BREAKING NEWS

ನಾಳೆ ಮತದಾನ : ರಾಜ್ಯಾದ್ಯಂತ ಎಷ್ಟು ಮತಗಟ್ಟೆಗಳಿವೆ? ಭದ್ರತೆಗೆ ಎಷ್ಟು ಪೊಲೀಸರ ನಿಯೋಜನೆ? ಇಲ್ಲಿದೆ ವಿವರ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಜಿದ್ದಾಜಿದ್ದಿನ ಅಖಾಡದಲ್ಲಿ ಕಳೆದ 15 ದಿನಗಳಿಂದ ಸಾಗಿದ ಬಿರುಸಿನ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆ ಬಿದ್ದಿದ್ದು, ಕಣದಲ್ಲಿರುವ ಅಭ್ಯರ್ಥಿಗಳಿಂದ ಇಂದು ಮನೆ ಮನೆ ಪ್ರಚಾರ ನಡೆಯಲಿದ್ದು, ನಾಳೆ ಅಂದರೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಅತ್ತ ಚುಣಾವಣಾ ಅಧಿಕಾರಿಗಳು ಸಹ ವೋಟಿಂಗ್​​ಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಮತದಾನ ಸಂದರ್ಭದಲ್ಲಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯೂ ಸಹ ಕಟ್ಟೆಚ್ಚರ ವಹಿಸಿದ್ದು, ರಾಜ್ಯಾದ್ಯಂತ ಮತದಾನಕ್ಕೆ ಒಟ್ಟು 1.56 ಲಕ್ಷ ಪೊಲೀಸರು ಬಿಗಿ ಭದ್ರತೆಗೆ ನಿಯೋಜಿತರಾಗಿದ್ದಾರೆ.

ರಾಜ್ಯದ 224 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ 2,615 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಲ್ಲರ ಭವಿಷ್ಯವನ್ನು ನಾಳೆ ಮತದಾರ ಪ್ರಭು ಬರೆಯಲಿದ್ದಾನೆ. ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 11,631 ಸೂಕ್ಷ್ಮ ಮತಗಟ್ಟೆಗಳ ಸ್ಥಾಪಿಸಲಾಗಿದ್ದು, 617 ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 75,603 ಬ್ಯಾಲೆಟ್ ಯೂನಿಟ್ ಗಳಿದ್ದು, 70,300 ಕಂಟ್ರೋಲ್ ಯೂನಿಟ್‌ಗಳಿವೆ. 76,202 ವಿವಿ ಪ್ಯಾಟ್ ಯೂನಿಟ್‌ಗಳಿವೆ.

ಭದ್ರತೆಗಾಗಿ ಒಟ್ಟು 1.56 ಲಕ್ಷ ಪೊಲೀಸರ ನಿಯೋಜನೆ ಮಾಡಲಾಗಿದೆ. 304 ಡಿವೈಎಸ್ಪಿಗಳು, 991 ಪಿಐಗಳು, 2610 ಪಿಎಸ್‌ಐಗಳು, 5803 ಎಎಸ್‌ಐಗಳು, 46,421 ಪೊಲೀಸರು, 27,990 ಗೃಹ ರಕ್ಷಕರು ಸೇರಿದಂತೆ 84,119 ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ ಹೊರ ರಾಜ್ಯಗಳಿಂದ 8500 ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಗೃಹ ರಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ಪಡೆಯಲಾಗಿದೆ. ಕೇಂದ್ರ ಹಾಗೂ ರಾಜ್ಯ ಭದ್ರತಾ ಪಡೆ ಸೇರಿದಂತೆ 8,500 ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದ್ದು, ಒಟ್ಟಾರೆ 1.56 ಲಕ್ಷ ಪೊಲೀಸರು ಮತದಾನದ ದಿನ ಬಂದೋಬಸ್ತ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಅವುಗಳಲ್ಲಿ ಬಿಎಎಸ್ ಎಫ್ 108, ಸಿಐಎಸ್ಎಫ್ 75, ಐಟಿಬಿಪಿ 70, ಆರ್ ಪಿಎಫ್-35, ಎಸ್ಎಸ್ ಬಿ 75 ಹಾಗೂ ರಾಜ್ಯದ 224 ಕೆಎಸ್ಆರ್ ಪಿ ತುಕಡಿಗಳು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ನಿಯೋಜನೆಗೊಂಡ ಸಿಬ್ಬಂದಿ, 58, 282 ಮತಗಟ್ಟೆಗಳ ಬಳಿ ನಿಯೋಜಿಸಲಾಗಿದೆ. ಇನ್ನು 11,617 ಸೂಕ್ಷ್ಮ ಮತಗಟ್ಟೆಗಳ ಬಳಿ ಸಿಆರ್ ಪಿಎಫ್ ಹಾಗೂ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ. ವಿಶೇಷವಾಗಿ 2930 ಪೊಲೀಸ್ ಮೊಬೈಲ್ ಸೆಕ್ಟರ್ ಗಳ ಕಾರ್ಯಾಚರಣೆ ನಡೆಸಲಿದ್ದಾರೆ. ಒಂದು ಮೊಬೈಲ್ ಸೆಕ್ಟರ್ 20 ಮತಗಟ್ಟೆಗಳನ್ನು ಕವರ್ ಮಾಡಲಿದೆ. ಮೊಬೈಲ್ ಸೆಕ್ಟರ್ ಗಳ ಮೇಲ್ವಿಚಾರಣೆಗೆ 749 ಸೂಪರ್‌ ವೈಸರ್ ಗಳು ನಿಯೋಜನೆ ಮಾಡಲಾಗಿದೆ. 700 ಫೈಯಿಂಗ್ ಸ್ಕ್ವಾಡ್, 700 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ.

lokesh

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

14 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

15 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

16 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

17 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

17 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

18 hours ago