BREAKING NEWS

ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ : ಶಾಸಕರಿಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಶಾಸಕರಿಗೆ ಆಫರ್ ವಿಚಾರ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದೊಡ್ಡ ಷಡ್ಯಂತ್ರ ನಡೀತಾ ಇದೆ. ಯಾವುದೇ ಫಲ ಕೂಡ ಅವರಿಗೆ ಸಿಗಲ್ಲ. ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ದೊಡ್ಡವರು ಇದರಲ್ಲಿ ಪ್ರಯತ್ನ ಮಾಡ್ತಾ ಇದ್ದಾರೆ. ಬಹಳ ಪ್ರಯತ್ನ ಮಾಡ್ತಾ ಇದ್ದಾರೆ ಎಂದು ಹೇಳಿದರು.

ನಮ್ಮ ಶಾಸಕರು ಯಾರೇ ಆಗಲಿ, ಯಾವುದೇ ರೀತಿಯ ಹೇಳಿಕೆಗಳನ್ನು ಕೊಡಬಾರದು. ಪಕ್ಷದ ಆಂತರಿಕ ವಿಚಾರ, ಅಧಿಕಾರ ವಿಚಾರ ಯಾವುದೇ ಹೇಳಿಕೆಗಳನ್ನು ಕೊಡಬಾರದು. ಕೈಮುಗಿದು ಕೇಳಿಕೊಳ್ಳುತ್ತೇನೆ ಯಾವುದೇ ಹೇಳಿಕೆ ನೀಡಬೇಡಿ. ಪದೇ ಪದೇ ಈ ರೀತಿಯ ಹೇಳಿಕೆಗಳನ್ನು ಕೊಟ್ಟಲ್ಲಿ ನೋಟಿಸ್ ಕೊಡ್ತೇನೆ ಎಂದು ಡಿಕೆಶಿ ತಮ್ಮ ಶಾಸಕರಿಗೆ ಎಚ್ಚರಿಕೆ ನೀಡಿದರು.

 

lokesh

Recent Posts

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​…

2 hours ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

4 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

6 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

7 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

7 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

12 hours ago