BREAKING NEWS

100 ಅಡಿಯ ಗಡಿ ದಾಟಿದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ

ಮಂಡ್ಯ : ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ 34 ದಿನಗಳ ಬಳಿಕ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ 100 ಅಡಿಗಳ ಗಡಿ ದಾಟಿದೆ. ಈ ಮೂಲಕ ಆತಂಕದಲ್ಲಿದ್ದ ರೈತರಿಗೆ ಸ್ವಲ್ಪ ಪ್ರಮಾಣದ ಸಮಾಧಾನ ತಂದಿದೆ.

ಈ ಬಾರಿ ಮುಂಗಾರು ಮಳೆ ಕೈ ಕೊಟ್ಟ ಪರಿಮಾಣ ಕೆಆರ್‌ಎಸ್ ನೀರಿನ ಮಟ್ಟ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಕಳೆದ ಸೆಪ್ಟೆಂಬರ್ 1 ರಿಂದ 100 ಅಡಿಗಿಂತ ಕಡಿಮೆ ಪ್ರಮಾಣದಲ್ಲಿ ಡ್ಯಾಂನ ನೀರಿನ ಮಟ್ಟ ಇತ್ತು. ಇದೀಗ ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ ಇಂದು 100.36 ಅಡಿಗೆ ಡ್ಯಾಂ ನೀರಿನ ಮಟ್ಟ ಏರಿಕೆಯಾಗಿದೆ.

ಮಳೆ ಬಿದ್ದ ಹಿನ್ನೆಲೆ ಕೆಆರ್‌ಎಸ್ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳವಾಗಿದ್ದು, ಇದರಿಂದ ಡ್ಯಾಂ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ತಮಿಳುನಾಡು ನೀರಿನ ಕ್ಯಾತೆಯ ನಡುವೆ ಕೆಆರ್‌ಎಸ್ 100 ಅಡಿ ಭರ್ತಿಯಾಗಿರೋದು ಸಮಾಧಾನಕರ ಸಂಗತಿಯಾಗಿದೆ.

ನಿನ್ನೆ 11,800 ಕ್ಯೂಸೆಕ್ ಒಳಹರಿವು ಇತ್ತು. ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ನಿಂತಿರುವ ಪರಿಣಾಮ ಡ್ಯಾಂಗೆ ಇಂದು 9,052 ಕ್ಯೂಸೆಕ್ ಒಳಹರಿವು ಇದೆ. ನಾಳೆ ಇನ್ನಷ್ಟು ಪ್ರಮಾದಲ್ಲಿ ಒಳಹರಿವು ಕಡಿಮೆಯಾಗಲಿದೆ. ಇತ್ತ ಡ್ಯಾಂನಿಂದ ತಮಿಳುನಾಡಿಗೆ 1,482 ಕ್ಯೂಸೆಕ್ ಬಿಡುಗಡೆ ಮಾಡಲಾಗಿದೆ.

lokesh

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

8 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

10 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

13 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

16 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

16 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

16 hours ago