ಮೈಸೂರು: ಮೈಸೂರಿನ ರಾಜವಂಶಸ್ಥರಾದ ರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರಾಜಕೀಯಕ್ಕೆ ಬರುವುದಾದರೇ ನನ್ನ ಸ್ವಾಗತವಿದೆ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಅರಮನೆಯಿಂದ ಬೀದಿಗೆ ಬಂದು ಜನರ ಕಷ್ಟಗಳಿಗೆ ಸ್ಪಂದಿಸಿದರೇ ನಾನು ಒಬ್ಬ ಕಾರ್ಯಕರ್ತನಾಗಿ ಅವರೊಂದಿಗೆ ನಿಂತು ಕೆಲಸ ಮಾಡುತ್ತೇನೆ. ಅರಮನೆಯಲ್ಲಿ ಎಸಿ ವ್ಯವಸ್ಥೆಯೊಳಗಿದ್ದು, ಬೀದಿಗೆ ಬಂದು ಜನರೊಂದಿಗೆ ಬೆರೆಯುವುದಾದರೆ ನನಗೆ ಸಂತೋಷವಿದೆ.
ಯದುವೀರ್ ಅವರ ರಾಜಕೀಯ ಪ್ರವೇಶದಿಂದ ರಾಜವಂಶಸ್ಥರು ಮತ್ತು ಸರ್ಕಾರದ ನಡುವಿನ ವ್ಯಾಜ್ಯಗಳು ಇತ್ಯರ್ಥವಾಗುತ್ತದೆ. ಜನರ ಎಲ್ಲಾ ಕಷ್ಟಗಳು ಬಗೆ ಹರಿಯುತ್ತದೆ ಎಂದು ಹೇಳುವ ಮೂಲಕ ಯದುವೀರ್ ಅವರ ರಾಜಕೀಯ ಪ್ರವೇಶ ಕುರಿತು ಪರೋಕ್ಷವಾಗಿ ಕಿಡಿಕಾರಿದ್ದಾರೆ.
ಈ ಹಿಂದೆ ಚಾಮುಂಡಿಬೆಟ್ಟಕ್ಕೆ ಹೊಸ ಪೈಪ್ ಲೈನ್ ಆಗಲು ಪ್ರಮೋದಾದೇವಿ ಒಡೆಯರ್ ಬಿಟ್ಟಿರಲಿಲ್ಲ. ಮುಂದೆ ಹೊಸ ಪೈಪ್ ಲೈನ್ ಆಗುತ್ತೆ. ಮೈಸೂರಿನ ಲಲಿತ ಮಹಲ್ ಅರಮನೆ, ಸಮೀಪದ ಹೆಲಿಪ್ಯಾಡ್ ಜಾಗ, ಸರ್ವೇ ನಂಬರ್ 4ರ ಸುಮಾರು 1200 ಎಕರೆ ಜಾಗ, ವಿಜಯಶ್ರೀಪುರದ ಮನೆಗಳು, ವಸ್ತು ಪ್ರದರ್ಶನ ಪ್ರಾಧಿಕಾರದ ಜಾಗ ಎಲ್ಲದರ ಬಗ್ಗೆ ವ್ಯಾಜ್ಯಗಳು ಇವೆ. ಯದುವೀರ್ ಜನಪ್ರತಿನಿಧಿಯಾದರೆ ಆ ಎಲ್ಲ ಜಾಗವನ್ನೂ ಜನರಿಗೆ ಬಿಟ್ಟು ಕೊಡಬೇಕಾಗುತ್ತೆದೆ. ಕ್ಷೇತ್ರದ ಹಿತದೃಷ್ಠಿಯಿಂದ ಯದುವೀರ್ ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿಂದು ಹೇಳಿಕೆ ನೀಡಿದ್ದಾರೆ.
ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್ವೊಂದು…
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…
ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…
ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…