BREAKING NEWS

ನಾಳೆ ಮತದಾನ : ರಾಜ್ಯಾದ್ಯಂತ ಎಷ್ಟು ಮತಗಟ್ಟೆಗಳಿವೆ? ಭದ್ರತೆಗೆ ಎಷ್ಟು ಪೊಲೀಸರ ನಿಯೋಜನೆ? ಇಲ್ಲಿದೆ ವಿವರ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಜಿದ್ದಾಜಿದ್ದಿನ ಅಖಾಡದಲ್ಲಿ ಕಳೆದ 15 ದಿನಗಳಿಂದ ಸಾಗಿದ ಬಿರುಸಿನ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆ ಬಿದ್ದಿದ್ದು, ಕಣದಲ್ಲಿರುವ ಅಭ್ಯರ್ಥಿಗಳಿಂದ ಇಂದು ಮನೆ ಮನೆ ಪ್ರಚಾರ ನಡೆಯಲಿದ್ದು, ನಾಳೆ ಅಂದರೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಅತ್ತ ಚುಣಾವಣಾ ಅಧಿಕಾರಿಗಳು ಸಹ ವೋಟಿಂಗ್​​ಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಮತದಾನ ಸಂದರ್ಭದಲ್ಲಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯೂ ಸಹ ಕಟ್ಟೆಚ್ಚರ ವಹಿಸಿದ್ದು, ರಾಜ್ಯಾದ್ಯಂತ ಮತದಾನಕ್ಕೆ ಒಟ್ಟು 1.56 ಲಕ್ಷ ಪೊಲೀಸರು ಬಿಗಿ ಭದ್ರತೆಗೆ ನಿಯೋಜಿತರಾಗಿದ್ದಾರೆ.

ರಾಜ್ಯದ 224 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ 2,615 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಲ್ಲರ ಭವಿಷ್ಯವನ್ನು ನಾಳೆ ಮತದಾರ ಪ್ರಭು ಬರೆಯಲಿದ್ದಾನೆ. ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 11,631 ಸೂಕ್ಷ್ಮ ಮತಗಟ್ಟೆಗಳ ಸ್ಥಾಪಿಸಲಾಗಿದ್ದು, 617 ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 75,603 ಬ್ಯಾಲೆಟ್ ಯೂನಿಟ್ ಗಳಿದ್ದು, 70,300 ಕಂಟ್ರೋಲ್ ಯೂನಿಟ್‌ಗಳಿವೆ. 76,202 ವಿವಿ ಪ್ಯಾಟ್ ಯೂನಿಟ್‌ಗಳಿವೆ.

ಭದ್ರತೆಗಾಗಿ ಒಟ್ಟು 1.56 ಲಕ್ಷ ಪೊಲೀಸರ ನಿಯೋಜನೆ ಮಾಡಲಾಗಿದೆ. 304 ಡಿವೈಎಸ್ಪಿಗಳು, 991 ಪಿಐಗಳು, 2610 ಪಿಎಸ್‌ಐಗಳು, 5803 ಎಎಸ್‌ಐಗಳು, 46,421 ಪೊಲೀಸರು, 27,990 ಗೃಹ ರಕ್ಷಕರು ಸೇರಿದಂತೆ 84,119 ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ ಹೊರ ರಾಜ್ಯಗಳಿಂದ 8500 ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಗೃಹ ರಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ಪಡೆಯಲಾಗಿದೆ. ಕೇಂದ್ರ ಹಾಗೂ ರಾಜ್ಯ ಭದ್ರತಾ ಪಡೆ ಸೇರಿದಂತೆ 8,500 ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದ್ದು, ಒಟ್ಟಾರೆ 1.56 ಲಕ್ಷ ಪೊಲೀಸರು ಮತದಾನದ ದಿನ ಬಂದೋಬಸ್ತ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಅವುಗಳಲ್ಲಿ ಬಿಎಎಸ್ ಎಫ್ 108, ಸಿಐಎಸ್ಎಫ್ 75, ಐಟಿಬಿಪಿ 70, ಆರ್ ಪಿಎಫ್-35, ಎಸ್ಎಸ್ ಬಿ 75 ಹಾಗೂ ರಾಜ್ಯದ 224 ಕೆಎಸ್ಆರ್ ಪಿ ತುಕಡಿಗಳು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ನಿಯೋಜನೆಗೊಂಡ ಸಿಬ್ಬಂದಿ, 58, 282 ಮತಗಟ್ಟೆಗಳ ಬಳಿ ನಿಯೋಜಿಸಲಾಗಿದೆ. ಇನ್ನು 11,617 ಸೂಕ್ಷ್ಮ ಮತಗಟ್ಟೆಗಳ ಬಳಿ ಸಿಆರ್ ಪಿಎಫ್ ಹಾಗೂ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ. ವಿಶೇಷವಾಗಿ 2930 ಪೊಲೀಸ್ ಮೊಬೈಲ್ ಸೆಕ್ಟರ್ ಗಳ ಕಾರ್ಯಾಚರಣೆ ನಡೆಸಲಿದ್ದಾರೆ. ಒಂದು ಮೊಬೈಲ್ ಸೆಕ್ಟರ್ 20 ಮತಗಟ್ಟೆಗಳನ್ನು ಕವರ್ ಮಾಡಲಿದೆ. ಮೊಬೈಲ್ ಸೆಕ್ಟರ್ ಗಳ ಮೇಲ್ವಿಚಾರಣೆಗೆ 749 ಸೂಪರ್‌ ವೈಸರ್ ಗಳು ನಿಯೋಜನೆ ಮಾಡಲಾಗಿದೆ. 700 ಫೈಯಿಂಗ್ ಸ್ಕ್ವಾಡ್, 700 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ.

lokesh

Recent Posts

ಬಂಧನದಲ್ಲಿರುವ ಮುನಿರತ್ನ ಆರೋಗ್ಯದಲ್ಲಿ ದಿಢೀರ್‌ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…

1 hour ago

ದಸರಾ ಚಲನಚಿತ್ರೋತ್ಸವ- 2024| ಉತ್ತಮ ಕಿರುಚಿತ್ರ ಆಯ್ಕೆಗೆ ಪರಿಣಿತರಿಂದ ವೀಕ್ಷಣೆ

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…

2 hours ago

ಮೈಶುಗರ್: 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲು ಯಾವುದೇ ತೊಂದರೆ ಇಲ್ಲ: ಡಾ: ಹೆಚ್.ಎಲ್ ನಾಗರಾಜು

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಆನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…

2 hours ago

ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ…

3 hours ago

ಜೊತೆಗಿದ್ದ ಯುವತಿಗೆ ಲೈಂಗಿಕ ಕಿರುಕುಳ: ಕೊರಿಯೋಗ್ರಾಫರ್‌ ವಿರುದ್ಧ ದೂರು ದಾಖಲು

ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ಕೊರಿಯೋಗ್ರಾಫರ್‌ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್‌…

3 hours ago