ಮೈಸೂರು: ಮೈಸೂರಿನ ರಾಜವಂಶಸ್ಥರಾದ ರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರಾಜಕೀಯಕ್ಕೆ ಬರುವುದಾದರೇ ನನ್ನ ಸ್ವಾಗತವಿದೆ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಅರಮನೆಯಿಂದ ಬೀದಿಗೆ ಬಂದು ಜನರ ಕಷ್ಟಗಳಿಗೆ ಸ್ಪಂದಿಸಿದರೇ ನಾನು ಒಬ್ಬ ಕಾರ್ಯಕರ್ತನಾಗಿ ಅವರೊಂದಿಗೆ ನಿಂತು ಕೆಲಸ ಮಾಡುತ್ತೇನೆ. ಅರಮನೆಯಲ್ಲಿ ಎಸಿ ವ್ಯವಸ್ಥೆಯೊಳಗಿದ್ದು, ಬೀದಿಗೆ ಬಂದು ಜನರೊಂದಿಗೆ ಬೆರೆಯುವುದಾದರೆ ನನಗೆ ಸಂತೋಷವಿದೆ.
ಯದುವೀರ್ ಅವರ ರಾಜಕೀಯ ಪ್ರವೇಶದಿಂದ ರಾಜವಂಶಸ್ಥರು ಮತ್ತು ಸರ್ಕಾರದ ನಡುವಿನ ವ್ಯಾಜ್ಯಗಳು ಇತ್ಯರ್ಥವಾಗುತ್ತದೆ. ಜನರ ಎಲ್ಲಾ ಕಷ್ಟಗಳು ಬಗೆ ಹರಿಯುತ್ತದೆ ಎಂದು ಹೇಳುವ ಮೂಲಕ ಯದುವೀರ್ ಅವರ ರಾಜಕೀಯ ಪ್ರವೇಶ ಕುರಿತು ಪರೋಕ್ಷವಾಗಿ ಕಿಡಿಕಾರಿದ್ದಾರೆ.
ಈ ಹಿಂದೆ ಚಾಮುಂಡಿಬೆಟ್ಟಕ್ಕೆ ಹೊಸ ಪೈಪ್ ಲೈನ್ ಆಗಲು ಪ್ರಮೋದಾದೇವಿ ಒಡೆಯರ್ ಬಿಟ್ಟಿರಲಿಲ್ಲ. ಮುಂದೆ ಹೊಸ ಪೈಪ್ ಲೈನ್ ಆಗುತ್ತೆ. ಮೈಸೂರಿನ ಲಲಿತ ಮಹಲ್ ಅರಮನೆ, ಸಮೀಪದ ಹೆಲಿಪ್ಯಾಡ್ ಜಾಗ, ಸರ್ವೇ ನಂಬರ್ 4ರ ಸುಮಾರು 1200 ಎಕರೆ ಜಾಗ, ವಿಜಯಶ್ರೀಪುರದ ಮನೆಗಳು, ವಸ್ತು ಪ್ರದರ್ಶನ ಪ್ರಾಧಿಕಾರದ ಜಾಗ ಎಲ್ಲದರ ಬಗ್ಗೆ ವ್ಯಾಜ್ಯಗಳು ಇವೆ. ಯದುವೀರ್ ಜನಪ್ರತಿನಿಧಿಯಾದರೆ ಆ ಎಲ್ಲ ಜಾಗವನ್ನೂ ಜನರಿಗೆ ಬಿಟ್ಟು ಕೊಡಬೇಕಾಗುತ್ತೆದೆ. ಕ್ಷೇತ್ರದ ಹಿತದೃಷ್ಠಿಯಿಂದ ಯದುವೀರ್ ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿಂದು ಹೇಳಿಕೆ ನೀಡಿದ್ದಾರೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…