BREAKING NEWS

ನಾವು ಬಿಜೆಪಿಯವರ ರೀತಿ ಮೂಢನಂಬಿಕೆ ಇಟ್ಟುಕೊಂಡಿಲ್ಲ : ಬಿಕೆ ಹರಿಪ್ರಸಾದ್​

ಕಲಬುರಗಿ : ಕಾಂಗ್ರೆಸ್ ವೈಜ್ಞಾನಿಕ ನೆಲಗಟ್ಟಿನಲ್ಲಿ ಅಚಲ ನಂಬಿಕೆ ಇಟ್ಟುಕೊಂಡಿದೆ. ನಾವು ಬಿಜೆಪಿಯವರ ರೀತಿ ಮೂಢನಂಬಿಕೆ ಇಟ್ಟುಕೊಂಡಿಲ್ಲ. ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಜಾಗ ನೀಡಿದ್ದು ಕಾಂಗ್ರೆಸ್ ಸರ್ಕಾರ. ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು ತಿನ್ನುತ್ತಿದ್ದಾರೆ. ಚಂದ್ರಯಾನದ ಬಹುತೇಕ ವಿಜ್ಞಾನಿಗಳು ಹಿಂದುಳಿದ ವರ್ಗದವರು. ಅಧಿಕಾರ ಬಂದಾಗ ಕೆಲವೇ ಸಮುದಾಯ ಅಧಿಕಾರ ಅನುಭವಿಸುತ್ತಿದೆ. ಎಲ್ಲಾ ವರ್ಗದವರಿಗೂ ಅಧಿಕಾರ ಸಿಗುವಂತಾಗಲಿ ಎಂದು ವಿಧಾನ್ ಪರಿಷತ್​ ಸದಸ್ಯ ಬಿ.ಕೆ.ಹರಿಪ್ರಸಾದ್​ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಒನ್ ನೇಷನ್ ಒನ್ ಎಲೆಕ್ಷನ್ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿ ಬಂದ ಮೇಲೆ ಘೋಷಣೆಗಳಿಗೆ ಏನು ಕಡಿಮೆ ಇಲ್ಲ. ರಾಷ್ಟ್ರದಲ್ಲಿನ ವೈವಿದ್ಯತೆಯನ್ನು ಹಾಳು ಮಾಡುತ್ತಿದ್ದಾರೆ. ವಿವೇಕಾನಂದರ ಆಶಯದ ವಿರುದ್ಧ ಬಿಜೆಪಿ ನಿರ್ಧಾರ ಕೈಗೊಳ್ಳುತ್ತದೆ. ಮುಂದೆ ಒನ್ ನೇಷನ್ ಒನ್ ಲೀಡರ್ ಅಂದರೂ ಅನ್ನಬಹುದು. ದೇಶದಲ್ಲಿ ಚುನಾವಣೆಯನ್ನು ಇಡಿ ಬಳಸದೆ ನಡೆಸಬೇಕಿದೆ ಎಂದರು.

ಇನ್ನು ತಮಗೆ ಅವರಿಗೆ ಮಂತ್ರಿಸ್ಥಾನ ಸಿಗದೆ ಇರುವ ವಿಚಾರವಾಗಿ ಮಾತನಾಡಿದ ಅವರು ನಾನು ಪಕ್ಕಾ ಕಾಂಗ್ರೆಸ್​ನವನು. ನನ್ನ ಹೋರಾಟ ನನ್ನ ಮಂತ್ರಿ ಮಾಡಿಲ್ಲ ಅಂತ ಅಲ್ಲ. ಸಣ್ಣ ಸಮುದಾಯಗಳಿಗೆ ಅವಕಾಶ‌ ಸಿಗಬೇಕು ಅನ್ನೋದು ನಮ್ಮ ಹೋರಾಟ. ಅದಕ್ಕಾಗಿ ನಾನು ಬೀದಿಗಳಿದು ಹೋರಾಟಕ್ಕೂ ಕೂಡಾ ಸಿದ್ದನಿದ್ದೇನೆ. ಇಂದಿರಾಗಾಂಧಿ ಅವರನ್ನು ನೋಡಿ ಇಂದಿನವರು ಕಲಿಬೇಕು. ಜವಾನನಿಂದ ದಿವಾನವರಗೆ ಒಂದೇ ಜಾತಿಯವರನ್ನು ಹಾಕಿಕೊಳ್ಳಲು ಆಗಲ್ಲ. ಎಲ್ಲ ವರ್ಗದವರಿಗೂ ಅವಕಾಶ ನೀಡಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಸವರಾಜ್ ರಾಯರೆಡ್ಡಿ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು ರಾಯರೆಡ್ಡಿ, ಸಿದ್ದರಾಮಯ್ಯನವರ ಖಾಸಗಿ ಸ್ನೇಹಿತರು. ಹೀಗಾಗಿ ಅವರ ಪತ್ರದ ಬಗ್ಗೆ ಅವರಿಗೇ ಕೇಳಬೇಕು. ಬಿ.ಎಲ್ ಸಂತೋಷ. ಆಪರೇಷನ್ ಕಮಲದಲ್ಲಿ ಡಾಕ್ಟರೇಟ್ ತಗೆದುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.

lokesh

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

31 mins ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

5 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

5 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

6 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

6 hours ago