BREAKING NEWS

ನಮಗೆ ಎಲ್ಲೂ ಕೂಡ ಆಹ್ವಾನ ಇಲ್ಲ, ಆ ಬಗ್ಗೆ ತಲೆ ಕೆಡಿಸಿಕೊಳ್ಳೋದು ಇಲ್ಲ: ಹೆಚ್‌ಡಿಕೆ

ಬೆಂಗಳೂರು: ಎನ್ ಡಿಎ ಮೈತ್ರಿಕೂಟವನ್ನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮಣಿಸಲು ಮಹಾ ಘಟಬಂಧನ ಹೆಸರಿನಲ್ಲಿ ರಾಷ್ಟ್ರಮಟ್ಟದ ಮತ್ತು ರಾಜ್ಯಗಳ ಘಟಾನುಘಟಿ ನಾಯಕರ ಸಭೆ ಇಂದು ಮತ್ತು ನಾಳೆ ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್ ನಲ್ಲಿ ನಡೆಯುತ್ತಿದ್ದು ಸಭೆಗೆ ಕರ್ನಾಟಕದ ಪ್ರಾದೇಶಿಕ ಪಕ್ಷ ಜಾತ್ಯತೀತ ಜನತಾದಳ ಭಾಗವಹಿಸುತ್ತಿಲ್ಲ, ಅದಕ್ಕೆ ಆಹ್ವಾನ ನೀಡಿಲ್ಲ ಎಂದೆಲ್ಲ ಸುದ್ದಿಯಾಗಿತ್ತು.

ಈ ಬಗ್ಗೆ ಸ್ವತಃ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆಗೆ ನಮಗೆ ಆಹ್ವಾನವನ್ನು ನೀಡಿಲ್ಲ, ನಾಳೆಯ ಎನ್ ಡಿಎ ಮೈತ್ರಿಕೂಟ ಸಭೆಗೂ ಆಹ್ವಾನವಿಲ್ಲ, ನೋಡೋಣ ಮುಂದೆ ಏನಾಗುತ್ತದೆ ಎಂದು, ನಾವು ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ ಎಂದಿದ್ದಾರೆ.

ಮಹಾಘಟಬಂಧನ್​​ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ ಅವರು. ಮಹಾಘಟಬಂದನ್ ವ್ಯವಸ್ಥಾಪಕರು ಜೆಡಿಎಸ್ ಮುಳುಗಿಹೋಗಿದೆ ಅನ್ನುವ ಭ್ರಮೆಯಲ್ಲಿದ್ದಾರೆ. ಆಹ್ವಾನ ಕೊಟ್ಟರೊ, ಇಲ್ಲವೋ ಅನ್ನೊದಕ್ಕೆ ತಲೆ ಕೂಡ ಕೆಡಿಸಿಕೊಂಡಿಲ್ಲ. ನಮಗೆ ಎಲ್ಲೂ ಕೂಡ ಆಹ್ವಾನ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಹೇಳಿದರು.

ನಮ್ಮ ಪಕ್ಷದ ಸಂಘಟನೆ ಹೇಗೆ ಮಾಡಬೇಕು, ನಾಡಿನ ಜನತೆ ಸಮಸ್ಯೆಯನ್ನು ಯಾವ ರೀತಿ ಬಗೆಹರಿಸಬೇಕೋ ಅದರ ಬಗ್ಗೆ ಚಿಂತಿಸಿ ಕಾರ್ಯಪ್ರವೃತ್ತರಾಗುತ್ತೇವೆ. ಈಗಾಗಲೇ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳಿಂದ ತಿಳಿದುಕೊಂಡೆ. ಅದರ ಬಗ್ಗೆ ಸರ್ಕಾರಕ್ಕೆ ಚಿಂತೆಯಿಲ್ಲ, ಮಹಾಘಟ ಬಂಧನ ಎಂದು ರಸ್ತೆಯುದ್ಧಕ್ಕೂ ದೊಡ್ಡ ದೊಡ್ಡ ಕಟೌಟ್, ಬ್ಯಾನರ್ ಹಾಕಿ ಕೋಟಿಗಟ್ಟಲೆ ಹಣ ಖರ್ಚು ಮಾಡಿ ಯಾರೂ ಮಾಡದ ಸಾಧನೆ ಮಾಡಿದ್ದೇವೆ ಎಂದು ತೋರಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ಏನಾದರೂ ಪ್ರಯೋಜನವಿದೆಯೇ ಎಂದು ಕುಮಾರಸ್ವಾಮಿ ಕೇಳಿದರು.

ರೈತರಿಗೆ ಏನು ಸಂದೇಶ ಕೊಡುತ್ತಿದ್ದಾರೆ?: ಇವತ್ತಿನವರೆಗೆ ರಾಜ್ಯದಲ್ಲಿ 42 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ರೈತರ ಸಂಕಷ್ಟಕ್ಕೆ ಮಿಡಿಯುವ ಬಗ್ಗೆ ಸರ್ಕಾರ ಒಂದಾದರೂ ಸಂದೇಶ ಕೊಟ್ಟಿದೆಯೇ? ರೈತರ ಬಗ್ಗೆ ಸರ್ಕಾರ ಯಾವುದೇ ಹೇಳಿಕೆಯನ್ನೂ ನೀಡಿಲ್ಲ, ಇದು ಇಂದಿನ ಪರಿಸ್ಥಿತಿಯಾಗಿದೆ ಎಂದರು.

ನಮ್ಮ ಪಕ್ಷಕ್ಕೆ ಕಾರ್ಯಕರ್ತರಿದ್ದಾರೆ. ಒಂದೊಂದು ಚುನಾವಣೆಯಲ್ಲಿ ಒಂದೊಂದು ರೀತಿ ನಾಡಿನ ಜನತೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಮ್ಮ ಪಕ್ಷ ಮೊದಲಿನಿಂದಲೂ ಹೋರಾಟ ನಡೆಸಿಕೊಂಡು ಬಂದಿದೆ. ಇಂತಹ ಸಭೆಗಳೆಲ್ಲ ಪ್ರಿಮೆಚ್ಯೂರ್ ಆಗಿದ್ದು, ಇನ್ನೂ ಏಳೆಂಟು ತಿಂಗಳು ಚುನಾವಣೆಗೆ ಬಾಕಿಯಿದೆ, ನೋಡೋಣ ಏನೆಲ್ಲಾ ಆಗುತ್ತದೆ ಎಂದು ಹೇಳಿದ ಕುಮಾರಸ್ವಾಮಿ ಎನ್ ಡಿಎ ಸಭೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

13 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

13 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

14 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

19 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

19 hours ago