BREAKING NEWS

ವಿಕಲಚೇತನ ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ: ಪ್ರಕ್ರಿಯೆ ಹೇಗೆ.?

ನವದೆಹಲಿ: ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 10ರಂದು ಮತದಾನ ನೆಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣೆ ಆಯೋಗವು ಇದೇ ಮೊದಲ ಬಾರಿಗೆ ಕೆಲವರಿಗೆ ಮನೆಯಿಂದ ಮತದಾನ ಮಾಡುವ ಅವಕಾಶ ಮಾಡಿಕೊಟ್ಟಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಹಾಗೂ ಹಾಸಿಗೆ ಬಿಟ್ಟು ಏಳಲಾಗದ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡುವ ಅವಕಾಶ ನೀಡಲಾಗಿದೆ. ಈ ಬಗ್ಗೆ ಇಂದು (ಮಾರ್ಚ್ 29) ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಈ ಬಾರಿ ರಾಜ್ಯದಲ್ಲಿ ಅತಿ ಹಿರಿಯ ಮತದಾರರಿಗೆ ಅನುಕೂಲವಾಗುವಂತೆ ಹೊಸ ಪ್ರಯೋಗ ಮಾಡುತ್ತಿದೆ. ಇದೇ ಮೊದಲ ಬಾರಿಗೆ ನಾವು ಕರ್ನಾಟಕದಲ್ಲಿ 80 ವರ್ಷಕ್ಕೂ ಮೇಲ್ಪಟ್ಟ ಮತ್ತು ಅಂಗವಿಕಲರು (ಪಿಡಬ್ಲ್ಯೂಡಿ) ಮತದಾರರು ಮನೆಗಳಿಂದಲೂ ಮತದಾನ ಮಾಡುವ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ.

ಪ್ರಕ್ರಿಯೆ: ಚುನಾವಣಾ ಆಯೋಗ ಕರ್ನಾಟಕದಲ್ಲಿ ಒಟ್ಟು 5.21 ಕೋಟಿ ಮತದಾರರು ಇದ್ದು, ಇದರಲ್ಲಿ 80 ವರ್ಷ ಮೇಲ್ಪಟ್ಟವರು ಮತದಾರರು 12,15,763 ಇದ್ದು, 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. ಇನ್ನು ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ. ಇವರೆಲ್ಲರಿಗೂ ಮನೆಯಿಂದ ಮತದಾನ ಮಾಡುವ ಅವಕಾಶ ನೀಡಲಾಗಿದೆ.

ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮೊದಲ ಬಾರಿಗೆ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ ಎಂದು ತಿಳಿಸಿದರು.

ಮನೆಯಿಂದ ಮತದಾನ ಹೇಗೆ?

ಚುನಾವಣೆ ಆಯೋಗದ ವೆಬ್‌ಸೈಟ್, ವೋಟರ್ ಹೆಲ್ತ್‌ಲೈನ್ ಅಥವಾ ಸಕ್ಷಮ್ ಆ್ಯಪ್ ನಲ್ಲಿ ನೋಂದಣಿ ಕಡ್ಡಾಯ.

ಸ್ಥಳೀಯ ಬೂತ್ ಮಟ್ಟದ ಚುನಾವಣಾಧಿಕಾರಿಗಳ ಕಚೇರಿಗಳಲ್ಲೂ ನೋಂದಣಿ ಮಾಡಿಸಲು ಅವಕಾಶ.

ನೋಂದಣಿ ಮಾಡಿಸಿಕೊಂಡ ಮತದಾರರ ಮನೆಗೆ ಪೊಲೀಸ್ ಭದ್ರತೆಯಲ್ಲಿ ಅಂಚೆ ಮತಚೀಟಿ ರವಾನೆ.

ಮನೆಯಲ್ಲೇ ಗೌಪ್ಯ ಮತದಾನಕ್ಕೆ ಅವಕಾಶ. ಇಡೀ ಮತದಾನ ಪ್ರಕ್ರಿಯೆ ಬಗ್ಗೆ ವಿಡಿಯೋ ಚಿತ್ರೀಕರಣ.

ಈ ರೀತಿ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗಾಗಿ ರಾಜಕೀಯ ಪಕ್ಷಗಳಿಗೆ ಮುಂಚಿತವಾಗಿ ಮಾಹಿತಿ.

ಕರ್ನಾಟಕ ಚುನಾವಣೆಯ ಪ್ರಮುಖ ದಿನಾಂಕಗಳು:  ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಇದೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಇನ್ನ ನಾಮಪತ್ರ ಸಲ್ಲಿಕೆ ಏಪ್ರಿಲ್ 13 ರಂದೇ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆದಿನವಾಗಿದೆ. ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆ ದಿನವಾಗಿದೆ.

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

12 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

12 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

12 hours ago