BREAKING NEWS

ಸಿದ್ದರಾಮಯ್ಯ ಅವರು ಸಹಕರಿಸುವ ವಿಶ್ವಾಸವಿದೆ : ಪರೋಕ್ಷವಾಗಿ ಸಿಎಂ ಹುದ್ದೆ ಬಿಟ್ಟುಕೊಂಡುವಂತೆ ಡಿಕೆ ಶಿವಕುಮಾರ್ ಮನವಿ

ತುಮಕೂರು : ಕಾಂಗ್ರೆಸ್​ಗೆ ಭರ್ಜರಿ ಬಹುಮತ ದೊರೆತಿದೆ. ಬರುವ ಬುಧವಾರ ಅಥವಾ ಗುರುವಾರ ಸರ್ಕಾರ ರಚಿಸುವ ಸಾಧ್ಯತೆಗಳಿದ್ದು, ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಕುತೂಹಲ ಮೂಡಿದೆ. ಸಿಎಂ ರೇಸ್​​​ನಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇದ್ದು, ಗೊಂದಲ ಗೂಡಾಗಿದೆ. ಇದೀಗ ನಾನು ಸಿಎಂ ಆಗಲು ಸಿದ್ದರಾಮಯ್ಯ ಅವರು ಸಹಕರಿಸಬೇಕೆಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ಅವರು ​ ಹೇಳಿದ್ದಾರೆ. ಹೌದು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪಕ್ಷದ ವಿಚಾರದಲ್ಲಿ ನಾನು ಹಲವು ಬಾರಿ ಸೋತಿದ್ದೇನೆ. ನಾನು ಸೋತು ಸಿದ್ದರಾಮಯ್ಯಗೆ ಸಹಕಾರ ಕೊಟ್ಟಿದ್ದೇನೆ. ಈಗ ಸಿದ್ದರಾಮಯ್ಯನವರು ನನಗೆ ಸಹಕರಿಸುವ ವಿಶ್ವಾಸವಿದೆ. ಆರಂಭದಲ್ಲಿ ಮಂತ್ರಿ ಮಾಡದಿದ್ದಾಗ ತಾಳ್ಮೆಯಿಂದ ಇರಲಿಲ್ವಾ. ಆವಾಗ ನಾನು ಸಿದ್ದರಾಮಯ್ಯನವರಿಗೆ ಸಹಕಾರ ಕೊಟ್ಟಿದ್ದೇನೆ ಎನ್ನುವ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಅವರು ಸಹಕರಿಸಬೇಕೆಂದು ಹೇಳಿದ್ದಾರೆ.

ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕಾಡಸಿದ್ದೇಶ್ವರ ಮಠ ನಮಗೆ ಪುಣ್ಯ ಕ್ಷೇತ್ರ. ಪ್ರತಿ ಸಂದರ್ಭದಲ್ಲೂ ಶ್ರೀಗಳು ನಮಗೆ ಮಾರ್ಗದರ್ಶನ ನೀಡಿದ್ದಾರೆ. ನಾನು ಅಧಿಕಾರ ತೆಗೆದುಕೊಂಡಾಗಿನಿಂದಲೂ, ಯಾರಿಗೆ ಟಿಕೆಟ್ ಕೊಡಬೇಕು, ಯಾರಿಗೆ ಕೊಡಬಾರದು ಎಂಬ ತೀರ್ಮಾನವನ್ನು ಇಲ್ಲೇ ಮಾಡಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ. ರಾಜ್ಯಕ್ಕೆ ಒಳ್ಳೆಯದಾಗಲಿ ಅಂತ ಮಾರ್ಗದರ್ಶನ ಕೊಟ್ಟಿದ್ದಾರೆ. ಇನ್ಕಮ್ ಟ್ಯಾಕ್ಸ್, ಐಟಿ ರೇಡ್ ಆದಾಗಲೂ ನಾನು ಅಜ್ಜಯ್ಯನ ಮಾರ್ಗದರ್ಶನ ಪಡೆದಿದ್ದೆ. ಹೆಲಿಕಾಪ್ಟರ್ ದುರಂತ ಆದ ನಂತರ ಕೂಡ ನನ್ನ ಮಗಳು ಇಲ್ಲಿಗೆ ಬಂದು ಹೋದಳು. ನನಗೆ ಮಾನಸಿಕವಾಗಿ ಧೈರ್ಯ ಕೊಟ್ಟವರು ಅಜ್ಜಯ್ಯನವರು ಎಂದು ತಿಳಿಸಿದರು.

