BREAKING NEWS

ರಾಜವಂಶಸ್ಥರು ರಾಜಕೀಯಕ್ಕೆ ಬರುವುದಾದರೆ ಸ್ವಾಗತ: ಸಂಸದ ಪ್ರತಾಪ್‌ ಸಿಂಹ

ಮೈಸೂರು: ಮೈಸೂರಿನ ರಾಜವಂಶಸ್ಥರಾದ ರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ರಾಜಕೀಯಕ್ಕೆ ಬರುವುದಾದರೇ ನನ್ನ ಸ್ವಾಗತವಿದೆ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಅರಮನೆಯಿಂದ ಬೀದಿಗೆ ಬಂದು ಜನರ ಕಷ್ಟಗಳಿಗೆ ಸ್ಪಂದಿಸಿದರೇ ನಾನು ಒಬ್ಬ ಕಾರ್ಯಕರ್ತನಾಗಿ ಅವರೊಂದಿಗೆ ನಿಂತು ಕೆಲಸ ಮಾಡುತ್ತೇನೆ. ಅರಮನೆಯಲ್ಲಿ ಎಸಿ ವ್ಯವಸ್ಥೆಯೊಳಗಿದ್ದು, ಬೀದಿಗೆ ಬಂದು ಜನರೊಂದಿಗೆ ಬೆರೆಯುವುದಾದರೆ ನನಗೆ ಸಂತೋಷವಿದೆ.

ಯದುವೀರ್‌ ಅವರ ರಾಜಕೀಯ ಪ್ರವೇಶದಿಂದ ರಾಜವಂಶಸ್ಥರು ಮತ್ತು ಸರ್ಕಾರದ ನಡುವಿನ ವ್ಯಾಜ್ಯಗಳು ಇತ್ಯರ್ಥವಾಗುತ್ತದೆ. ಜನರ ಎಲ್ಲಾ ಕಷ್ಟಗಳು ಬಗೆ ಹರಿಯುತ್ತದೆ ಎಂದು ಹೇಳುವ ಮೂಲಕ ಯದುವೀರ್‌ ಅವರ ರಾಜಕೀಯ ಪ್ರವೇಶ ಕುರಿತು ಪರೋಕ್ಷವಾಗಿ ಕಿಡಿಕಾರಿದ್ದಾರೆ.

ಈ ಹಿಂದೆ ಚಾಮುಂಡಿಬೆಟ್ಟಕ್ಕೆ ಹೊಸ ಪೈಪ್ ಲೈನ್ ಆಗಲು ಪ್ರಮೋದಾದೇವಿ ಒಡೆಯರ್ ಬಿಟ್ಟಿರಲಿಲ್ಲ. ಮುಂದೆ ಹೊಸ ಪೈಪ್ ಲೈನ್ ಆಗುತ್ತೆ. ಮೈಸೂರಿನ ಲಲಿತ ಮಹಲ್ ಅರಮನೆ, ಸಮೀಪದ ಹೆಲಿಪ್ಯಾಡ್ ಜಾಗ, ಸರ್ವೇ ನಂಬರ್ 4ರ ಸುಮಾರು 1200 ಎಕರೆ ಜಾಗ, ವಿಜಯಶ್ರೀಪುರದ ಮನೆಗಳು, ವಸ್ತು ಪ್ರದರ್ಶನ ಪ್ರಾಧಿಕಾರದ ಜಾಗ ಎಲ್ಲದರ ಬಗ್ಗೆ ವ್ಯಾಜ್ಯಗಳು ಇವೆ. ಯದುವೀರ್ ಜನಪ್ರತಿನಿಧಿಯಾದರೆ ಆ ಎಲ್ಲ ಜಾಗವನ್ನೂ ಜನರಿಗೆ ಬಿಟ್ಟು ಕೊಡಬೇಕಾಗುತ್ತೆದೆ. ಕ್ಷೇತ್ರದ ಹಿತದೃಷ್ಠಿಯಿಂದ ಯದುವೀರ್ ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇನೆ ಎಂದು ಸಂಸದ ಪ್ರತಾಪ್‌ ಸಿಂಹ ಮೈಸೂರಿನಲ್ಲಿಂದು ಹೇಳಿಕೆ ನೀಡಿದ್ದಾರೆ.

andolanait

Recent Posts

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

6 mins ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

16 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

35 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

58 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago