BREAKING NEWS

ರಾಜವಂಶಸ್ಥರು ರಾಜಕೀಯಕ್ಕೆ ಬರುವುದಾದರೆ ಸ್ವಾಗತ: ಸಂಸದ ಪ್ರತಾಪ್‌ ಸಿಂಹ

ಮೈಸೂರು: ಮೈಸೂರಿನ ರಾಜವಂಶಸ್ಥರಾದ ರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ರಾಜಕೀಯಕ್ಕೆ ಬರುವುದಾದರೇ ನನ್ನ ಸ್ವಾಗತವಿದೆ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಅರಮನೆಯಿಂದ ಬೀದಿಗೆ ಬಂದು ಜನರ ಕಷ್ಟಗಳಿಗೆ ಸ್ಪಂದಿಸಿದರೇ ನಾನು ಒಬ್ಬ ಕಾರ್ಯಕರ್ತನಾಗಿ ಅವರೊಂದಿಗೆ ನಿಂತು ಕೆಲಸ ಮಾಡುತ್ತೇನೆ. ಅರಮನೆಯಲ್ಲಿ ಎಸಿ ವ್ಯವಸ್ಥೆಯೊಳಗಿದ್ದು, ಬೀದಿಗೆ ಬಂದು ಜನರೊಂದಿಗೆ ಬೆರೆಯುವುದಾದರೆ ನನಗೆ ಸಂತೋಷವಿದೆ.

ಯದುವೀರ್‌ ಅವರ ರಾಜಕೀಯ ಪ್ರವೇಶದಿಂದ ರಾಜವಂಶಸ್ಥರು ಮತ್ತು ಸರ್ಕಾರದ ನಡುವಿನ ವ್ಯಾಜ್ಯಗಳು ಇತ್ಯರ್ಥವಾಗುತ್ತದೆ. ಜನರ ಎಲ್ಲಾ ಕಷ್ಟಗಳು ಬಗೆ ಹರಿಯುತ್ತದೆ ಎಂದು ಹೇಳುವ ಮೂಲಕ ಯದುವೀರ್‌ ಅವರ ರಾಜಕೀಯ ಪ್ರವೇಶ ಕುರಿತು ಪರೋಕ್ಷವಾಗಿ ಕಿಡಿಕಾರಿದ್ದಾರೆ.

ಈ ಹಿಂದೆ ಚಾಮುಂಡಿಬೆಟ್ಟಕ್ಕೆ ಹೊಸ ಪೈಪ್ ಲೈನ್ ಆಗಲು ಪ್ರಮೋದಾದೇವಿ ಒಡೆಯರ್ ಬಿಟ್ಟಿರಲಿಲ್ಲ. ಮುಂದೆ ಹೊಸ ಪೈಪ್ ಲೈನ್ ಆಗುತ್ತೆ. ಮೈಸೂರಿನ ಲಲಿತ ಮಹಲ್ ಅರಮನೆ, ಸಮೀಪದ ಹೆಲಿಪ್ಯಾಡ್ ಜಾಗ, ಸರ್ವೇ ನಂಬರ್ 4ರ ಸುಮಾರು 1200 ಎಕರೆ ಜಾಗ, ವಿಜಯಶ್ರೀಪುರದ ಮನೆಗಳು, ವಸ್ತು ಪ್ರದರ್ಶನ ಪ್ರಾಧಿಕಾರದ ಜಾಗ ಎಲ್ಲದರ ಬಗ್ಗೆ ವ್ಯಾಜ್ಯಗಳು ಇವೆ. ಯದುವೀರ್ ಜನಪ್ರತಿನಿಧಿಯಾದರೆ ಆ ಎಲ್ಲ ಜಾಗವನ್ನೂ ಜನರಿಗೆ ಬಿಟ್ಟು ಕೊಡಬೇಕಾಗುತ್ತೆದೆ. ಕ್ಷೇತ್ರದ ಹಿತದೃಷ್ಠಿಯಿಂದ ಯದುವೀರ್ ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇನೆ ಎಂದು ಸಂಸದ ಪ್ರತಾಪ್‌ ಸಿಂಹ ಮೈಸೂರಿನಲ್ಲಿಂದು ಹೇಳಿಕೆ ನೀಡಿದ್ದಾರೆ.

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

2 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

9 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

9 hours ago