ನಾನು 134 ಕ್ಷೇತ್ರದಲ್ಲಿ ಗೆಲ್ಲಿಸು ಅಂತ ಕೇಳ್ಕೊಂಡಿದ್ದೆ. ಯಾರ ಹಂಗಿನಲ್ಲೂ ನಾವು ಅಧಿಕಾರ ಮಾಡಬಾರದು ಅಂತ ಬೇಡಿಕೊಂಡಿದ್ದೆ. ಹೆಣ್ಣು ಮಕ್ಕಳ ಬಗ್ಗೆ ಹೆಚ್ಚು ಚಿಂತನೆ ಮಾಡಬೇಕು ಎನ್ನುವ ಮಾರ್ಗದರ್ಶನ ಬಂದಿತ್ತು. ಹೀಗಾಗಿಯೇ ನಾವು ಗೃಹಲಕ್ಷ್ಮಿ, ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್ ಕೊಡೋ ಯೋಜನೆ ಮಾಡಿದ್ವಿ ಎಂದು ಮಾಹಿತಿ ನೀಡಿದರು.

ಅಜ್ಜಯ್ಯ ಆಶೀರ್ವಾದದಿಂದ ಇನ್ನೂ ಎತ್ತರಕ್ಕೆ ಹೋಗುವ ನಂಬಿಕೆ ಇದೆ. ದಿನೇಶ್ ಗುಂಡೂರಾವ್ ಅವರು ನೈತಿಕ ರಾಜೀನಾಮೆ ಕೊಟ್ಟಾಗ, ಸೋನಿಯಾ ಗಾಂಧಿ ಅವರು ನನ್ನ ಹೆಗಲಿಗೆ ಜವಾಬ್ದಾರಿ ಹೊರೆಸಿದರು. ನಾನು ಜೈಲಿಂದ ಹೊರಬರುತ್ತಲೇ ಅಧಿಕಾರ ಹಿಡಿದೆ. ಹಗಲು ರಾತ್ರಿ ದುಡಿದಿದ್ದೇನೆ ಎಂದು ತಿಳಿಸಿದ್ದಾರೆ.

ಚೆಲುವರಾಯಸ್ವಾಮಿ ಇಲ್ಲಿ ಬಂದಿದ್ದಾರೆ. ಅವರಿಗೆ ಒಂದು ಆತಂಕ ಇತ್ತು. ಮಂಡ್ಯದಲ್ಲಿ ಏನಾಗುತ್ತೋ ಏನೋ ಅನ್ನೋ ಆತಂಕ ಇತ್ತು. ಅವರಿಗೇ ಕೂಡ ಧೈರ್ಯ ತುಂಬಿದೆ. ಈಗ ಮಂಡ್ಯದಲ್ಲಿ ಕಾಂಗ್ರೆಸ್​ಗೆ ಗೆಲುವಾಗಿದೆ. ಇದು ಮಂಡ್ಯ ಜನತೆಯ ಗೆಲುವು. ಮಂಡ್ಯ ಜಿಲ್ಲೆಯಲ್ಲೂ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದಿದೆ. ಇಲ್ಲಿಗೆ ಮಂಡ್ಯ ಜಿಲ್ಲೆಯ ಎಲ್ಲಾ ಕಾಂಗ್ರೆಸ್​ ಶಾಸಕರು ಬಂದಿದ್ದಾರೆ. ಇದು ಪ್ಲ್ಯಾನ್ ಅಲ್ಲ ಎಂದರು.

lokesh

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

42 mins ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

10 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago