BREAKING NEWS

ನಾಳೆ ಮತದಾನ : ರಾಜ್ಯಾದ್ಯಂತ ಎಷ್ಟು ಮತಗಟ್ಟೆಗಳಿವೆ? ಭದ್ರತೆಗೆ ಎಷ್ಟು ಪೊಲೀಸರ ನಿಯೋಜನೆ? ಇಲ್ಲಿದೆ ವಿವರ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಜಿದ್ದಾಜಿದ್ದಿನ ಅಖಾಡದಲ್ಲಿ ಕಳೆದ 15 ದಿನಗಳಿಂದ ಸಾಗಿದ ಬಿರುಸಿನ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆ ಬಿದ್ದಿದ್ದು, ಕಣದಲ್ಲಿರುವ ಅಭ್ಯರ್ಥಿಗಳಿಂದ ಇಂದು ಮನೆ ಮನೆ ಪ್ರಚಾರ ನಡೆಯಲಿದ್ದು, ನಾಳೆ ಅಂದರೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಅತ್ತ ಚುಣಾವಣಾ ಅಧಿಕಾರಿಗಳು ಸಹ ವೋಟಿಂಗ್​​ಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಮತದಾನ ಸಂದರ್ಭದಲ್ಲಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯೂ ಸಹ ಕಟ್ಟೆಚ್ಚರ ವಹಿಸಿದ್ದು, ರಾಜ್ಯಾದ್ಯಂತ ಮತದಾನಕ್ಕೆ ಒಟ್ಟು 1.56 ಲಕ್ಷ ಪೊಲೀಸರು ಬಿಗಿ ಭದ್ರತೆಗೆ ನಿಯೋಜಿತರಾಗಿದ್ದಾರೆ.

ರಾಜ್ಯದ 224 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ 2,615 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಲ್ಲರ ಭವಿಷ್ಯವನ್ನು ನಾಳೆ ಮತದಾರ ಪ್ರಭು ಬರೆಯಲಿದ್ದಾನೆ. ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 11,631 ಸೂಕ್ಷ್ಮ ಮತಗಟ್ಟೆಗಳ ಸ್ಥಾಪಿಸಲಾಗಿದ್ದು, 617 ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 75,603 ಬ್ಯಾಲೆಟ್ ಯೂನಿಟ್ ಗಳಿದ್ದು, 70,300 ಕಂಟ್ರೋಲ್ ಯೂನಿಟ್‌ಗಳಿವೆ. 76,202 ವಿವಿ ಪ್ಯಾಟ್ ಯೂನಿಟ್‌ಗಳಿವೆ.

ಭದ್ರತೆಗಾಗಿ ಒಟ್ಟು 1.56 ಲಕ್ಷ ಪೊಲೀಸರ ನಿಯೋಜನೆ ಮಾಡಲಾಗಿದೆ. 304 ಡಿವೈಎಸ್ಪಿಗಳು, 991 ಪಿಐಗಳು, 2610 ಪಿಎಸ್‌ಐಗಳು, 5803 ಎಎಸ್‌ಐಗಳು, 46,421 ಪೊಲೀಸರು, 27,990 ಗೃಹ ರಕ್ಷಕರು ಸೇರಿದಂತೆ 84,119 ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ ಹೊರ ರಾಜ್ಯಗಳಿಂದ 8500 ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಗೃಹ ರಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ಪಡೆಯಲಾಗಿದೆ. ಕೇಂದ್ರ ಹಾಗೂ ರಾಜ್ಯ ಭದ್ರತಾ ಪಡೆ ಸೇರಿದಂತೆ 8,500 ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದ್ದು, ಒಟ್ಟಾರೆ 1.56 ಲಕ್ಷ ಪೊಲೀಸರು ಮತದಾನದ ದಿನ ಬಂದೋಬಸ್ತ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಅವುಗಳಲ್ಲಿ ಬಿಎಎಸ್ ಎಫ್ 108, ಸಿಐಎಸ್ಎಫ್ 75, ಐಟಿಬಿಪಿ 70, ಆರ್ ಪಿಎಫ್-35, ಎಸ್ಎಸ್ ಬಿ 75 ಹಾಗೂ ರಾಜ್ಯದ 224 ಕೆಎಸ್ಆರ್ ಪಿ ತುಕಡಿಗಳು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ನಿಯೋಜನೆಗೊಂಡ ಸಿಬ್ಬಂದಿ, 58, 282 ಮತಗಟ್ಟೆಗಳ ಬಳಿ ನಿಯೋಜಿಸಲಾಗಿದೆ. ಇನ್ನು 11,617 ಸೂಕ್ಷ್ಮ ಮತಗಟ್ಟೆಗಳ ಬಳಿ ಸಿಆರ್ ಪಿಎಫ್ ಹಾಗೂ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ. ವಿಶೇಷವಾಗಿ 2930 ಪೊಲೀಸ್ ಮೊಬೈಲ್ ಸೆಕ್ಟರ್ ಗಳ ಕಾರ್ಯಾಚರಣೆ ನಡೆಸಲಿದ್ದಾರೆ. ಒಂದು ಮೊಬೈಲ್ ಸೆಕ್ಟರ್ 20 ಮತಗಟ್ಟೆಗಳನ್ನು ಕವರ್ ಮಾಡಲಿದೆ. ಮೊಬೈಲ್ ಸೆಕ್ಟರ್ ಗಳ ಮೇಲ್ವಿಚಾರಣೆಗೆ 749 ಸೂಪರ್‌ ವೈಸರ್ ಗಳು ನಿಯೋಜನೆ ಮಾಡಲಾಗಿದೆ. 700 ಫೈಯಿಂಗ್ ಸ್ಕ್ವಾಡ್, 700 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ.

lokesh

Recent Posts

ತೆಕ್ಕಲಕೋಟೆ | ಉತ್ಖನನ ವೇಳೆ ಎರಡು ಅಸ್ಥಿ ಪಂಜರ ಪತ್ತೆ

ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ…

32 mins ago

ಮಂಡ್ಯದಲ್ಲಿ ಎಆರ್‌ಎಐ ಸೆಂಟರ್‌ ತೆರೆಯಲು 500 ಕೋಟಿ ರೂ. : ಎಚ್‌ಡಿಕೆ

ಮೈಸೂರು : ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆ, ಉತ್ತೇಜನಕ್ಕೆ ಕೇಂದ್ರಸರ್ಕಾರ ಆದ್ಯತೆ ನೀಡಿರುವ ಜತೆಗೆ, ಮಂಡ್ಯ ಜಿಲ್ಲೆಯಲ್ಲಿ ಆಟೋಮೋಟಿವ್ ರೀಸರ್ಚ್ ಅಸೋಸಿಯೆಷನ್…

56 mins ago

ಗಮನ ಸೆಳೆದ ಸ್ವಚ್ಛತಾ ಮ್ಯಾರಥಾನ್‌

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಓಡೋಣ ಮೈಸೂರಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ ಶೀರ್ಷಿಕೆಯಡಿ ಸ್ವಚ್ಚತಾ…

1 hour ago

ಗೃಹಲಕ್ಷ್ಮಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ : ಸಿಎಂ ಸೂಚನೆ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…

2 hours ago

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

4 hours ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

4 hours ago