ತುಮಕೂರು : ಕಾಂಗ್ರೆಸ್ಗೆ ಭರ್ಜರಿ ಬಹುಮತ ದೊರೆತಿದೆ. ಬರುವ ಬುಧವಾರ ಅಥವಾ ಗುರುವಾರ ಸರ್ಕಾರ ರಚಿಸುವ ಸಾಧ್ಯತೆಗಳಿದ್ದು, ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಕುತೂಹಲ ಮೂಡಿದೆ. ಸಿಎಂ ರೇಸ್ನಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇದ್ದು, ಗೊಂದಲ ಗೂಡಾಗಿದೆ. ಇದೀಗ ನಾನು ಸಿಎಂ ಆಗಲು ಸಿದ್ದರಾಮಯ್ಯ ಅವರು ಸಹಕರಿಸಬೇಕೆಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ಹೌದು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪಕ್ಷದ ವಿಚಾರದಲ್ಲಿ ನಾನು ಹಲವು ಬಾರಿ ಸೋತಿದ್ದೇನೆ. ನಾನು ಸೋತು ಸಿದ್ದರಾಮಯ್ಯಗೆ ಸಹಕಾರ ಕೊಟ್ಟಿದ್ದೇನೆ. ಈಗ ಸಿದ್ದರಾಮಯ್ಯನವರು ನನಗೆ ಸಹಕರಿಸುವ ವಿಶ್ವಾಸವಿದೆ. ಆರಂಭದಲ್ಲಿ ಮಂತ್ರಿ ಮಾಡದಿದ್ದಾಗ ತಾಳ್ಮೆಯಿಂದ ಇರಲಿಲ್ವಾ. ಆವಾಗ ನಾನು ಸಿದ್ದರಾಮಯ್ಯನವರಿಗೆ ಸಹಕಾರ ಕೊಟ್ಟಿದ್ದೇನೆ ಎನ್ನುವ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಅವರು ಸಹಕರಿಸಬೇಕೆಂದು ಹೇಳಿದ್ದಾರೆ.
ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕಾಡಸಿದ್ದೇಶ್ವರ ಮಠ ನಮಗೆ ಪುಣ್ಯ ಕ್ಷೇತ್ರ. ಪ್ರತಿ ಸಂದರ್ಭದಲ್ಲೂ ಶ್ರೀಗಳು ನಮಗೆ ಮಾರ್ಗದರ್ಶನ ನೀಡಿದ್ದಾರೆ. ನಾನು ಅಧಿಕಾರ ತೆಗೆದುಕೊಂಡಾಗಿನಿಂದಲೂ, ಯಾರಿಗೆ ಟಿಕೆಟ್ ಕೊಡಬೇಕು, ಯಾರಿಗೆ ಕೊಡಬಾರದು ಎಂಬ ತೀರ್ಮಾನವನ್ನು ಇಲ್ಲೇ ಮಾಡಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಜ್ಯಕ್ಕೆ ಒಳ್ಳೆಯದಾಗಲಿ ಅಂತ ಮಾರ್ಗದರ್ಶನ ಕೊಟ್ಟಿದ್ದಾರೆ. ಇನ್ಕಮ್ ಟ್ಯಾಕ್ಸ್, ಐಟಿ ರೇಡ್ ಆದಾಗಲೂ ನಾನು ಅಜ್ಜಯ್ಯನ ಮಾರ್ಗದರ್ಶನ ಪಡೆದಿದ್ದೆ. ಹೆಲಿಕಾಪ್ಟರ್ ದುರಂತ ಆದ ನಂತರ ಕೂಡ ನನ್ನ ಮಗಳು ಇಲ್ಲಿಗೆ ಬಂದು ಹೋದಳು. ನನಗೆ ಮಾನಸಿಕವಾಗಿ ಧೈರ್ಯ ಕೊಟ್ಟವರು ಅಜ್ಜಯ್ಯನವರು ಎಂದು ತಿಳಿಸಿದರು.
ನಾನು 134 ಕ್ಷೇತ್ರದಲ್ಲಿ ಗೆಲ್ಲಿಸು ಅಂತ ಕೇಳ್ಕೊಂಡಿದ್ದೆ. ಯಾರ ಹಂಗಿನಲ್ಲೂ ನಾವು ಅಧಿಕಾರ ಮಾಡಬಾರದು ಅಂತ ಬೇಡಿಕೊಂಡಿದ್ದೆ. ಹೆಣ್ಣು ಮಕ್ಕಳ ಬಗ್ಗೆ ಹೆಚ್ಚು ಚಿಂತನೆ ಮಾಡಬೇಕು ಎನ್ನುವ ಮಾರ್ಗದರ್ಶನ ಬಂದಿತ್ತು. ಹೀಗಾಗಿಯೇ ನಾವು ಗೃಹಲಕ್ಷ್ಮಿ, ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್ ಕೊಡೋ ಯೋಜನೆ ಮಾಡಿದ್ವಿ ಎಂದು ಮಾಹಿತಿ ನೀಡಿದರು.
ಅಜ್ಜಯ್ಯ ಆಶೀರ್ವಾದದಿಂದ ಇನ್ನೂ ಎತ್ತರಕ್ಕೆ ಹೋಗುವ ನಂಬಿಕೆ ಇದೆ. ದಿನೇಶ್ ಗುಂಡೂರಾವ್ ಅವರು ನೈತಿಕ ರಾಜೀನಾಮೆ ಕೊಟ್ಟಾಗ, ಸೋನಿಯಾ ಗಾಂಧಿ ಅವರು ನನ್ನ ಹೆಗಲಿಗೆ ಜವಾಬ್ದಾರಿ ಹೊರೆಸಿದರು. ನಾನು ಜೈಲಿಂದ ಹೊರಬರುತ್ತಲೇ ಅಧಿಕಾರ ಹಿಡಿದೆ. ಹಗಲು ರಾತ್ರಿ ದುಡಿದಿದ್ದೇನೆ ಎಂದು ತಿಳಿಸಿದ್ದಾರೆ.
ಚೆಲುವರಾಯಸ್ವಾಮಿ ಇಲ್ಲಿ ಬಂದಿದ್ದಾರೆ. ಅವರಿಗೆ ಒಂದು ಆತಂಕ ಇತ್ತು. ಮಂಡ್ಯದಲ್ಲಿ ಏನಾಗುತ್ತೋ ಏನೋ ಅನ್ನೋ ಆತಂಕ ಇತ್ತು. ಅವರಿಗೇ ಕೂಡ ಧೈರ್ಯ ತುಂಬಿದೆ. ಈಗ ಮಂಡ್ಯದಲ್ಲಿ ಕಾಂಗ್ರೆಸ್ಗೆ ಗೆಲುವಾಗಿದೆ. ಇದು ಮಂಡ್ಯ ಜನತೆಯ ಗೆಲುವು. ಮಂಡ್ಯ ಜಿಲ್ಲೆಯಲ್ಲೂ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದಿದೆ. ಇಲ್ಲಿಗೆ ಮಂಡ್ಯ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು ಬಂದಿದ್ದಾರೆ. ಇದು ಪ್ಲ್ಯಾನ್ ಅಲ್ಲ ಎಂದರು.
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…
ಟೆಹರಾನ್: ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ: ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…
ಟೆಹರಾನ್: ಕಳೆದ ಕೆಲ ದಿನಗಳಿಂದ ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್…
ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…