮೌಲ್ಯದ ಅಡಿಕೆಯನ್ನು ಕಳ್ಳತನ ಮಾಡಿದ್ದು, ಟಿಬೆಟಿಯನ್‌ ರೈತರೊಬ್ಬರು ಕಂಗಾಲಾಗಿದ್ದಾರೆ. ಬೈಲಕುಪ್ಪೆಯ ತಿರುಮಲಾಪುರ…

2 hours ago

ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ರಶ್ಮಿಕಾ ಮಂದಣ್ಣ ನಂಬರ್.‌1

ಮಡಿಕೇರಿ: ಕೊಡಗು  ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮೊದಲ ಸ್ಥಾನದಲ್ಲಿದ್ದಾರೆ. ಕಿರಿಕ್‌ ಪಾರ್ಟಿ ಮೂಲಕ…

2 hours ago

ಸಾಕ್ಷ್ಯ ಸಿಗಬಾರದೆಂದು ಮೃತ ರಾಜಶೇಖರ್‌ ದೇಹ ಸುಟ್ಟಿದ್ದಾರೆ: ಶ್ರೀರಾಮುಲು ಗಂಭೀರ ಆರೋಪ

ಬಳ್ಳಾರಿ: ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣ ಕುರಿತು ಮಾತನಾಡಿದ ಮಾಜಿ…

2 hours ago

ಬಸ್-ಲಾರಿ ಡಿಕ್ಕಿ: ಚಾಲಕ ಸಾವು, ಹಲವು ಪ್ರಯಾಣಿಕರಿಗೆ ಗಾಯ

ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…

6 hours ago