BREAKING NEWS

ವಿಕಲಚೇತನ ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ: ಪ್ರಕ್ರಿಯೆ ಹೇಗೆ.?

ನವದೆಹಲಿ: ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 10ರಂದು ಮತದಾನ ನೆಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣೆ ಆಯೋಗವು ಇದೇ ಮೊದಲ ಬಾರಿಗೆ ಕೆಲವರಿಗೆ ಮನೆಯಿಂದ ಮತದಾನ ಮಾಡುವ ಅವಕಾಶ ಮಾಡಿಕೊಟ್ಟಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಹಾಗೂ ಹಾಸಿಗೆ ಬಿಟ್ಟು ಏಳಲಾಗದ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡುವ ಅವಕಾಶ ನೀಡಲಾಗಿದೆ. ಈ ಬಗ್ಗೆ ಇಂದು (ಮಾರ್ಚ್ 29) ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಈ ಬಾರಿ ರಾಜ್ಯದಲ್ಲಿ ಅತಿ ಹಿರಿಯ ಮತದಾರರಿಗೆ ಅನುಕೂಲವಾಗುವಂತೆ ಹೊಸ ಪ್ರಯೋಗ ಮಾಡುತ್ತಿದೆ. ಇದೇ ಮೊದಲ ಬಾರಿಗೆ ನಾವು ಕರ್ನಾಟಕದಲ್ಲಿ 80 ವರ್ಷಕ್ಕೂ ಮೇಲ್ಪಟ್ಟ ಮತ್ತು ಅಂಗವಿಕಲರು (ಪಿಡಬ್ಲ್ಯೂಡಿ) ಮತದಾರರು ಮನೆಗಳಿಂದಲೂ ಮತದಾನ ಮಾಡುವ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ.

ಪ್ರಕ್ರಿಯೆ: ಚುನಾವಣಾ ಆಯೋಗ ಕರ್ನಾಟಕದಲ್ಲಿ ಒಟ್ಟು 5.21 ಕೋಟಿ ಮತದಾರರು ಇದ್ದು, ಇದರಲ್ಲಿ 80 ವರ್ಷ ಮೇಲ್ಪಟ್ಟವರು ಮತದಾರರು 12,15,763 ಇದ್ದು, 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. ಇನ್ನು ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ. ಇವರೆಲ್ಲರಿಗೂ ಮನೆಯಿಂದ ಮತದಾನ ಮಾಡುವ ಅವಕಾಶ ನೀಡಲಾಗಿದೆ.

ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮೊದಲ ಬಾರಿಗೆ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ ಎಂದು ತಿಳಿಸಿದರು.

ಮನೆಯಿಂದ ಮತದಾನ ಹೇಗೆ?

ಚುನಾವಣೆ ಆಯೋಗದ ವೆಬ್‌ಸೈಟ್, ವೋಟರ್ ಹೆಲ್ತ್‌ಲೈನ್ ಅಥವಾ ಸಕ್ಷಮ್ ಆ್ಯಪ್ ನಲ್ಲಿ ನೋಂದಣಿ ಕಡ್ಡಾಯ.

ಸ್ಥಳೀಯ ಬೂತ್ ಮಟ್ಟದ ಚುನಾವಣಾಧಿಕಾರಿಗಳ ಕಚೇರಿಗಳಲ್ಲೂ ನೋಂದಣಿ ಮಾಡಿಸಲು ಅವಕಾಶ.

ನೋಂದಣಿ ಮಾಡಿಸಿಕೊಂಡ ಮತದಾರರ ಮನೆಗೆ ಪೊಲೀಸ್ ಭದ್ರತೆಯಲ್ಲಿ ಅಂಚೆ ಮತಚೀಟಿ ರವಾನೆ.

ಮನೆಯಲ್ಲೇ ಗೌಪ್ಯ ಮತದಾನಕ್ಕೆ ಅವಕಾಶ. ಇಡೀ ಮತದಾನ ಪ್ರಕ್ರಿಯೆ ಬಗ್ಗೆ ವಿಡಿಯೋ ಚಿತ್ರೀಕರಣ.

ಈ ರೀತಿ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗಾಗಿ ರಾಜಕೀಯ ಪಕ್ಷಗಳಿಗೆ ಮುಂಚಿತವಾಗಿ ಮಾಹಿತಿ.

ಕರ್ನಾಟಕ ಚುನಾವಣೆಯ ಪ್ರಮುಖ ದಿನಾಂಕಗಳು:  ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಇದೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಇನ್ನ ನಾಮಪತ್ರ ಸಲ್ಲಿಕೆ ಏಪ್ರಿಲ್ 13 ರಂದೇ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆದಿನವಾಗಿದೆ. ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆ ದಿನವಾಗಿದೆ.

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

10 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

10 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

11 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

11 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

12 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

12 hours ago