Mysore
21
broken clouds

Social Media

ಶನಿವಾರ, 14 ಫೆಬ್ರವರಿ 2026
Light
Dark

ರಾಜಕಾರಣ ಬೇಕೋ ಬೇಡ್ವೋ ಎನಿಸಿದೆ : ಡಿಕೆ ಸುರೇಶ್

ತುಮಕೂರು : ನನಗೆ ರಾಜಕಾರಣ ಬೇಕೋ ಬೇಡ್ವೋ ಅನ್ನಿಸಿಬಿಟ್ಟಿದೆ ಎಂದು ಸಂಸದ ಡಿಕೆ ಸುರೇಶ್ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸಬೇಕೋ ಬೇಡ್ವೋ ಎಂಬ ಗೊಂದಲ್ಲಿ ಇದ್ದೇನೆ ಎಂದು ಸುರೇಶ್ ಹೇಳಿದ್ದಾರೆ.

ಕುಣಿಗಲ್ ತಾಲೂಕಿನ ಗಿರಿಗೌಡನ ಪಾಳ್ಯದಲ್ಲಿ ನಡೆದ ಮತದಾರರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೆಲವರು ಲೋಕಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ನಿಂತ್ಕೋತೀನೋ ಇಲ್ಲವೋ ಇನ್ನೂ ತೀರ್ಮಾನ ಮಾಡಿಲ್ಲ. ನಾನು ಇನ್ನೂ ಗೊಂದಲದಲ್ಲಿ ಇದ್ದೀನಿ. ಯಾಕಂದ್ರೆ ನನಗೆ ರಾಜಕಾರಣ ಬೇಕೋ ಬೇಡ್ವೊ ಅನ್ನಿಸಿಬಿಟ್ಟಿದೆ ಎಂದು ಬೇಸರ ಹೊರಹಾಕಿದ್ದಾರೆ.

ಮುಂದಿನ ದಿನದಲ್ಲಿ ನಿಮ್ಮ ಸಲಹೆ ಪಡೆದು ಮುಂದುವರಿಯುತ್ತೇನೆ ಎಂದಿದ್ದಾರೆ. ಇದೀಗ ಸಂಸದ ಡಿಕೆ ಸುರೇಶ್‌ರ ಈ ಹೇಳಿಕೆ ರಾಜಕೀಯ ಪಡಸಾಲೆಯಲ್ಲಿ ಸಂಚಲನ ಮೂಡಿಸಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!