BREAKING NEWS

ನಾಳೆ ಮತದಾನ : ರಾಜ್ಯಾದ್ಯಂತ ಎಷ್ಟು ಮತಗಟ್ಟೆಗಳಿವೆ? ಭದ್ರತೆಗೆ ಎಷ್ಟು ಪೊಲೀಸರ ನಿಯೋಜನೆ? ಇಲ್ಲಿದೆ ವಿವರ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಜಿದ್ದಾಜಿದ್ದಿನ ಅಖಾಡದಲ್ಲಿ ಕಳೆದ 15 ದಿನಗಳಿಂದ ಸಾಗಿದ ಬಿರುಸಿನ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆ ಬಿದ್ದಿದ್ದು, ಕಣದಲ್ಲಿರುವ ಅಭ್ಯರ್ಥಿಗಳಿಂದ ಇಂದು ಮನೆ ಮನೆ ಪ್ರಚಾರ ನಡೆಯಲಿದ್ದು, ನಾಳೆ ಅಂದರೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಅತ್ತ ಚುಣಾವಣಾ ಅಧಿಕಾರಿಗಳು ಸಹ ವೋಟಿಂಗ್​​ಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಮತದಾನ ಸಂದರ್ಭದಲ್ಲಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯೂ ಸಹ ಕಟ್ಟೆಚ್ಚರ ವಹಿಸಿದ್ದು, ರಾಜ್ಯಾದ್ಯಂತ ಮತದಾನಕ್ಕೆ ಒಟ್ಟು 1.56 ಲಕ್ಷ ಪೊಲೀಸರು ಬಿಗಿ ಭದ್ರತೆಗೆ ನಿಯೋಜಿತರಾಗಿದ್ದಾರೆ.

ರಾಜ್ಯದ 224 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ 2,615 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಲ್ಲರ ಭವಿಷ್ಯವನ್ನು ನಾಳೆ ಮತದಾರ ಪ್ರಭು ಬರೆಯಲಿದ್ದಾನೆ. ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 11,631 ಸೂಕ್ಷ್ಮ ಮತಗಟ್ಟೆಗಳ ಸ್ಥಾಪಿಸಲಾಗಿದ್ದು, 617 ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 75,603 ಬ್ಯಾಲೆಟ್ ಯೂನಿಟ್ ಗಳಿದ್ದು, 70,300 ಕಂಟ್ರೋಲ್ ಯೂನಿಟ್‌ಗಳಿವೆ. 76,202 ವಿವಿ ಪ್ಯಾಟ್ ಯೂನಿಟ್‌ಗಳಿವೆ.

ಭದ್ರತೆಗಾಗಿ ಒಟ್ಟು 1.56 ಲಕ್ಷ ಪೊಲೀಸರ ನಿಯೋಜನೆ ಮಾಡಲಾಗಿದೆ. 304 ಡಿವೈಎಸ್ಪಿಗಳು, 991 ಪಿಐಗಳು, 2610 ಪಿಎಸ್‌ಐಗಳು, 5803 ಎಎಸ್‌ಐಗಳು, 46,421 ಪೊಲೀಸರು, 27,990 ಗೃಹ ರಕ್ಷಕರು ಸೇರಿದಂತೆ 84,119 ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ ಹೊರ ರಾಜ್ಯಗಳಿಂದ 8500 ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಗೃಹ ರಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ಪಡೆಯಲಾಗಿದೆ. ಕೇಂದ್ರ ಹಾಗೂ ರಾಜ್ಯ ಭದ್ರತಾ ಪಡೆ ಸೇರಿದಂತೆ 8,500 ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದ್ದು, ಒಟ್ಟಾರೆ 1.56 ಲಕ್ಷ ಪೊಲೀಸರು ಮತದಾನದ ದಿನ ಬಂದೋಬಸ್ತ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಅವುಗಳಲ್ಲಿ ಬಿಎಎಸ್ ಎಫ್ 108, ಸಿಐಎಸ್ಎಫ್ 75, ಐಟಿಬಿಪಿ 70, ಆರ್ ಪಿಎಫ್-35, ಎಸ್ಎಸ್ ಬಿ 75 ಹಾಗೂ ರಾಜ್ಯದ 224 ಕೆಎಸ್ಆರ್ ಪಿ ತುಕಡಿಗಳು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ನಿಯೋಜನೆಗೊಂಡ ಸಿಬ್ಬಂದಿ, 58, 282 ಮತಗಟ್ಟೆಗಳ ಬಳಿ ನಿಯೋಜಿಸಲಾಗಿದೆ. ಇನ್ನು 11,617 ಸೂಕ್ಷ್ಮ ಮತಗಟ್ಟೆಗಳ ಬಳಿ ಸಿಆರ್ ಪಿಎಫ್ ಹಾಗೂ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ. ವಿಶೇಷವಾಗಿ 2930 ಪೊಲೀಸ್ ಮೊಬೈಲ್ ಸೆಕ್ಟರ್ ಗಳ ಕಾರ್ಯಾಚರಣೆ ನಡೆಸಲಿದ್ದಾರೆ. ಒಂದು ಮೊಬೈಲ್ ಸೆಕ್ಟರ್ 20 ಮತಗಟ್ಟೆಗಳನ್ನು ಕವರ್ ಮಾಡಲಿದೆ. ಮೊಬೈಲ್ ಸೆಕ್ಟರ್ ಗಳ ಮೇಲ್ವಿಚಾರಣೆಗೆ 749 ಸೂಪರ್‌ ವೈಸರ್ ಗಳು ನಿಯೋಜನೆ ಮಾಡಲಾಗಿದೆ. 700 ಫೈಯಿಂಗ್ ಸ್ಕ್ವಾಡ್, 700 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ.

lokesh

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

5 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

6 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

8 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

8 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

12 hours ago