ತುಮಕೂರು : ಕಾಂಗ್ರೆಸ್ಗೆ ಭರ್ಜರಿ ಬಹುಮತ ದೊರೆತಿದೆ. ಬರುವ ಬುಧವಾರ ಅಥವಾ ಗುರುವಾರ ಸರ್ಕಾರ ರಚಿಸುವ ಸಾಧ್ಯತೆಗಳಿದ್ದು, ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಕುತೂಹಲ ಮೂಡಿದೆ. ಸಿಎಂ ರೇಸ್ನಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇದ್ದು, ಗೊಂದಲ ಗೂಡಾಗಿದೆ. ಇದೀಗ ನಾನು ಸಿಎಂ ಆಗಲು ಸಿದ್ದರಾಮಯ್ಯ ಅವರು ಸಹಕರಿಸಬೇಕೆಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ಹೌದು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪಕ್ಷದ ವಿಚಾರದಲ್ಲಿ ನಾನು ಹಲವು ಬಾರಿ ಸೋತಿದ್ದೇನೆ. ನಾನು ಸೋತು ಸಿದ್ದರಾಮಯ್ಯಗೆ ಸಹಕಾರ ಕೊಟ್ಟಿದ್ದೇನೆ. ಈಗ ಸಿದ್ದರಾಮಯ್ಯನವರು ನನಗೆ ಸಹಕರಿಸುವ ವಿಶ್ವಾಸವಿದೆ. ಆರಂಭದಲ್ಲಿ ಮಂತ್ರಿ ಮಾಡದಿದ್ದಾಗ ತಾಳ್ಮೆಯಿಂದ ಇರಲಿಲ್ವಾ. ಆವಾಗ ನಾನು ಸಿದ್ದರಾಮಯ್ಯನವರಿಗೆ ಸಹಕಾರ ಕೊಟ್ಟಿದ್ದೇನೆ ಎನ್ನುವ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಅವರು ಸಹಕರಿಸಬೇಕೆಂದು ಹೇಳಿದ್ದಾರೆ.
ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕಾಡಸಿದ್ದೇಶ್ವರ ಮಠ ನಮಗೆ ಪುಣ್ಯ ಕ್ಷೇತ್ರ. ಪ್ರತಿ ಸಂದರ್ಭದಲ್ಲೂ ಶ್ರೀಗಳು ನಮಗೆ ಮಾರ್ಗದರ್ಶನ ನೀಡಿದ್ದಾರೆ. ನಾನು ಅಧಿಕಾರ ತೆಗೆದುಕೊಂಡಾಗಿನಿಂದಲೂ, ಯಾರಿಗೆ ಟಿಕೆಟ್ ಕೊಡಬೇಕು, ಯಾರಿಗೆ ಕೊಡಬಾರದು ಎಂಬ ತೀರ್ಮಾನವನ್ನು ಇಲ್ಲೇ ಮಾಡಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಜ್ಯಕ್ಕೆ ಒಳ್ಳೆಯದಾಗಲಿ ಅಂತ ಮಾರ್ಗದರ್ಶನ ಕೊಟ್ಟಿದ್ದಾರೆ. ಇನ್ಕಮ್ ಟ್ಯಾಕ್ಸ್, ಐಟಿ ರೇಡ್ ಆದಾಗಲೂ ನಾನು ಅಜ್ಜಯ್ಯನ ಮಾರ್ಗದರ್ಶನ ಪಡೆದಿದ್ದೆ. ಹೆಲಿಕಾಪ್ಟರ್ ದುರಂತ ಆದ ನಂತರ ಕೂಡ ನನ್ನ ಮಗಳು ಇಲ್ಲಿಗೆ ಬಂದು ಹೋದಳು. ನನಗೆ ಮಾನಸಿಕವಾಗಿ ಧೈರ್ಯ ಕೊಟ್ಟವರು ಅಜ್ಜಯ್ಯನವರು ಎಂದು ತಿಳಿಸಿದರು.
ನಾನು 134 ಕ್ಷೇತ್ರದಲ್ಲಿ ಗೆಲ್ಲಿಸು ಅಂತ ಕೇಳ್ಕೊಂಡಿದ್ದೆ. ಯಾರ ಹಂಗಿನಲ್ಲೂ ನಾವು ಅಧಿಕಾರ ಮಾಡಬಾರದು ಅಂತ ಬೇಡಿಕೊಂಡಿದ್ದೆ. ಹೆಣ್ಣು ಮಕ್ಕಳ ಬಗ್ಗೆ ಹೆಚ್ಚು ಚಿಂತನೆ ಮಾಡಬೇಕು ಎನ್ನುವ ಮಾರ್ಗದರ್ಶನ ಬಂದಿತ್ತು. ಹೀಗಾಗಿಯೇ ನಾವು ಗೃಹಲಕ್ಷ್ಮಿ, ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್ ಕೊಡೋ ಯೋಜನೆ ಮಾಡಿದ್ವಿ ಎಂದು ಮಾಹಿತಿ ನೀಡಿದರು.
ಅಜ್ಜಯ್ಯ ಆಶೀರ್ವಾದದಿಂದ ಇನ್ನೂ ಎತ್ತರಕ್ಕೆ ಹೋಗುವ ನಂಬಿಕೆ ಇದೆ. ದಿನೇಶ್ ಗುಂಡೂರಾವ್ ಅವರು ನೈತಿಕ ರಾಜೀನಾಮೆ ಕೊಟ್ಟಾಗ, ಸೋನಿಯಾ ಗಾಂಧಿ ಅವರು ನನ್ನ ಹೆಗಲಿಗೆ ಜವಾಬ್ದಾರಿ ಹೊರೆಸಿದರು. ನಾನು ಜೈಲಿಂದ ಹೊರಬರುತ್ತಲೇ ಅಧಿಕಾರ ಹಿಡಿದೆ. ಹಗಲು ರಾತ್ರಿ ದುಡಿದಿದ್ದೇನೆ ಎಂದು ತಿಳಿಸಿದ್ದಾರೆ.
ಚೆಲುವರಾಯಸ್ವಾಮಿ ಇಲ್ಲಿ ಬಂದಿದ್ದಾರೆ. ಅವರಿಗೆ ಒಂದು ಆತಂಕ ಇತ್ತು. ಮಂಡ್ಯದಲ್ಲಿ ಏನಾಗುತ್ತೋ ಏನೋ ಅನ್ನೋ ಆತಂಕ ಇತ್ತು. ಅವರಿಗೇ ಕೂಡ ಧೈರ್ಯ ತುಂಬಿದೆ. ಈಗ ಮಂಡ್ಯದಲ್ಲಿ ಕಾಂಗ್ರೆಸ್ಗೆ ಗೆಲುವಾಗಿದೆ. ಇದು ಮಂಡ್ಯ ಜನತೆಯ ಗೆಲುವು. ಮಂಡ್ಯ ಜಿಲ್ಲೆಯಲ್ಲೂ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದಿದೆ. ಇಲ್ಲಿಗೆ ಮಂಡ್ಯ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು ಬಂದಿದ್ದಾರೆ. ಇದು ಪ್ಲ್ಯಾನ್ ಅಲ್ಲ ಎಂದರು.
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…
ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ.ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್ ಜೊತೆಗೆ ಅವರ…
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…
ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…
ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…