ಕಲಬುರಗಿ : ಕಾಂಗ್ರೆಸ್ ವೈಜ್ಞಾನಿಕ ನೆಲಗಟ್ಟಿನಲ್ಲಿ ಅಚಲ ನಂಬಿಕೆ ಇಟ್ಟುಕೊಂಡಿದೆ. ನಾವು ಬಿಜೆಪಿಯವರ ರೀತಿ ಮೂಢನಂಬಿಕೆ ಇಟ್ಟುಕೊಂಡಿಲ್ಲ. ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಜಾಗ ನೀಡಿದ್ದು ಕಾಂಗ್ರೆಸ್ ಸರ್ಕಾರ. ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು ತಿನ್ನುತ್ತಿದ್ದಾರೆ. ಚಂದ್ರಯಾನದ ಬಹುತೇಕ ವಿಜ್ಞಾನಿಗಳು ಹಿಂದುಳಿದ ವರ್ಗದವರು. ಅಧಿಕಾರ ಬಂದಾಗ ಕೆಲವೇ ಸಮುದಾಯ ಅಧಿಕಾರ ಅನುಭವಿಸುತ್ತಿದೆ. ಎಲ್ಲಾ ವರ್ಗದವರಿಗೂ ಅಧಿಕಾರ ಸಿಗುವಂತಾಗಲಿ ಎಂದು ವಿಧಾನ್ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಒನ್ ನೇಷನ್ ಒನ್ ಎಲೆಕ್ಷನ್ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿ ಬಂದ ಮೇಲೆ ಘೋಷಣೆಗಳಿಗೆ ಏನು ಕಡಿಮೆ ಇಲ್ಲ. ರಾಷ್ಟ್ರದಲ್ಲಿನ ವೈವಿದ್ಯತೆಯನ್ನು ಹಾಳು ಮಾಡುತ್ತಿದ್ದಾರೆ. ವಿವೇಕಾನಂದರ ಆಶಯದ ವಿರುದ್ಧ ಬಿಜೆಪಿ ನಿರ್ಧಾರ ಕೈಗೊಳ್ಳುತ್ತದೆ. ಮುಂದೆ ಒನ್ ನೇಷನ್ ಒನ್ ಲೀಡರ್ ಅಂದರೂ ಅನ್ನಬಹುದು. ದೇಶದಲ್ಲಿ ಚುನಾವಣೆಯನ್ನು ಇಡಿ ಬಳಸದೆ ನಡೆಸಬೇಕಿದೆ ಎಂದರು.
ಇನ್ನು ತಮಗೆ ಅವರಿಗೆ ಮಂತ್ರಿಸ್ಥಾನ ಸಿಗದೆ ಇರುವ ವಿಚಾರವಾಗಿ ಮಾತನಾಡಿದ ಅವರು ನಾನು ಪಕ್ಕಾ ಕಾಂಗ್ರೆಸ್ನವನು. ನನ್ನ ಹೋರಾಟ ನನ್ನ ಮಂತ್ರಿ ಮಾಡಿಲ್ಲ ಅಂತ ಅಲ್ಲ. ಸಣ್ಣ ಸಮುದಾಯಗಳಿಗೆ ಅವಕಾಶ ಸಿಗಬೇಕು ಅನ್ನೋದು ನಮ್ಮ ಹೋರಾಟ. ಅದಕ್ಕಾಗಿ ನಾನು ಬೀದಿಗಳಿದು ಹೋರಾಟಕ್ಕೂ ಕೂಡಾ ಸಿದ್ದನಿದ್ದೇನೆ. ಇಂದಿರಾಗಾಂಧಿ ಅವರನ್ನು ನೋಡಿ ಇಂದಿನವರು ಕಲಿಬೇಕು. ಜವಾನನಿಂದ ದಿವಾನವರಗೆ ಒಂದೇ ಜಾತಿಯವರನ್ನು ಹಾಕಿಕೊಳ್ಳಲು ಆಗಲ್ಲ. ಎಲ್ಲ ವರ್ಗದವರಿಗೂ ಅವಕಾಶ ನೀಡಬೇಕು ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಸವರಾಜ್ ರಾಯರೆಡ್ಡಿ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು ರಾಯರೆಡ್ಡಿ, ಸಿದ್ದರಾಮಯ್ಯನವರ ಖಾಸಗಿ ಸ್ನೇಹಿತರು. ಹೀಗಾಗಿ ಅವರ ಪತ್ರದ ಬಗ್ಗೆ ಅವರಿಗೇ ಕೇಳಬೇಕು. ಬಿ.ಎಲ್ ಸಂತೋಷ. ಆಪರೇಷನ್ ಕಮಲದಲ್ಲಿ ಡಾಕ್ಟರೇಟ್ ತಗೆದುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…